AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beauty Parlour woman: ಫೇಸ್ ಬುಕ್ ನಲ್ಲಿ ಪರಿಚಯವಾಯ್ತ.. ಮುಂದೆ ಕ್ಲೋಸ್ ಆದರು.. ಅಲ್ಲಿಗೆ ಆ ಬ್ಯೂಟಿಷಿಯನ್ ಕತೆಯೂ ಕ್ಲೋಸ್ ಆಯ್ತು!

ಬ್ಯೂಟಿಷಿಯನ್ ಹತ್ಯೆ ಪ್ರಕರಣ ಬೇಧಿಸಲು ವಿಶೇಷ ಪೊಲೀಸ್​​ ಟೀಂ ಕಾರ್ಯಪ್ರವೃತ್ತವಾಗಿದೆ. ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರಾ? ಅಥವಾ... ಚಕ್ರವರ್ತಿ ಮೊದಲು ಚಾಕುವಿನಿಂದ ದುರ್ಗಾ ಪ್ರಶಾಂತಿಯನ್ನು ಕೊಂದನಾ?

Beauty Parlour woman: ಫೇಸ್ ಬುಕ್ ನಲ್ಲಿ ಪರಿಚಯವಾಯ್ತ.. ಮುಂದೆ ಕ್ಲೋಸ್ ಆದರು.. ಅಲ್ಲಿಗೆ ಆ ಬ್ಯೂಟಿಷಿಯನ್ ಕತೆಯೂ ಕ್ಲೋಸ್ ಆಯ್ತು!
ಫೇಸ್ ಬುಕ್ ನಲ್ಲಿ ಪರಿಚಯವಾಯ್ತ.. ಮುಂದೆ ಕ್ಲೋಸ್ ಆದರು.. ಆಮೇಲೆ
ಸಾಧು ಶ್ರೀನಾಥ್​
|

Updated on:Apr 19, 2023 | 1:27 PM

Share

ಚಿತ್ತೂರಿನಲ್ಲಿ (Chittoor) ಅಮಾನುಷ ಘಟನೆ ನಡೆದಿದೆ. ವೆಲ್ಲೂರು ರಸ್ತೆಯ ಆನಂದ್​ ಥಿಯೇಟರ್ ಸಮೀಪ ಬ್ಯೂಟಿ ಪಾರ್ಲರ್ (Beauty Parlour) ನಡೆಸುತ್ತಿದ್ದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಸ್ಥಳೀಯರಲ್ಲಿ ಸಂಚಲನ ಮೂಡಿಸಿದೆ. ಯುವತಿಯ ಮೃತದೇಹದ ಪಕ್ಕದಲ್ಲಿ ಯುವಕನೊಬ್ಬ (Boy Friend) ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಗಮನಿಸಿದ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಕೊನೆಯ ಉಸಿರೆಳೆಯುತ್ತಿದ್ದ ಯುವತಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ.. ಆಕೆಯ ಮೈಮೇಲೆ ಯಾವುದೇ ಗಾಯಗಳು ಇಲ್ಲದಿರುವುದು ಅನುಮಾನಕ್ಕೆ (Mystery) ಎಡೆಮಾಡಿಕೊಟ್ಟಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮರಣೋತ್ತರ ಪರೀಕ್ಷೆ ಬಳಿಕ ಸಂಪೂರ್ಣ ಮಾಹಿತಿ ತಿಳಿಯಲಿದೆ ಎಂದು ತಿಳಿಸಿದ್ದಾರೆ.

ಚಿತ್ತೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡುತ್ತಿರುವ ನಾಗರಾಜು ಅವರ ಪುತ್ರಿ ದುರ್ಗಾ ಪ್ರಶಾಂತಿ ಕೆಲ ತಿಂಗಳ ಹಿಂದೆ ಫೇಸ್ ಬುಕ್ ಮೂಲಕ ಭದ್ರಾದ್ರಿ ಜಿಲ್ಲೆಯ ಚಕ್ರವರ್ತಿ ಎಂಬ ಯುವಕನ ಸಂಪರ್ಕಕ್ಕೆ ಬಂದಿದ್ದಳು. ಆಗ ಚಕ್ರವರ್ತಿ ಹೈದರಾಬಾದ್‌ನ ಪ್ರಸಿದ್ಧ ರೆಸ್ಟೋರೆಂಟ್‌ನಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದರು. ಆದರೆ.. ಎರಡು ತಿಂಗಳ ಹಿಂದೆಯೇ ಚಕ್ರವರ್ತಿ ಕುಟುಂಬ ಸಮೇತ ಚಿತ್ತೂರಿನ ದುರ್ಗಾ ಪ್ರಶಾಂತಿ ಅವರ ಮನೆ ಬಳಿ ಬಾಡಿಗೆ ಮನೆ ಮಾಡಿಕೊಂಡು ಬಂದಿದ್ದರು. ಅದರೊಂದಿಗೆ.. ಎರಡು ಕುಟುಂಬಗಳ ನಡುವೆ ನಿಕಟ ಸಂಪರ್ಕ ಏರ್ಪಟ್ಟಿದೆಯಂತೆ.

Also Read: 

ಬ್ಯೂಟಿ ಪಾರ್ಲರ್ ಆಂಟಿಗಾಗಿ ಪತ್ನಿಯನ್ನೆ ಕೊಲೆ ಮಾಡಿದನಾ ಗಂಡ? ಮದುವೆಯಾಗಿ ಮಗುವಿದ್ದರೂ ಗಂಡನಿಗೆ ಬೇರೊಂದು ಲವ್ವಿಡವ್ವಿ!

ಇಲ್ಲಿಯವರೆಗೆ ಎಲ್ಲವೂ ಚೆನ್ನಾಗಿದೆ.. ಮುಂದೇನಾಯ್ತು ಅಂದರೆ ನಿನ್ನೆ ಮಂಗಳವಾರ ಸಂಜೆ.. ತಾನು ನಡೆಸುತ್ತಿರುವ ಬ್ಯೂಟಿ ಪಾರ್ಲರ್‌ ಶಾಪ್​ನಲ್ಲಿ ಯುವತಿ ನಿರ್ಜೀವವಾಗಿ ಮಲಗಿದ್ದಾಳೆ. ಆಕೆಯ ಮೃತದೇಹದ ಪಕ್ಕದಲ್ಲಿ ಚಕ್ರವರ್ತಿ ಸಹ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಆಕೆಯ ಕುಟುಂಬ ಸದಸ್ಯರು ಆಘಾತಕ್ಕೊಳಗಾಗಿದ್ದಾರೆ. ಪ್ರಾಥಮಿಕ ವಿಚಾರಣೆ ಬಳಿಕ ಪೊಲೀಸರು ಯುವತಿಯ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬ್ಯೂಟಿಷಿಯನ್ ಹತ್ಯೆ ಪ್ರಕರಣ ಬೇಧಿಸಲು ವಿಶೇಷ ಪೊಲೀಸ್​​ ಟೀಂ ಕಾರ್ಯಪ್ರವೃತ್ತವಾಗಿದೆ. ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರಾ? ಅಥವಾ… ಚಕ್ರವರ್ತಿ ಮೊದಲು ಚಾಕುವಿನಿಂದ ದುರ್ಗಾ ಪ್ರಶಾಂತಿಯನ್ನು ಕೊಂದನಾ? ತದನಂತರ… ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡನಾ? ಪೊಲೀಸ್​ ತಂಡ ಸಾಕ್ಷ್ಯ ಸಂಗ್ರಹಿಸಿದ ನಂತರ ತನಿಖೆಯಲ್ಲಿ ಏನೆಲ್ಲಾ ಬಯಲಾಗುತ್ತೋ ನೋಡೋಣ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:25 pm, Wed, 19 April 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?