AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಕೋಟಿ ರೂ. ಮೌಲ್ಯದ ಚಿನ್ನ-ಬೆಳ್ಳಿ ವಶಪಡಿಸಿಕೊಂಡ ಪೊಲೀಸರು: ಕತ್ತಲಲ್ಲಿ ಪರಾರಿಯಾಗುತ್ತಿದ್ದ ಉದ್ಯಮಿಯ ಬೆನ್ನತ್ತಿದ ಐಟಿ ಅಧಿಕಾರಿಗಳು

ಇನ್ನೊಂದೆಡೆ ಇಂದು ಲಖನೌದ ಸರೋಜಿನಿ ನಗರದ ಖ್ಯಾತ ಉದ್ಯಮಿ ದೇವೇಂದ್ರ ಪಾಲ್ ಸಿಂಗ್​ ಅವರಿಗೆ ಸೇರಿದ ಸ್ಥಳಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿಯ ಕೆಲವು ಸ್ಥಳಗಳು, ಕಾನ್ಪುರ, ಲಖನೌನ ವಿವಿಧ ಕಡೆ ರೇಡ್ ಮಾಡಿದ್ದಾರೆ.

5 ಕೋಟಿ ರೂ. ಮೌಲ್ಯದ ಚಿನ್ನ-ಬೆಳ್ಳಿ ವಶಪಡಿಸಿಕೊಂಡ ಪೊಲೀಸರು:  ಕತ್ತಲಲ್ಲಿ ಪರಾರಿಯಾಗುತ್ತಿದ್ದ ಉದ್ಯಮಿಯ ಬೆನ್ನತ್ತಿದ ಐಟಿ ಅಧಿಕಾರಿಗಳು
ಚಿನ್ನ ಸಾಗಣೆ ಮಾಡುತ್ತಿದ್ದವರನ್ನು ಬಂಧಿಸಿದ ಪೊಲೀಸರು
TV9 Web
| Edited By: |

Updated on: Mar 06, 2022 | 12:49 PM

Share

ಆಂಧ್ರಪ್ರದೇಶ-ತೆಲಂಗಾಣ ಗಡಿಯಲ್ಲಿರುವ ಪಂಚಲಿಂಗಲ ಚೆಕ್​ಪೋಸ್ಟ್​​ ಬಳಿ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತು ನಗದು ಸಾಗಿಸುತ್ತಿದ್ದ ಐವರನ್ನು ಕರ್ನೂಲ್​ ಪೊಲೀಸರು ಬಂಧಿಸಿದ್ದಾರೆ. ಮಧ್ಯರಾತ್ರಿ ಸಾಗಿಸಲಾಗುತ್ತಿದ್ದ ಈ ಚಿನ್ನ, ಬೆಳ್ಳಿ, ನಗದಿಗೆ ಯಾವುದೇ ದಾಖಲೆ ಇರಲಿಲ್ಲ. ಹೀಗಾಗಿ ವಶಪಡಿಸಿಕೊಳ್ಳಲಾಯಿತು ಎಂದು ಕರ್ನೂಲ್​ ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳಿಂದ 3.96 ಕೋಟಿ ರೂಪಾಯಿ ಮೌಲ್ಯದ 8 ಕೆಜಿ ಚಿನ್ನ, 18.52 ಲಕ್ಷ ರೂಪಾಯಿ ಮೌಲ್ಯದ 28.5 ಕೆಜಿ ಬೆಳ್ಳಿ ಮತ್ತು 90 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ತಮಿಳುನಾಡಿನವರಾಗಿದ್ದು, ಅಕ್ರಮ ಸರಕು ಸಾಗಣೆ ಮಾಡುತ್ತಿದ್ದ ಬಸ್​​ನಲ್ಲಿ ಪ್ರಯಾಣ ಮಾಡುತ್ತಿದ್ದರು. ಗಡಿಯಲ್ಲಿ ಎಂದಿನಂತೆ ವಾಹನ ತಪಾಸಣೆ ಮಾಡಿದ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು  ಪೊಲೀಸರು ಮಾಹಿತಿ ನೀಡಿದ್ದಾರೆ.   ಅಂದಹಾಗೇ ಈ ಬಸ್, ಸ್ವಾಮಿ ಅಯ್ಯಪ್ಪ ಎಂಬ​ ಒಂದು ಖಾಸಗಿ ಕಂಪನಿಗೆ ಸೇರಿದ್ದಾಗಿದ್ದು, ಹೈದರಾಬಾದ್​ನಿಂದ ಕೊಯಂಬತ್ತೂರಿಗೆ ಪ್ರಯಾಣಿಸುತ್ತಿತ್ತು.

ಬೆನ್ನತ್ತಿ ಹೋಗಿ ಹಿಡಿದ ಪೊಲೀಸರು !

ಇನ್ನೊಂದೆಡೆ ಇಂದು ಲಖನೌದ ಸರೋಜಿನಿ ನಗರದ ಖ್ಯಾತ ಉದ್ಯಮಿ ದೇವೇಂದ್ರ ಪಾಲ್ ಸಿಂಗ್​ ಅವರಿಗೆ ಸೇರಿದ ಸ್ಥಳಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿಯ ಕೆಲವು ಸ್ಥಳಗಳು, ಕಾನ್ಪುರ, ಲಖನೌನ ವಿವಿಧ ಕಡೆ ರೇಡ್ ಮಾಡಿದ್ದಾರೆ. ದೇವೇಂದ್ರ ಪಾಲ್ ಸಿಂಗ್, ಕಾನ್ಪುರದಲ್ಲಿರುವ ಉದ್ಯಮಶೀಲತೆ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರೂ ಹೌದು. ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ದೇವೇಂದ್ರ ಪಾಲ್ ಸಿಂಗ್ ಶನಿವಾರ ರಾತ್ರಿ ಪರಾರಿಯಾಗಲು ಹೊರಟಿದ್ದರು. ಅವರನ್ನು ಐಟಿ ಅಧಿಕಾರಿಗಳು ಮತ್ತು ಸ್ಥಳೀಯರ ಪೊಲೀಸರು ಬೆನ್ನತ್ತಿ ಹೋಗಿ ಬಂಧಿಸಿದ್ದಾರೆ.  ಇಲ್ಲಿಯವರೆಗೆ ಸುಮಾರು 4.25 ಕೋಟಿ ರೂಪಾಯಿಯನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾಗಿ ವರದಿಯಾಗಿದೆ. ಹಾಗೇ, ಘಾಜಿಯಾಬಾದ್​ ಮತ್ತು ಶಹ್ದಾರಾದಲ್ಲಿಯೂ ಕೆಲವು ಕಡೆ ಐಟಿ ದಾಳಿ ನಡೆಯುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ‘ಹೆಂಗೆ ನಾವು..’ ಅಂತ ಫೇಮಸ್​ ಆದ ರಚನಾ ಇಂದರ್​ಗೆ ಜನ್ಮದಿನ; ಇಲ್ಲಿವೆ ಸುಂದರ ಫೋಟೋಗಳು

Follow Us
Web contact
Web contact

TV9 Kannada

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ