AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಕೋಟಿ ರೂ. ಮೌಲ್ಯದ ಚಿನ್ನ-ಬೆಳ್ಳಿ ವಶಪಡಿಸಿಕೊಂಡ ಪೊಲೀಸರು: ಕತ್ತಲಲ್ಲಿ ಪರಾರಿಯಾಗುತ್ತಿದ್ದ ಉದ್ಯಮಿಯ ಬೆನ್ನತ್ತಿದ ಐಟಿ ಅಧಿಕಾರಿಗಳು

ಇನ್ನೊಂದೆಡೆ ಇಂದು ಲಖನೌದ ಸರೋಜಿನಿ ನಗರದ ಖ್ಯಾತ ಉದ್ಯಮಿ ದೇವೇಂದ್ರ ಪಾಲ್ ಸಿಂಗ್​ ಅವರಿಗೆ ಸೇರಿದ ಸ್ಥಳಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿಯ ಕೆಲವು ಸ್ಥಳಗಳು, ಕಾನ್ಪುರ, ಲಖನೌನ ವಿವಿಧ ಕಡೆ ರೇಡ್ ಮಾಡಿದ್ದಾರೆ.

5 ಕೋಟಿ ರೂ. ಮೌಲ್ಯದ ಚಿನ್ನ-ಬೆಳ್ಳಿ ವಶಪಡಿಸಿಕೊಂಡ ಪೊಲೀಸರು:  ಕತ್ತಲಲ್ಲಿ ಪರಾರಿಯಾಗುತ್ತಿದ್ದ ಉದ್ಯಮಿಯ ಬೆನ್ನತ್ತಿದ ಐಟಿ ಅಧಿಕಾರಿಗಳು
ಚಿನ್ನ ಸಾಗಣೆ ಮಾಡುತ್ತಿದ್ದವರನ್ನು ಬಂಧಿಸಿದ ಪೊಲೀಸರು
TV9 Web
| Edited By: |

Updated on: Mar 06, 2022 | 12:49 PM

Share

ಆಂಧ್ರಪ್ರದೇಶ-ತೆಲಂಗಾಣ ಗಡಿಯಲ್ಲಿರುವ ಪಂಚಲಿಂಗಲ ಚೆಕ್​ಪೋಸ್ಟ್​​ ಬಳಿ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತು ನಗದು ಸಾಗಿಸುತ್ತಿದ್ದ ಐವರನ್ನು ಕರ್ನೂಲ್​ ಪೊಲೀಸರು ಬಂಧಿಸಿದ್ದಾರೆ. ಮಧ್ಯರಾತ್ರಿ ಸಾಗಿಸಲಾಗುತ್ತಿದ್ದ ಈ ಚಿನ್ನ, ಬೆಳ್ಳಿ, ನಗದಿಗೆ ಯಾವುದೇ ದಾಖಲೆ ಇರಲಿಲ್ಲ. ಹೀಗಾಗಿ ವಶಪಡಿಸಿಕೊಳ್ಳಲಾಯಿತು ಎಂದು ಕರ್ನೂಲ್​ ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳಿಂದ 3.96 ಕೋಟಿ ರೂಪಾಯಿ ಮೌಲ್ಯದ 8 ಕೆಜಿ ಚಿನ್ನ, 18.52 ಲಕ್ಷ ರೂಪಾಯಿ ಮೌಲ್ಯದ 28.5 ಕೆಜಿ ಬೆಳ್ಳಿ ಮತ್ತು 90 ಲಕ್ಷ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಬಂಧಿತರು ತಮಿಳುನಾಡಿನವರಾಗಿದ್ದು, ಅಕ್ರಮ ಸರಕು ಸಾಗಣೆ ಮಾಡುತ್ತಿದ್ದ ಬಸ್​​ನಲ್ಲಿ ಪ್ರಯಾಣ ಮಾಡುತ್ತಿದ್ದರು. ಗಡಿಯಲ್ಲಿ ಎಂದಿನಂತೆ ವಾಹನ ತಪಾಸಣೆ ಮಾಡಿದ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು  ಪೊಲೀಸರು ಮಾಹಿತಿ ನೀಡಿದ್ದಾರೆ.   ಅಂದಹಾಗೇ ಈ ಬಸ್, ಸ್ವಾಮಿ ಅಯ್ಯಪ್ಪ ಎಂಬ​ ಒಂದು ಖಾಸಗಿ ಕಂಪನಿಗೆ ಸೇರಿದ್ದಾಗಿದ್ದು, ಹೈದರಾಬಾದ್​ನಿಂದ ಕೊಯಂಬತ್ತೂರಿಗೆ ಪ್ರಯಾಣಿಸುತ್ತಿತ್ತು.

ಬೆನ್ನತ್ತಿ ಹೋಗಿ ಹಿಡಿದ ಪೊಲೀಸರು !

ಇನ್ನೊಂದೆಡೆ ಇಂದು ಲಖನೌದ ಸರೋಜಿನಿ ನಗರದ ಖ್ಯಾತ ಉದ್ಯಮಿ ದೇವೇಂದ್ರ ಪಾಲ್ ಸಿಂಗ್​ ಅವರಿಗೆ ಸೇರಿದ ಸ್ಥಳಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿಯ ಕೆಲವು ಸ್ಥಳಗಳು, ಕಾನ್ಪುರ, ಲಖನೌನ ವಿವಿಧ ಕಡೆ ರೇಡ್ ಮಾಡಿದ್ದಾರೆ. ದೇವೇಂದ್ರ ಪಾಲ್ ಸಿಂಗ್, ಕಾನ್ಪುರದಲ್ಲಿರುವ ಉದ್ಯಮಶೀಲತೆ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರೂ ಹೌದು. ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ದೇವೇಂದ್ರ ಪಾಲ್ ಸಿಂಗ್ ಶನಿವಾರ ರಾತ್ರಿ ಪರಾರಿಯಾಗಲು ಹೊರಟಿದ್ದರು. ಅವರನ್ನು ಐಟಿ ಅಧಿಕಾರಿಗಳು ಮತ್ತು ಸ್ಥಳೀಯರ ಪೊಲೀಸರು ಬೆನ್ನತ್ತಿ ಹೋಗಿ ಬಂಧಿಸಿದ್ದಾರೆ.  ಇಲ್ಲಿಯವರೆಗೆ ಸುಮಾರು 4.25 ಕೋಟಿ ರೂಪಾಯಿಯನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾಗಿ ವರದಿಯಾಗಿದೆ. ಹಾಗೇ, ಘಾಜಿಯಾಬಾದ್​ ಮತ್ತು ಶಹ್ದಾರಾದಲ್ಲಿಯೂ ಕೆಲವು ಕಡೆ ಐಟಿ ದಾಳಿ ನಡೆಯುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ‘ಹೆಂಗೆ ನಾವು..’ ಅಂತ ಫೇಮಸ್​ ಆದ ರಚನಾ ಇಂದರ್​ಗೆ ಜನ್ಮದಿನ; ಇಲ್ಲಿವೆ ಸುಂದರ ಫೋಟೋಗಳು

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು