AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh: ಪ್ಲಾಟ್‌ಫಾರ್ಮ್ – ರೈಲಿನ ಮಧ್ಯೆ ಸಿಲುಕಿದ ವಿದ್ಯಾರ್ಥಿನಿಯ ರಕ್ಷಣೆ ಮಾಡಿದ ವಿಡಿಯೊ ವೈರಲ್

ರೈಲಿನಿಂದ ಇಳಿಯುವಾಗ ವಿದ್ಯಾರ್ಥಿಯೊಬ್ಬಳು ಕಾಲು ಜಾರಿ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿಕೊಂಡಿರುವ ಘಟನೆ ವಿಶಾಖಪಟ್ಟಣಂ ಜಿಲ್ಲೆಯ ದುವ್ವಾಡ ರೈಲು ನಿಲ್ದಾಣದಲ್ಲಿ ನಡೆದಿದೆ. ತಕ್ಷಣವೇ ರೈಲನ್ನು ನಿಲ್ಲಿಸಲಾಗಿದ್ದು, ರಕ್ಷಣಾ ಸಿಬ್ಬಂದಿ ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ.

Andhra Pradesh: ಪ್ಲಾಟ್‌ಫಾರ್ಮ್ - ರೈಲಿನ ಮಧ್ಯೆ ಸಿಲುಕಿದ ವಿದ್ಯಾರ್ಥಿನಿಯ ರಕ್ಷಣೆ ಮಾಡಿದ ವಿಡಿಯೊ ವೈರಲ್
Andhra Pradesh Staff rescued a girl student stuck between the platform and the train
TV9 Web
| Edited By: |

Updated on:Dec 07, 2022 | 3:49 PM

Share

ವಿಶಾಖಪಟ್ಟಣಂ: ರೈಲಿನಿಂದ ಇಳಿಯುವಾಗ ವಿದ್ಯಾರ್ಥಿಯೊಬ್ಬಳು ಕಾಲು ಜಾರಿ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿಕೊಂಡಿರುವ ಘಟನೆ ವಿಶಾಖಪಟ್ಟಣಂ ಜಿಲ್ಲೆಯ ದುವ್ವಾಡ ರೈಲು ನಿಲ್ದಾಣದಲ್ಲಿ ನಡೆದಿದೆ. ತಕ್ಷಣವೇ ರೈಲನ್ನು ನಿಲ್ಲಿಸಲಾಗಿದ್ದು, ರಕ್ಷಣಾ ಸಿಬ್ಬಂದಿ ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ. ದುವ್ವಾಡದ ವಿಜ್ಞಾನ ಕಾಲೇಜಿನಲ್ಲಿ ಎಂಸಿಎ ಓದುತ್ತಿರುವ ಶಶಿಕಲಾ ಎಂಬ ವಿದ್ಯಾರ್ಥಿನಿ ಗುಂಟೂರು-ರಾಯಗಡ ಎಕ್ಸ್‌ಪ್ರೆಸ್‌ನಿಂದ ಇಳಿಯುವಾಗ ರೈಲ್ವೇ ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಿದ್ದಾರೆ.

ಆಕೆ ಕಾಲೇಜಿನಿಂದ ಅಣ್ಣಾವರಂನಿಂದ ದುವ್ವಾಡ ತಲುಪಿದ್ದಳು. ಪ್ಲಾಟ್‌ಫಾರ್ಮ್‌ನಲ್ಲಿ ಇಳಿಯುವಾಗ ಕಾಲು ಜಾರಿ ಪ್ಲಾಟ್‌ಫಾರ್ಮ್ ಮತ್ತು ರೈಲಿನ ನಡುವೆ ಸಿಲುಕಿಕೊಂಡಿದ್ದು, ಕಾಲು ತಿರುಚಿ ಹಳಿಯಲ್ಲಿ ಸಿಲುಕಿಕೊಂಡಿದ್ದಾಳೆ. ವಿದ್ಯಾರ್ಥಿನಿ ಕಾಪಾಡಲು ಕಿರುಚಿದ್ದಾಳೆ. ನಿಲ್ದಾಣದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಬಂದು ರೈಲು ಚಲಿಸದಂತೆ ರೈಲು ಸಿಬ್ಬಂದಿಗೆ ತಿಳಿಸಿದ್ದಾರೆ.

ಇದನ್ನು ಓದಿ: : 2025ರ ವೇಳೆಗೆ ಬೆಂಗಳೂರು 314 ಕಿಮೀ ಮೆಟ್ರೋ ರೈಲು ಸಂಪರ್ಕವನ್ನು ಹೊಂದಲಿದೆ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ವಿದ್ಯಾರ್ಥಿನಿಯನ್ನು ಕಾಪಾಡಲು ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್​ನ ಒಂದು ಭಾಗವನ್ನು ತೆಗೆದಿದ್ದಾರೆ. ಈ ಕಾರ್ಯಾಚರಣೆ ಒಂದೂವರೆ ಗಂಟೆಗಳ ಕಾಲ ನಡೆಯಿತು. ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಗೂಡ್ಸ್ ರೈಲು ಹಳಿತಪ್ಪಿ ಇಬ್ಬರು ಸಾವು

ಇದಕ್ಕೂ ಮೊದಲು ಒಡಿಶಾದ ಕೊರೈ ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿತಪ್ಪಿ ಇಬ್ಬರು ಸಾವನ್ನಪ್ಪಿದ್ದರೆ, ಇತರರು ಗಾಯಗೊಂಡಿದ್ದರು. ಎರಡೂ ರೈಲು ಮಾರ್ಗಗಳನ್ನು ನಿರ್ಬಂಧಿಸಲಾಗಿದೆ ಮತ್ತು ನಿಲ್ದಾಣದ ಕಟ್ಟಡಕ್ಕೆ ಹಾನಿಯಾಗಿದೆ. ಪೂರ್ವ ಕರಾವಳಿ ರೈಲ್ವೆಯ ಖುರ್ದಾ ರೋಡ್ ರೈಲ್ವೆ ವಿಭಾಗದ ಅಡಿಯಲ್ಲಿ ಭದ್ರಕ್-ಕಪಿಲಾಸ್ ರಸ್ತೆ ರೈಲ್ವೆ ವಿಭಾಗದ ಕೊರೈ ನಿಲ್ದಾಣದಲ್ಲಿ ಸರಕು ರೈಲು ಹಳಿತಪ್ಪಿತು. ಎರಡೂ ಸಾಲುಗಳನ್ನು ನಿರ್ಬಂಧಿಸಲಾಗಿದೆ.

ರೈಲು ಹಳಿತಪ್ಪಿದಾಗ, ಎಂಟು ವ್ಯಾಗನ್‌ಗಳು ಪ್ಲಾಟ್‌ಫಾರ್ಮ್ ಮತ್ತು ವೇಟಿಂಗ್ ಹಾಲ್‌ಗೆ ನುಗ್ಗಿ ಸಾವುನೋವುಗಳಿಗೆ ಕಾರಣವಾಯಿತು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಈ ಬಗ್ಗೆ ಈಸ್ಟ್ ಕೋಸ್ಟ್ ರೈಲ್ವೆ (ಇಸಿಒಆರ್) ಅಧಿಕಾರಿಗಳು ಹೇಳಿದ್ದಾರೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಸಂತ್ರಸ್ತರ ಸಂಬಂಧಿಕರಿಗೆ ತಲಾ 2 ಲಕ್ಷ ರೂ ನೀಡಿದ್ದಾರೆ ಘಟನೆಯಿಂದಾಗಿ ಗುಂಟೂರು-ರಾಯಗಡ ಎಕ್ಸ್‌ಪ್ರೆಸ್‌ನ ನಿರ್ಗಮನದಲ್ಲಿ ಒಂದೂವರೆ ಗಂಟೆ ವಿಳಂಬವಾಯಿತು ಮತ್ತು ಮಾರ್ಗದಲ್ಲಿ ಇತರ ರೈಲುಗಳ ಓಡಾಟದ ಮೇಲೂ ಪರಿಣಾಮ ಬೀರಿತು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Wed, 7 December 22

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ