AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ ವಿರೋಧ ಪಕ್ಷದ ನಾಯಕ, ಟಿಡಿಪಿ ಮುಖ್ಯಸ್ಥ ಎನ್​.ಚಂದ್ರಬಾಬು ನಾಯ್ಡುರಿಗೆ ಕೊರೊನಾ ಸೋಂಕು

ಈಗಾಗಲೇ ಹಲವು ರಾಜಕಾರಣಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇನ್ನೊಂದೆಡೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯೂ ಬರುತ್ತಿದೆ. ಆಂಧ್ರಪ್ರದೇಶದಲ್ಲಿ 2024ರಲ್ಲಿ ವಿಧಾನಸಭೆ ಚುನಾವಣೆಯ ನಡೆಯಲಿದೆ.

ಆಂಧ್ರಪ್ರದೇಶ ವಿರೋಧ ಪಕ್ಷದ ನಾಯಕ, ಟಿಡಿಪಿ ಮುಖ್ಯಸ್ಥ ಎನ್​.ಚಂದ್ರಬಾಬು ನಾಯ್ಡುರಿಗೆ ಕೊರೊನಾ ಸೋಂಕು
ಚಂದ್ರಬಾಬು ನಾಯ್ಡು
TV9 Web
| Updated By: Lakshmi Hegde|

Updated on:Jan 18, 2022 | 1:40 PM

Share

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಎನ್​. ಚಂದ್ರಬಾಬು ನಾಯ್ಡು(N.Chandrababu Naidu)  ಅವರಿಗೆ ಕೊರೊನಾ ಸೋಂಕು (Coronavirus) ತಗುಲಿದೆ. ತಮಗೆ ಕೊರೊನಾ ಸೋಂಕು ತಗುಲಿದ್ದು, ಸೌಮ್ಯ ಲಕ್ಷಣಗಳು ಇವೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ಟ್ವೀಟ್​ ಮಾಡಿರುವ ಚಂದ್ರಬಾಬು ನಾಯ್ಡು, ನನಗೆ ಕೊರೊನಾ ಸೋಂಕು ತಗುಲಿದ್ದು ದೃಢಪಟ್ಟಿದೆ. ನಾನೀಗ ಕ್ವಾರಂಟೈನ್​​ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಟೆಸ್ಟ್​ ಮಾಡಿಸಿಕೊಳ್ಳಿ. ಎಲ್ಲರೂ ಸುರಕ್ಷಿತರಾಗಿರಿ ಮತ್ತು ಟೇಕ್​ ಕೇರ್​ ಎಂದು ಹೇಳಿದ್ದಾರೆ.  

ಈಗಾಗಲೇ ಹಲವು ರಾಜಕಾರಣಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇನ್ನೊಂದೆಡೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯೂ ಬರುತ್ತಿದೆ. ಆಂಧ್ರಪ್ರದೇಶದಲ್ಲಿ 2024ರಲ್ಲಿ ವಿಧಾನಸಭೆ ಚುನಾವಣೆಯ ನಡೆಯಲಿದ್ದು, ಆ ಚುನಾವಣೆಯಲ್ಲಿ ತೆಲುಗು ಸಿನಿಮಾ ನಟ ಪವನ್​ ಕಲ್ಯಾಣ್​ ನೇತೃತ್ವದ ಜನ ಸೇನಾ ಪಾರ್ಟಿಯೊಂದಿಗೆ ತೆಲುಗು ದೇಸಂ ಪಾರ್ಟಿ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಜನಸೇನಾ ಪಾರ್ಟಿಯೊಂದಿಗೆ ಮೈತ್ರಿಗೆ ನನಗೇನೂ ಅಭ್ಯಂತರವಿಲ್ಲ ಎಂದು ಚಂದ್ರಬಾಬು ನಾಯ್ಡು ಕೂಡ ಈಗಾಗಲೇ ಹೇಳಿದ್ದಾರೆ.

ಇನ್ನೊಂದೆಡೆ ಆಂಧ್ರಪ್ರದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿವೆ. ಸೋಮವಾರ ಒಂದೇ ದಿನ 4108 ಹೊಸ ಸೋಂಕಿತರು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ  21,10,388ಕ್ಕೆ ಏರಿಕೆಯಾಗಿದೆ. ಸೋಮವಾರ 696 ಮಂದಿ ಕೊರೊನಾದಿಂದ ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ. ಆದರೆ 24 ಗಂಟೆಯಲ್ಲಿ ಕೊರೊನಾದಿಂದ ಯಾವುದೇ ಸಾವೂ ಸಂಭವಿಸಿಲ್ಲ.  ಹೀಗಿದ್ದಾಗ್ಯೂ ಆಂಧ್ರದಲ್ಲಿ ಜನವರಿ 30ರ ಹೊತ್ತಿಗೆ ಕೊರೊನಾ ಪ್ರಕರಣಗಳು ಉತ್ತುಂಗಕ್ಕೆ ಏರಬಹುದು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

Published On - 9:29 am, Tue, 18 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ