AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ ವಿರೋಧ ಪಕ್ಷದ ನಾಯಕ, ಟಿಡಿಪಿ ಮುಖ್ಯಸ್ಥ ಎನ್​.ಚಂದ್ರಬಾಬು ನಾಯ್ಡುರಿಗೆ ಕೊರೊನಾ ಸೋಂಕು

ಈಗಾಗಲೇ ಹಲವು ರಾಜಕಾರಣಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇನ್ನೊಂದೆಡೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯೂ ಬರುತ್ತಿದೆ. ಆಂಧ್ರಪ್ರದೇಶದಲ್ಲಿ 2024ರಲ್ಲಿ ವಿಧಾನಸಭೆ ಚುನಾವಣೆಯ ನಡೆಯಲಿದೆ.

ಆಂಧ್ರಪ್ರದೇಶ ವಿರೋಧ ಪಕ್ಷದ ನಾಯಕ, ಟಿಡಿಪಿ ಮುಖ್ಯಸ್ಥ ಎನ್​.ಚಂದ್ರಬಾಬು ನಾಯ್ಡುರಿಗೆ ಕೊರೊನಾ ಸೋಂಕು
ಚಂದ್ರಬಾಬು ನಾಯ್ಡು
TV9 Web
| Edited By: |

Updated on:Jan 18, 2022 | 1:40 PM

Share

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಎನ್​. ಚಂದ್ರಬಾಬು ನಾಯ್ಡು(N.Chandrababu Naidu)  ಅವರಿಗೆ ಕೊರೊನಾ ಸೋಂಕು (Coronavirus) ತಗುಲಿದೆ. ತಮಗೆ ಕೊರೊನಾ ಸೋಂಕು ತಗುಲಿದ್ದು, ಸೌಮ್ಯ ಲಕ್ಷಣಗಳು ಇವೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ಟ್ವೀಟ್​ ಮಾಡಿರುವ ಚಂದ್ರಬಾಬು ನಾಯ್ಡು, ನನಗೆ ಕೊರೊನಾ ಸೋಂಕು ತಗುಲಿದ್ದು ದೃಢಪಟ್ಟಿದೆ. ನಾನೀಗ ಕ್ವಾರಂಟೈನ್​​ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಟೆಸ್ಟ್​ ಮಾಡಿಸಿಕೊಳ್ಳಿ. ಎಲ್ಲರೂ ಸುರಕ್ಷಿತರಾಗಿರಿ ಮತ್ತು ಟೇಕ್​ ಕೇರ್​ ಎಂದು ಹೇಳಿದ್ದಾರೆ.  

ಈಗಾಗಲೇ ಹಲವು ರಾಜಕಾರಣಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇನ್ನೊಂದೆಡೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯೂ ಬರುತ್ತಿದೆ. ಆಂಧ್ರಪ್ರದೇಶದಲ್ಲಿ 2024ರಲ್ಲಿ ವಿಧಾನಸಭೆ ಚುನಾವಣೆಯ ನಡೆಯಲಿದ್ದು, ಆ ಚುನಾವಣೆಯಲ್ಲಿ ತೆಲುಗು ಸಿನಿಮಾ ನಟ ಪವನ್​ ಕಲ್ಯಾಣ್​ ನೇತೃತ್ವದ ಜನ ಸೇನಾ ಪಾರ್ಟಿಯೊಂದಿಗೆ ತೆಲುಗು ದೇಸಂ ಪಾರ್ಟಿ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಜನಸೇನಾ ಪಾರ್ಟಿಯೊಂದಿಗೆ ಮೈತ್ರಿಗೆ ನನಗೇನೂ ಅಭ್ಯಂತರವಿಲ್ಲ ಎಂದು ಚಂದ್ರಬಾಬು ನಾಯ್ಡು ಕೂಡ ಈಗಾಗಲೇ ಹೇಳಿದ್ದಾರೆ.

ಇನ್ನೊಂದೆಡೆ ಆಂಧ್ರಪ್ರದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿವೆ. ಸೋಮವಾರ ಒಂದೇ ದಿನ 4108 ಹೊಸ ಸೋಂಕಿತರು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ  21,10,388ಕ್ಕೆ ಏರಿಕೆಯಾಗಿದೆ. ಸೋಮವಾರ 696 ಮಂದಿ ಕೊರೊನಾದಿಂದ ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ. ಆದರೆ 24 ಗಂಟೆಯಲ್ಲಿ ಕೊರೊನಾದಿಂದ ಯಾವುದೇ ಸಾವೂ ಸಂಭವಿಸಿಲ್ಲ.  ಹೀಗಿದ್ದಾಗ್ಯೂ ಆಂಧ್ರದಲ್ಲಿ ಜನವರಿ 30ರ ಹೊತ್ತಿಗೆ ಕೊರೊನಾ ಪ್ರಕರಣಗಳು ಉತ್ತುಂಗಕ್ಕೆ ಏರಬಹುದು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

Published On - 9:29 am, Tue, 18 January 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ