AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂತ್ರ ವಿಸರ್ಜನೆಗೆಂದು ಪೊಲೀಸ್ ಜೀಪಿನಿಂದ ಇಳಿದು ಹೋಗಿ ಆತ್ಮಹತ್ಯೆ ಮಾಡಿಕೊಂಡ ಟಿಡಿಪಿ ನಾಯಕ

ಬಾಲಕಿಯ ಮೇಲೆ ದೌರ್ಜನ್ಯವೆಸಗಿ ಬಂಧನಕ್ಕೊಳಗಾಗಿದ್ದ ಟಿಡಿಪಿ ನಾಯಕ ತಟಿಕ ನಾರಾಯಣ ರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಟೋಬರ್ 22ರಂದು ಅವರನ್ನು ಬಂಧಿಸಲಾಗಿತ್ತು. ಬುಧವಾರ ರಾತ್ರಿ 10.30ರ ಸುಮಾರಿಗೆ ಟುನಿ ಪಟ್ಟಣದ ಹೊರವಲಯದಲ್ಲಿರುವ ಕೋಮತಿ ಚೆರುವು ಬಳಿ ಈ ಘಟನೆ ನಡೆದಿದೆ. ಪೊಲೀಸ್ ಬೆಂಗಾವಲಿನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ಶೌಚಾಲಯಕ್ಕೆ ಹೋಗಲು ನಿಲ್ಲಿಸಲು ಕೇಳಿಕೊಂಡಿದ್ದರು. ಪೊಲೀಸ್ ಜೀಪ್ ನಿಂತಾಗ, ಇದ್ದಕ್ಕಿದ್ದಂತೆ ಹತ್ತಿರದ ಕೊಳಕ್ಕೆ ಹಾರಿದ್ದಾರೆ.

ಮೂತ್ರ ವಿಸರ್ಜನೆಗೆಂದು ಪೊಲೀಸ್ ಜೀಪಿನಿಂದ ಇಳಿದು ಹೋಗಿ ಆತ್ಮಹತ್ಯೆ ಮಾಡಿಕೊಂಡ ಟಿಡಿಪಿ ನಾಯಕ
ಟಿಡಿಪಿ ನಾಯಕ ರಾವ್ Image Credit source: India Today
ನಯನಾ ರಾಜೀವ್
|

Updated on: Oct 23, 2025 | 11:09 AM

Share

ಕಾಕಿನಾಡ, ಅಕ್ಟೋಬರ್ 23: ಹದಿಮೂರು ವರ್ಷದ ಬಾಲಕಿಯ ಮೇಲೆ ದೌರ್ಜನ್ಯವೆಸಗಿ ಬಂಧನಕ್ಕೊಳಗಾಗಿದ್ದ ಟಿಡಿಪಿ ನಾಯಕ ತಟಿಕ ನಾರಾಯಣ ರಾವ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಟೋಬರ್ 22ರಂದು ಅವರನ್ನು ಬಂಧಿಸಲಾಗಿತ್ತು. ಬುಧವಾರ ರಾತ್ರಿ 10.30ರ ಸುಮಾರಿಗೆ ಟುನಿ ಪಟ್ಟಣದ ಹೊರವಲಯದಲ್ಲಿರುವ ಕೋಮತಿ ಚೆರುವು ಬಳಿ ಈ ಘಟನೆ ನಡೆದಿದೆ. ಪೊಲೀಸ್ ಬೆಂಗಾವಲಿನಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ಶೌಚಾಲಯಕ್ಕೆ ಹೋಗಲು ನಿಲ್ಲಿಸಲು ಕೇಳಿಕೊಂಡಿದ್ದರು. ಪೊಲೀಸ್ ಜೀಪ್ ನಿಂತಾಗ, ಇದ್ದಕ್ಕಿದ್ದಂತೆ ಹತ್ತಿರದ ಕೊಳಕ್ಕೆ ಹಾರಿದ್ದಾರೆ.

ಆ ಸಮಯದಲ್ಲಿ ಮಳೆ ಬರುತ್ತಿತ್ತು ಮತ್ತು ಜೊತೆಗಿದ್ದ ಸಿಬ್ಬಂದಿ ಮರದ ಕೆಳಗೆ ನಿಂತಿದ್ದರು, ಆ ಕ್ಷಣದಲ್ಲಿ, ಆರೋಪಿ ಇದ್ದಕ್ಕಿದ್ದಂತೆ ಕೆರೆಗೆ ಹಾರಿದ್ದಾರೆ, ರಾತ್ರಿಯಿಡೀ ಹುಡುಕಿದರೂ ಶವ ಪತ್ತೆಯಾಗಲಿಲ್ಲ. ಬೆಳಗ್ಗೆ ಹುಡುಕಾಟ ಪುನರಾರಂಭವಾಯಿತು ಮತ್ತು ನಂತರ ಶವವನ್ನು ವಶಪಡಿಸಿಕೊಳ್ಳಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪೊಲೀಸರು ಇದು ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಿದ್ದಾರೆ, ಆದರೂ ಆಕಸ್ಮಿಕವಾಗಿ ಬಿದ್ದಿರುವ ಸಾಧ್ಯತೆಯನ್ನು ಅವರು ತಳ್ಳಿಹಾಕಿಲ್ಲ. ಅವನು ತನ್ನ ತಪ್ಪಿಗೆ ಪಶ್ಚಾತ್ತಾಪದಿಂದ ಆತ್ಮಹತ್ಯೆಗೆ ಯತ್ನಿಸಿರಬಹುದು ಅಥವಾ ಆಕಸ್ಮಿಕವಾಗಿ ಕೆರೆಗೆ ಬಿದ್ದಿರಬಹುದು ಎಂದು ಸಿಐ ಹೇಳಿದರು.

ಮತ್ತಷ್ಟು ಓದಿ: ಹಲೋ ಎಲ್ಲಾ ಕೇಳಿಸ್ಕೊಳ್ಳಿ: ವಿಡಿಯೋ ಮಾಡಿಟ್ಟು ನವ ವಿವಾಹಿತ ಆತ್ಮಹತ್ಯೆ, ಹೆಂಡ್ತಿ ವಿರುದ್ಧ ಗಂಭೀರ ಆರೋಪ

ಗುರುಕುಲ ಶಾಲೆಯ 13 ವರ್ಷದ ವಿದ್ಯಾರ್ಥಿನಿಯನ್ನು ಆಕೆಯ ಅಜ್ಜನಂತೆ ನಟಿಸಿ ಆಮಿಷವೊಡ್ಡಿ ಟುನಿಯ ಹೊರವಲಯದಲ್ಲಿರುವ ಮಾವಿನ ತೋಟಕ್ಕೆ ಕರೆದೊಯ್ದು, ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದ ಮೇಲೆ ರಾವ್ ಅವರನ್ನು ಬಂಧಿಸಲಾಗಿತ್ತು.

ತೋಟದ ಮಾಲೀಕರು ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿ ವಿಡಿಯೋ ರೆಕಾರ್ಡ್ ಮಾಡಿದಾಗ ಈ ಕೃತ್ಯ ಬೆಳಕಿಗೆ ಬಂದಿತು. ಇದನ್ನು ಅರಿತ ರಾವ್ ಬಾಲಕಿಯೊಂದಿಗೆ ತನ್ನ ಸ್ಕೂಟರ್‌ನಲ್ಲಿ ಪರಾರಿಯಾಗಿದ್ದಾನೆ. ಹುಡುಗಿಯ ಸಂಬಂಧಿಕರ ದೂರಿನ ಮೇರೆಗೆ ಪೊಲೀಸರು ಆತನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಕಾಕಿನಾಡ ಡಿಎಸ್ಪಿ ಶ್ರೀಹರಿ ರಾಜು ಮಾತನಾಡಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯ ಕಠಿಣ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯು ಅಪ್ರಾಪ್ತ ಬಾಲಕಿಯನ್ನು ಶಾಲಾ ಆವರಣದಿಂದ ಕರೆದುಕೊಂಡು ಹೋಗಿರುವುದರಿಂದ, ಅದು ಅಪಹರಣವೆಂದೇ ಕರೆಯಬೇಕಾಗುತ್ತದೆ.

ಘಟನೆಯ ನಂತರ ಗುರುಕುಲ ಶಾಲೆಯ ಹೊರಗೆ ಪ್ರತಿಭಟನೆಗಳು ನಡೆದವು, ಸ್ಥಳೀಯರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು ಮತ್ತು ಬಾಲಕಿಯನ್ನು ಹಾಸ್ಟೆಲ್‌ನಿಂದ ಹೊರಹೋಗಲು ಅನುಮತಿಸುವಲ್ಲಿ ಶಾಲೆಯ ನಿರ್ಲಕ್ಷ್ಯವನ್ನು ಪ್ರಶ್ನಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ