ಜಾತಿ ಗಣತಿಗೆ ಆಂಧ್ರಪ್ರದೇಶದ ಸಚಿವ ಸಂಪುಟ ಒಪ್ಪಿಗೆ

ಜಾತಿ ಗಣತಿಗೆ ಆಂಧ್ರಪ್ರದೇಶದ ಸಚಿವ ಸಂಪುಟ ಒಪ್ಪಿಗೆ ನೀಡಿದೆ, ನವೆಂಬರ್ 20ರ ಬಳಿಕ ಗಣತಿ ಆರಂಭವಾಗುವ ನಿರೀಕ್ಷೆ ಇದೆ.  ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಜೀವನೋಪಾಯ ಮತ್ತು ಜನಸಂಖ್ಯೆಯ ಅಂಕಿಅಂಶಗಳನ್ನು ಸಂಗ್ರಹಿಸುವ ಗುರಿಯನ್ನು ಹೊಂದಿರುವ ಸಮಗ್ರ ಜಾತಿ ಗಣತಿ(Caste Census)ಗೆ ಆಂಧ್ರಪ್ರದೇಶದ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಜಾತಿ ಗಣತಿಯು ಹೆಚ್ಚಿನ ಅಭಿವೃದ್ಧಿ, ಆರ್ಥಿಕ ಮತ್ತು ಸಾಮಾಜಿಕ ಉನ್ನತಿಗೆ ಮತ್ತು ಸರ್ಕಾರದ ಯೋಜನೆಗಳಿಗೆ ಸುಧಾರಿತ ಪ್ರವೇಶಕ್ಕೆ ಪ್ರಮುಖ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ.

ಜಾತಿ ಗಣತಿಗೆ ಆಂಧ್ರಪ್ರದೇಶದ ಸಚಿವ ಸಂಪುಟ ಒಪ್ಪಿಗೆ
ಜಗನ್​ ಮೋಹನ್ ರೆಡ್ಡಿ
Image Credit source: ABP Live

Updated on: Nov 03, 2023 | 6:09 PM

ಜಾತಿ ಗಣತಿಗೆ ಆಂಧ್ರಪ್ರದೇಶದ ಸಚಿವ ಸಂಪುಟ ಒಪ್ಪಿಗೆ ನೀಡಿದೆ, ನವೆಂಬರ್ 20ರ ಬಳಿಕ ಗಣತಿ ಆರಂಭವಾಗುವ ನಿರೀಕ್ಷೆ ಇದೆ.  ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಜೀವನೋಪಾಯ ಮತ್ತು ಜನಸಂಖ್ಯೆಯ ಅಂಕಿಅಂಶಗಳನ್ನು ಸಂಗ್ರಹಿಸುವ ಗುರಿಯನ್ನು ಹೊಂದಿರುವ ಸಮಗ್ರ ಜಾತಿ ಗಣತಿ(Caste Census)ಗೆ ಆಂಧ್ರಪ್ರದೇಶದ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಜಾತಿ ಗಣತಿಯು ಹೆಚ್ಚಿನ ಅಭಿವೃದ್ಧಿ, ಆರ್ಥಿಕ ಮತ್ತು ಸಾಮಾಜಿಕ ಉನ್ನತಿಗೆ ಮತ್ತು ಸರ್ಕಾರದ ಯೋಜನೆಗಳಿಗೆ ಸುಧಾರಿತ ಪ್ರವೇಶಕ್ಕೆ ಪ್ರಮುಖ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ.

ಜನಗಣತಿಯ ಕುರಿತು ಮಾತನಾಡಿದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಬಡತನ ನಿರ್ಮೂಲನೆ, ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ತಾರತಮ್ಯ ಮತ್ತು ಅಸಮಾನತೆಗಳನ್ನು ಕಡಿಮೆ ಮಾಡುವಲ್ಲಿ ಈ ಅಂಕಿ ಅಂಶಗಳು ಪ್ರಮುಖ ಪಾತ್ರವಹಿಸುತ್ತದೆ ಎಂದರು.

ಈ ದತ್ತಾಂಶವು ಯಾವುದೇ ಅರ್ಹ ವ್ಯಕ್ತಿಗಳನ್ನು ಸರ್ಕಾರಿ ಯೋಜನೆಗಳಿಂದ ಹೊರಗಿಡುವುದಿಲ್ಲ ಎಂಬುದನ್ನು ಖಚಿತಪಡಿಸುತ್ತದೆ. ಇದು ಅತ್ಯಂತ ದುರ್ಬಲ ಜನಸಂಖ್ಯೆಗೆ ಪ್ರಯೋಜನವನ್ನು ನೀಡುತ್ತದೆ ಎಂದರು.

ಸಮುದಾಯದ ಮುಖಂಡರ ಹೋರಾಟ ಮತ್ತು ಜಾತಿ ಆಧಾರಿತ ಜನಗಣತಿಯ ಅಗತ್ಯದ ಕುರಿತು ಸಮಗ್ರ ವಿವರಗಳನ್ನು ಸಂಗ್ರಹಿಸಲು ಐದು ಸ್ಥಳಗಳಲ್ಲಿ ದುಂಡು ಮೇಜಿನ ಚರ್ಚೆ ನಡೆಸಲಾಗುವುದು ಎಂದು ಸಚಿವ ವೇಣುಗೋಪಾಲ ಕೃಷ್ಣ ಹೇಳಿದರು.

ಮತ್ತಷ್ಟು ಓದಿ: ಬಿಹಾರ್ ಬೆನ್ನಲ್ಲೇ ಕರ್ನಾಟಕದಲ್ಲೂ ಗರಿಗೆದರಿದ ಜಾತಿ ಗಣತಿ ವರದಿ ಸಲ್ಲಿಕೆ ಕಾರ್ಯ ಚಟುವಟಿಕೆಗಳು

ಇದಲ್ಲದೆ, ರಾಜ್ಯ ಹೂಡಿಕೆ ಉತ್ತೇಜನಾ ಮಂಡಳಿ (ಎಸ್‌ಐಪಿಬಿ) ಮೂಲಕ 19,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಕೈಗಾರಿಕೆಗಳ ಸ್ಥಾಪನೆ, ರಾಜ್ಯಾದ್ಯಂತ 6,790 ಪ್ರೌಢಶಾಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ ಮತ್ತು 100 ಎಕರೆ ಹಂಚಿಕೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸಚಿವ ಸಂಪುಟ ಚರ್ಚಿಸಿತು. ಕರ್ನೂಲ್‌ನಲ್ಲಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಕ್ಕೆ ಭೂಮಿ ನೀಡಲಾಗಿದೆ ಎಂದು ಅವರು ಹೇಳಿದರು.

ಕೈಗಾರಿಕೆಗಳಿಗೆ ಹೊಸ ಭೂ ಮಂಜೂರಾತಿ ನೀತಿಗೆ ಅನುಮೋದನೆ ನೀಡಲಾಗಿದ್ದು, ಮೆಗಾವ್ಯಾಟ್ ಪವನ ವಿದ್ಯುತ್ ಸ್ಥಾವರ ಸ್ಥಾಪನೆಗೆ ಕರ್ನೂಲ್ ಜಿಲ್ಲೆಯಲ್ಲಿ 800 ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ.

ಸಚಿವ ಸಂಪುಟದಲ್ಲಿ ಅನುಮೋದಿಸಲಾದ ಇತರ ಪ್ರಸ್ತಾವನೆಗಳಲ್ಲಿ ಪತ್ರಕರ್ತರಿಗೆ ಮನೆ ನಿವೇಶನ ವಿತರಣೆ, ಮುದ್ರಾಂಕ ಶುಲ್ಕ ವಿನಾಯಿತಿ, ನೋಂದಣಿ ಶುಲ್ಕ ಮತ್ತು ಪೋಲವರಂ ನಿವಾಸಿಗಳಿಗೆ ಬೆಂಬಲ ನೀಡುವ ಮನೆ ಮತ್ತು ನಿವೇಶನಗಳ ನೋಂದಣಿಗೆ ಬಳಕೆದಾರರ ಶುಲ್ಕ ಮತ್ತು 902 ಮೆಗಾವ್ಯಾಟ್ ಸೋಲಾರ್ ಸ್ಥಾಪನೆಗೆ 5,400 ಎಕರೆ ಭೂಮಿ ಹಂಚಿಕೆ ಸೇರಿವೆ. ನಂದ್ಯಾಲ ಮತ್ತು ಕಡಪ ಜಿಲ್ಲೆಗಳಲ್ಲಿ ವಿದ್ಯುತ್ ಸ್ಥಾವರ, ರಾಜ್ಯದಲ್ಲಿ ಗ್ರೂಪ್ 1 ಮತ್ತು ಗ್ರೂಪ್ 2 ನೇಮಕಾತಿ ಕುರಿತು ಸಚಿವ ಸಂಪುಟ ಚರ್ಚಿಸಿದೆ ಎಂದು ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us