AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Bus Accident: ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್, 9 ಪ್ರಯಾಣಿಕರು ಸಾವು, ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ , ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿವೆ. ಬೆಳಗಿನ ಜಾವ 5.30ರ ಸಮಯದಲ್ಲಿ, ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಜಿಲ್ಲಾಧಿಕಾರಿಗಳ ಪ್ರಕಾರ, ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದರು.

Andhra Bus Accident: ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್, 9 ಪ್ರಯಾಣಿಕರು ಸಾವು, ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು
ಬಸ್
ನಯನಾ ರಾಜೀವ್
|

Updated on:Dec 12, 2025 | 8:24 AM

Share

ಅಲ್ಲೂರು, ಡಿಸೆಂಬರ್ 12: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ , ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿವೆ. ಬೆಳಗಿನ ಜಾವ 5.30ರ ಸಮಯದಲ್ಲಿ, ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಜಿಲ್ಲಾಧಿಕಾರಿಗಳ ಪ್ರಕಾರ, ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದರು. ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ, ಏಳು ಮಂದಿಯನ್ನು ಸ್ಥಳದಿಂದ 15 ಕಿ.ಮೀ ದೂರದಲ್ಲಿರುವ ಸಿಎಚ್​ಸಿ ಚಿಂತೂರಿಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮತ್ತಷ್ಟು ಓದಿ: ಆನೇಕಲ್​​ ಬಳಿ ಭೀಕರ ಬೈಕ್​​ ಅಪಘಾತ: ಎದೆ ಝಲ್​​ ಎನಿಸುವಂತಿದೆ ದೃಶ್ಯ

ತೀಕ್ಷ್ಣವಾದ ತಿರುವಿನಲ್ಲಿ ಸಾಗುವಾಗ ವಾಹನವು ರಸ್ತೆಯಿಂದ ಪಕ್ಕಕ್ಕೆ ಉರುಳಿ ಕಡಿದಾದ ಇಳಿಜಾರಿನ ಕೆಳಗೆ ಬಿದ್ದಿದೆ ಎಂದು ವರದಿಯಾಗಿದೆ. ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ತಂಡಗಳು ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ಅವಶೇಷಗಳನ್ನು ತೆರವುಗೊಳಿಸಲು ಸ್ಥಳಕ್ಕೆ ಧಾವಿಸಿವೆ.

ಸ್ಥಳದ ವಿಡಿಯೋ

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿ, ಗಾಯಾಳುಗಳಿಗೆ ನೀಡಲಾಗುವ ಪರಿಹಾರದ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿದರು. ಹಿರಿಯ ಅಧಿಕಾರಿಗಳು ತಕ್ಷಣ ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ಅವರು ಆದೇಶಿಸಿದರು ಮತ್ತು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಲು ಮತ್ತು ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ನೀಡಬೇಕು ಎಂದು ಸೂಚಿಸಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಭದ್ರಾಚಲಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಎಎಸ್ಆರ್ ಜಿಲ್ಲಾಧಿಕಾರಿ ದಿನೇಶ್ ಕುಮಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ಮತ್ತು ಮೃತರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:16 am, Fri, 12 December 25