AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Instructions To Ayodhya: ಅಯೋಧ್ಯೆ ಬಾಲರಾಮನ ದರ್ಶನಕ್ಕಾಗಿ ಕ್ಯೂ ವ್ಯವಸ್ಥೆ – ಅಯೋಧ್ಯೆ ಟ್ರಸ್ಟ್‌ಗೆ ಟಿಟಿಡಿ ಸಲಹೆ ಸೂಚನೆ

Queue management in Ayodhya: ಬಾಲರಾಮನ ದೇಗುಲಕ್ಕೆ ಬರುವ ಭಕ್ತರಿಗೆ ತೃಪ್ತಿಕರ ದರ್ಶನ ನೀಡಲು ಎಂತಹ ವ್ಯವಸ್ಥೆ ಮಾಡಬೇಕು ಎಂದು ಟಿಟಿಡಿ ಇಒ ಅವರನ್ನು ಅಯೋಧ್ಯೆ ಟ್ರಸ್ಟ್‌ ಸದಸ್ಯರು ಕೇಳಿದ್ದರು. ಕ್ಯೂ ಲೈನ್‌ಗಳ ನಿರ್ವಹಣೆಗೆ ಸಂಬಂಧಿಸಿದಂತೆ ಟಿಟಿಡಿ ಎಂಜಿನಿಯರಿಂಗ್ ಅಧಿಕಾರಿಗಳು ಹಲವಾರು ಸಲಹೆಗಳನ್ನು ನೀಡಿದ್ದಾರೆ.

TTD Instructions To Ayodhya: ಅಯೋಧ್ಯೆ ಬಾಲರಾಮನ ದರ್ಶನಕ್ಕಾಗಿ ಕ್ಯೂ ವ್ಯವಸ್ಥೆ - ಅಯೋಧ್ಯೆ ಟ್ರಸ್ಟ್‌ಗೆ ಟಿಟಿಡಿ ಸಲಹೆ ಸೂಚನೆ
ಅಯೋಧ್ಯೆ ಬಾಲರಾಮನ ದರ್ಶನಕ್ಕಾಗಿ ಕ್ಯೂ ವ್ಯವಸ್ಥೆ: ಟಿಟಿಡಿ ಸಲಹೆ ಸೂಚನೆ
ಸಾಧು ಶ್ರೀನಾಥ್​
|

Updated on:Feb 19, 2024 | 1:59 PM

Share

ಅಯೋಧ್ಯೆ ರಾಮ ಮಂದಿರದಲ್ಲಿ ಭಕ್ತರ ದಟ್ಟಣೆಯನ್ನು ಕ್ರಮಬದ್ಧಗೊಳಿಸುವ ಬಗ್ಗೆ ಅಂದರೆ ಕ್ಯೂ ವ್ಯವಸ್ಥೆ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಲಿ ಪದಾಧಿಕಾರಿಗಳು (ಟಿಟಿಡಿ TTD) ಅಯೋಧ್ಯೆ ಟ್ರಸ್ಟ್‌ನ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರತಿನಿಧಿಗಳೊಂದಿಗೆ ಅವರು ಭಕ್ತರ ಹರಿವನ್ನು ನಿಯಂತ್ರಿಸುವ ಜೊತೆಗೆ ಸರತಿ ಸಾಲುಗಳ ನಿರ್ವಹಣೆಯ ಬಗ್ಗೆ ಚರ್ಚಿಸಿದರು. ಟಿಟಿಡಿ ಇ ಒ ಎ ವಿ ಧರ್ಮ ರೆಡ್ಡಿ ನೇತೃತ್ವದ ದೇವಾಸ್ಥಾನದ ಅಧಿಕಾರಿಗಳ ತಂಡ ಜಾಗೃತಿ ಮೂಡಿಸಿತು. ಟ್ರಸ್ಟ್‌ನ ಮನವಿಯಂತೆ ಟಿಟಿಡಿ ಅಧಿಕಾರಿಗಳು ಅಯೋಧ್ಯೆಗೆ ತೆರಳಿದ್ದರು. ಟ್ರಸ್ಟ್ ಕಚೇರಿಯಲ್ಲಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಯಿತು (Queue management in Ayodhya).

ಬಾಲರಾಮನ ದೇಗುಲಕ್ಕೆ ಬರುವ ಭಕ್ತರಿಗೆ ತೃಪ್ತಿಕರ ದರ್ಶನ ನೀಡಲು ಎಂತಹ ವ್ಯವಸ್ಥೆ ಮಾಡಬೇಕು ಎಂದು ಟಿಟಿಡಿ ಇಒ ಅವರನ್ನು ಕೇಳಲಾಯಿತು. ಕ್ಯೂ ಲೈನ್‌ಗಳ ನಿರ್ವಹಣೆಗೆ ಸಂಬಂಧಿಸಿದಂತೆ ಟಿಟಿಡಿ ಎಂಜಿನಿಯರಿಂಗ್ ಅಧಿಕಾರಿಗಳು ಹಲವಾರು ಸಲಹೆಗಳನ್ನು ನೀಡಿದ್ದಾರೆ.

Also Read: ಪವಡಿಸು ಪರಮಾತ್ಮ… ಬಾಲ ರಾಮನಿಗೆ ಬೇಕು ವಿಶ್ರಾಂತಿ: ಇನ್ನು ಅಯೋಧ್ಯೆ ಮಂದಿರವನ್ನು 1 ಗಂಟೆ ಕಾಲ ಮುಚ್ಚಲಾಗುವುದು

ಬಳಿಕ ಬಾಲರಾಮನ ದರ್ಶನ ಏರ್ಪಡಿಸಿದ್ದ ದೇವಸ್ಥಾನದ ಟ್ರಸ್ಟ್‌ನ ಪ್ರತಿನಿಧಿಗಳು ಟಿಟಿಡಿ ಅಧಿಕಾರಿಗಳಿಗೆ ತೀರ್ಥಪ್ರಸಾದ ವಿತರಿಸಿದರು. ಅಯೋಧ್ಯೆ ಟ್ರಸ್ಟ್‌ನ ಪ್ರತಿನಿಧಿಗಳಾದ ಡಾ.ಅನಿಲ್ ಮಿಶ್ರಾ, ಗೋಪಾಲ್ ಜಿ, ಜಗದೀಶ್ ಆಫ್ಲೆ, ಗಿರೀಶ್ ಸಹಸ್ರ ಭೋಜನಿ, ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ರಾಘವ್ ಹಾಗೂ ಟಿಟಿಡಿ ಇ ಒ ಜೊತೆಗೆ ದೇವಸ್ಥಾನದ ವಿಶೇಷ ತಂಡವೂ ಅಯೋಧ್ಯೆ ಭೇಟಿಯಲ್ಲಿ ಭಾಗವಹಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:59 pm, Mon, 19 February 24

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ