Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಮುಖ್ಯಮಂತ್ರಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಮಹಿಳೆಯೊಬ್ಬರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ವೈಎಸ್​ಆರ್​ ಕಾಂಗ್ರೆಸ್​ ತಮ್ಮ ಭೂಮಿಯನ್ನು ಕಬಳಿಸಿದೆ ಎಂದು ಆರೋಪಿಸಿರುವ ಮಹಿಳೆ ಎತ್ತರದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದರು, ಪೊಲೀಸರು ಮಧ್ಯಪ್ರವೇಶಿಸಿ ಮಹಿಳೆಯನ್ನು ತಡೆದಿದ್ದಾರೆ.

ಉಪಮುಖ್ಯಮಂತ್ರಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಆಂಧ್ರಪ್ರದೇಶ ಮಹಿಳೆImage Credit source: NewsMeter Telugu
Follow us
ನಯನಾ ರಾಜೀವ್
|

Updated on: Jun 26, 2024 | 8:19 AM

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಕಚೇರಿ ಎದುರು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಉಪಮುಖ್ಯಮಂತ್ರಿ ಪವನ್​ ಕಲ್ಯಾಣ್(Pawan Kalyan) ಅವರ ಕ್ಯಾಂಪ್ ಕಚೇರಿ ಬಳಿ ಮಹಿಳೆಯೊಬ್ಬರು ತನ್ನ ಜೀವವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದರು, ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿ ಅವರನ್ನು ರಕ್ಷಣೆ ಮಾಡಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಶ್ರೀಕಾಕುಳಂ ಜಿಲ್ಲೆಯ ನಿವಾಸಿಯಾದ ದುರ್ಗಾದೇವಿ ಕ್ಯಾಂಪ್ ಆಫೀಸ್ ಬಳಿಯಿರುವ ಕಟ್ಟಡವನ್ನು ಏರಿ ಅಲ್ಲಿಂದ ಹಾರಿ ಪ್ರಾಣ ಕಳೆದುಕೊಳ್ಳಲು ಮಹಿಳೆ ನಿರ್ಧರಿಸಿದ್ದಳು.

ಶ್ರೀಕಾಕುಳಂನಲ್ಲಿ ವೈಎಸ್‌ಆರ್‌ಸಿಪಿ ಪಕ್ಷದ ನಾಯಕರ ಒತ್ತುವರಿಯಿಂದ ತನ್ನ ಭೂಮಿಯನ್ನು ಕಳೆದುಕೊಂಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ. ಪದೇ ಪದೇ ಮನವಿ ಮಾಡಿದರೂ ಪಕ್ಷದ ಮುಖಂಡರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ವೈಎಸ್‌ಆರ್‌ಸಿಪಿ ನಾಯಕರ ವಿರುದ್ಧ ಭೂಕಬಳಿಕೆ ಪ್ರಕರಣಗಳ ಆರೋಪಗಳ ಕುರಿತ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಈ ವಿಷಯ ಬೆಳಕಿಗೆ ಬಂದಿದೆ. ಇತ್ತೀಚೆಗೆ, ಗುಂಟೂರು ಜಿಲ್ಲೆಯಲ್ಲಿ ವೈಎಸ್‌ಆರ್‌ಸಿಪಿ ಪಕ್ಷದ ಕಚೇರಿಯನ್ನು ಕೆಡವಲಾಗಿತ್ತು ವಿಶಾಖಪಟ್ಟಣಂನಲ್ಲಿ ಇನ್ನೂ ಎರಡು ಪಕ್ಷದ ಕಚೇರಿಗಳಿಗೆ ನೋಟಿಸ್ ನೀಡಲಾಗಿತ್ತು.

ಮತ್ತಷ್ಟು ಓದಿ: ತಾನು ಮಾಡಿದ ಪ್ರತಿಜ್ಞೆಯಂತೆ 31 ತಿಂಗಳ ನಂತರ ಆಂಧ್ರ ಸಿಎಂ ಆಗಿಯೇ ವಿಧಾನಸಭೆಗೆ ಬಂದ ಚಂದ್ರಬಾಬು ನಾಯ್ಡು

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಟಿಡಿಪಿ ಗೆಲುವು ಸಾಧಿಸಿತ್ತು, ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೆ ಜನಸೇನಾ ಪಕ್ಷದ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಏರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!