AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ ಸಾಲದ ಹಣ ವಾಪಸ್ ಕೊಡದಿದ್ದಕ್ಕೆ ಹೆಂಡತಿಯನ್ನು ಮರಕ್ಕೆ ಕಟ್ಟಿದ ದುರುಳ

ಗಂಡ ಸಾಲ ಪಡೆದಿದ್ದಕ್ಕೆ, ಹೆಂಡತಿಯನ್ನು ಮರಕ್ಕೆ ಕಟ್ಟಿ ಹಿಂಸೆ ಕೊಟ್ಟಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ತನ್ನ ಮಗುವಿನ ಪರೀಕ್ಷಾ ಪ್ರಮಾಣಪತ್ರಗಳನ್ನು ಪಡೆಯಲು ಗ್ರಾಮಕ್ಕೆ ಹಿಂತಿರುಗಿದ್ದ ಸಿರಿಶಾ ಎಂಬ ಮಹಿಳೆಯನ್ನು ಸಾಲಕೊಟ್ಟ ಮುನಿಕಣ್ಣಪ್ಪ ಗಮನಿಸಿದ್ದಾನೆ. ಸಿರಿಷಾ ಅವರ ಪತಿ ತಿಮ್ಮರಾಯಪ್ಪ ಮೂರು ವರ್ಷಗಳ ಹಿಂದೆ ಮುನಿಕಣ್ಣಪ್ಪ ಅವರಿಂದ 80,000 ರೂ. ಸಾಲ ಪಡೆದಿದ್ದರು.

ಗಂಡ ಸಾಲದ ಹಣ ವಾಪಸ್ ಕೊಡದಿದ್ದಕ್ಕೆ ಹೆಂಡತಿಯನ್ನು ಮರಕ್ಕೆ ಕಟ್ಟಿದ ದುರುಳ
ಮಹಿಳೆ
ನಯನಾ ರಾಜೀವ್
|

Updated on: Jun 17, 2025 | 2:38 PM

Share

ಚಿತ್ತೂರು, ಜೂನ್ 17: ಏನೋ ಕಷ್ಟವೆಂದಾಗ ತಮ್ಮ ದೈನಂದಿನ ಅಗತ್ಯಗಳನ್ನು ಪೂರೈಸಿಕೊಳ್ಳಲು ಸಾಲ ಮಾಡುವುದು ಸಾಮಾನ್ಯ. ಆದರೆ ಸಾಲ ಜೀವಕ್ಕೆ ಕುತ್ತು ತಂದಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಪತಿ ಸಾಲ ಮರುಪಾವತಿಸಲು ವಿಫಲನಾಗಿದ್ದಕ್ಕೆ ಹೆಂಡತಿಯನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟಿರುವ ಘಟನೆ ನಡೆದಿದೆ.

ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ತನ್ನ ಮಗುವಿನ ಪರೀಕ್ಷಾ ಪ್ರಮಾಣಪತ್ರಗಳನ್ನು ಪಡೆಯಲು ಗ್ರಾಮಕ್ಕೆ ಹಿಂತಿರುಗಿದ್ದ ಸಿರಿಶಾ ಎಂಬ ಮಹಿಳೆಯನ್ನು ಸಾಲಕೊಟ್ಟ ಮುನಿಕಣ್ಣಪ್ಪ ಗಮನಿಸಿದ್ದಾನೆ. ಸಿರಿಷಾ ಅವರ ಪತಿ ತಿಮ್ಮರಾಯಪ್ಪ ಮೂರು ವರ್ಷಗಳ ಹಿಂದೆ ಮುನಿಕಣ್ಣಪ್ಪ ಅವರಿಂದ 80,000 ರೂ. ಸಾಲ ಪಡೆದಿದ್ದರು.

ಸಾಲ ಮರುಪಾವತಿಸಲು ಸಾಧ್ಯವಾಗದೆ ದಂಪತಿ ತಮ್ಮ ಮಕ್ಕಳೊಂದಿಗೆ ಕುಪ್ಪಂ ಮಂಡಲದ ನಾರಾಯಣಪುರಂ ಗ್ರಾಮವನ್ನು ತೊರೆದಿದ್ದರು. ಅಂದಿನಿಂದ ಸಿರಿಷಾ ತನ್ನ ಕುಟುಂಬವನ್ನು ಪೋಷಿಸಲು ಮತ್ತು ಸಾಲವನ್ನು ಮರುಪಾವತಿಸಲು ದಿನಗೂಲಿ ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದರು. ಆಕೆಯನ್ನು ನೋಡಿದ ಕೂಡಲೇ ಮುನಿಕಣ್ಣಪ್ಪ ನಿಂದಿಸಿ, ಬೇವಿನ ಮರಕ್ಕೆ ಎಳೆದು ತಂದು, ಹಗ್ಗಗಳಿಂದ ಕಟ್ಟಿ, ಥಳಿಸಿದ್ದಾನೆ. ಸಾಲ ಪಾವತಿಸದಿದ್ದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.

ಮತ್ತಷ್ಟು ಓದಿ:ಸಾಲ ಮರುಪಾವತಿಸದ ಹಿನ್ನಲೆ ಹಲ್ಲೆ ಆರೋಪ: ಮಾಜಿ ಶಾಸಕ ಚರಂತಿಮಠ ಸೇರಿ ನಾಲ್ವರ ವಿರುದ್ಧ ದೂರು

ಘಟನೆಯನ್ನು ವೀಕ್ಷಿಸಿದವರು ವಿಡಿಯೋದಲ್ಲಿ ದಾಖಲಿಸಲು ಪ್ರಯತ್ನಿಸಿದಾಗ, ಅವರ ಮೇಲೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕುಪ್ಪಂ ಪೊಲೀಸರು ಮುನಿಕಣ್ಣಪ್ಪನನ್ನು ಬಂಧಿಸಿದ್ದಾರೆ.

ಹಲ್ಲೆ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆದೇಶಿಸಿದರು. ಮುಖ್ಯಮಂತ್ರಿ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದರು, ಅವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ತಿಳಿಸಿದರು. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವಂತೆ ನಾಯ್ಡು ಪೊಲೀಸರಿಗೆ ನಿರ್ದೇಶನ ನೀಡಿದರು. ಜಿಲ್ಲಾ ಅಧಿಕಾರಿಗಳು ಸಂತ್ರಸ್ತೆಯ ಕುಟುಂಬಕ್ಕೆ ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡುವಂತೆ ಅವರು ಸಲಹೆ ನೀಡಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?