AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andolan Jeevi: ಏನಿದು ಆಂದೋಲನ​ ಜೀವಿ? ಪ್ರಧಾನಿ ಮೋದಿ ಬಳಕೆ ಮಾಡಿದ ಹೊಸ ಶಬ್ದದ ಅರ್ಥವೇನು?

PM Narendra Modi Coin's New Word: ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರ ವಂದನಾ ನಿರ್ಣಯದ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರೈತ ಪ್ರತಿಭಟನೆಯಲ್ಲಿ ವಿದೇಶಿ ಸೆಲೆಬ್ರಿಟಿಗಳು ಪಾಲ್ಗೊಳ್ಳುತ್ತಿರುವುದನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

Andolan Jeevi: ಏನಿದು ಆಂದೋಲನ​ ಜೀವಿ? ಪ್ರಧಾನಿ ಮೋದಿ ಬಳಕೆ ಮಾಡಿದ ಹೊಸ ಶಬ್ದದ ಅರ್ಥವೇನು?
ಪ್ರಧಾನಿ ನರೇಂದ್ರ ಮೋದಿ
ರಾಜೇಶ್ ದುಗ್ಗುಮನೆ
|

Updated on:Feb 08, 2021 | 5:28 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರದಲ್ಲಿ ಅನೇಕ ಹೊಸ ಹೊಸ ಶಬ್ದಗಳನ್ನು ಹುಟ್ಟು ಹಾಕಿದ್ದಾರೆ. ಆತ್ಮ ನಿರ್ಭರ ಭಾರತ ಇತ್ತೀಚೆಗೆ ಹೆಚ್ಚು ಬಳಕೆಯಲ್ಲಿದ್ದ ಶಬ್ದ.  ಈಗ ಮೋದಿ ಅವರು ಇಂದಿನ ರಾಜ್ಯಸಭೆ ಭಾಷಣದಲ್ಲಿ ಹೊಸ ಶಬ್ದವೊಂದನ್ನು ಹುಟ್ಟು ಹಾಕಿದ್ದಾರೆ. ಅದುವೇ, ಆಂದೋಲನ​ ಜೀವಿ (Andolan jeevi). ಮೋದಿ ಅವರು ಈ ಶಬ್ದ ಬಳಕೆ ಮಾಡುತ್ತಿದ್ದಂತೆ ಟ್ವಿಟ್ಟರ್​ನಲ್ಲಿ ಟ್ರೆಂಡ್​ ಆಗಿದೆ. ಅಷ್ಟಕ್ಕೂ ಏನಿದು ಶಬ್ದ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.  (pm narendra modi coins new word)

ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರ ವಂದನಾ ನಿರ್ಣಯದ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ರೈತ ಪ್ರತಿಭಟನೆಯಲ್ಲಿ ವಿದೇಶಿ ಸೆಲೆಬ್ರಿಟಿಗಳು ಪಾಲ್ಗೊಳ್ಳುತ್ತಿರುವುದನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಭಾರತದಲ್ಲಿನ ಸಮಸ್ಯೆಗಳಲ್ಲಿ ವಿದೇಶಿ ಪ್ರಭಾವಗಳು ಬೀರುತ್ತಿರುವುದರ ವಿರುದ್ಧ ದೇಶವನ್ನು ಎಚ್ಚರಿಸಬೇಕಾಗಿದೆ ಎಂದಿದ್ದಾರೆ ಮೋದಿ.

ದೇಶವನ್ನು ಇಂಥ ಆಂದೋಲನ ಜೀವಿಗಳಿಂದ ರಕ್ಷಣೆ ಮಾಡಬೇಕಿದೆ ಇದೇ ವೇಳೆ ಆಂದೋಲನ ಜೀವಿ ಬಗ್ಗೆ ಮಾತನಾಡಿದ ಮೋದಿ, ನಾವು ಕೆಲ ವರ್ಷಗಳಿಂದ ಹೋರಾಟಗಾರರಲ್ಲಿ ಹೊಸ ವಿಭಾಗವನ್ನು ನೋಡಿದ್ದೇವೆ. ಅದುವೇ ಆಂದೋಲನ ಜೀವಿ. ಅಂದರೆ ಇವರು ಎಲ್ಲ ಹೋರಾಟದಲ್ಲೂ ಪಾಲ್ಗೊಳ್ಳುತ್ತಾರೆ. ನಮ್ಮ ದೇಶವನ್ನು ಇಂಥ ಆಂದೋಲನ ಜೀವಿಗಳಿಂದ ರಕ್ಷಣೆ ಮಾಡಬೇಕಿದೆ. ಅವರಿಗೆ ತಮ್ಮದೇ ಆದ ಶಕ್ತಿ ಇರುವುದಿಲ್ಲ . ಆದರೆ ಅವರು ಎಲ್ಲಾ ಆಂದೋಲನಗಳಿಗೆ ಸೇರುತ್ತಾರೆ ಎಂದರು ಮೋದಿ. ಈ ಮೂಲಕ ಎಲ್ಲಾ ರೀತಿಯ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವವರಿಗೆ ತಿರುಗೇಟು ನೀಡಿದರು.

ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್​ ಅವರು ರೈತರ ಪ್ರತಿಭಟನೆಗೆ ಮಾತ್ರ ಸೀಮಿತವಾಗಿದ್ದರು. ಆದರೆ, ಒಂದು ದಿನ ಏಕಾಏಕಿ ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ಸೂಚಿಸಿ, ಅದರ ನೇತೃತ್ವ ಕೂಡ ವಹಿಸಿಕೊಂಡರು. ಹೀಗಾಗಿ, ಕೋಡಿಹಳ್ಳಿ ಅವರನ್ನು ಇಲ್ಲಿ ಆಂದೋಲನ ಜೀವಿ ಎಂದರೆ ಪ್ರಾಯಶಃ ತಪ್ಪಾಗಲಿಕ್ಕಿಲ್ಲ.

ಇನ್ನು, ಆತ್ಮ ನಿರ್ಭರ ಭಾರತ ಎಂಬ  ಶಬ್ದ ತುಂಬಾನೇ ಟ್ರೆಂಡ್​ ಆಗಿತ್ತು. ಇದನ್ನು ಆಕ್ಸ್​ಫರ್ಡ್​ ಡಿಕ್ಷನರಿಗೂ ಕೂಡ ಸೇರ್ಪಡೆ ಮಾಡಲಾಗಿತ್ತು ಎನ್ನುವುದು ವಿಶೇಷ.

MSP ಇತ್ತು, MSP ಇದೆ ಮತ್ತು MSP ಮುಂದೆಯೂ ಇರಲಿದೆ: ರಾಜ್ಯಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ

Published On - 3:41 pm, Mon, 8 February 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ