AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anil Ambani: ಅನಿಲ್ ಅಂಬಾನಿ ವಿರುದ್ಧ ಕಪ್ಪುಹಣ ಕಾಯ್ದೆ ಆದೇಶ; ಕಡಲಾಚೆಯ 800 ಕೋಟಿ ರೂ. ಆಸ್ತಿ ಪತ್ತೆ

ಅನಿಲ್ ಅಂಬಾನಿ ಅವರ ಕಡಲಾಚೆಯ ಘಟಕಗಳು ಮತ್ತು ಲಿಂಕ್ ಮಾಡಿದ ಬ್ಯಾಂಕ್ ಖಾತೆಗಳಲ್ಲಿನ ವಹಿವಾಟಿನ ವಿವರ 800 ಕೋಟಿ ರೂ.ಗೂ ಹೆಚ್ಚಿದೆ ಎಂದು ಹೇಳಲಾಗಿದೆ.

Anil Ambani: ಅನಿಲ್ ಅಂಬಾನಿ ವಿರುದ್ಧ ಕಪ್ಪುಹಣ ಕಾಯ್ದೆ ಆದೇಶ; ಕಡಲಾಚೆಯ 800 ಕೋಟಿ ರೂ. ಆಸ್ತಿ ಪತ್ತೆ
ಅನಿಲ್ ಅಂಬಾನಿ
TV9 Web
| Edited By: |

Updated on: Jun 06, 2022 | 12:47 PM

Share

ಮುಂಬೈ: ಅನಿಲ್ ಅಂಬಾನಿ ವಿರುದ್ಧ ಕಪ್ಪು ಹಣ ಕಾಯ್ದೆಯ ಆದೇಶ ಹೊರಬಿದ್ದಿದ್ದು, ಅಘೋಷಿತ ಕಡಲಾಚೆಯ ಆಸ್ತಿಗಳು ಮತ್ತು ಹೂಡಿಕೆಗಳನ್ನು ಪತ್ತೆಹಚ್ಚಲಾಗಿದೆ. ಈ ಆರೋಪದಲ್ಲಿ ಆದಾಯ ತೆರಿಗೆ ತನಿಖಾ ವಿಭಾಗದ ಮುಂಬೈ ಘಟಕವು 2015ರ ಕಪ್ಪು ಹಣ ಕಾಯಿದೆ (BMA) ಅಡಿಯಲ್ಲಿ ರಿಲಯನ್ಸ್ (ADA) ಗ್ರೂಪ್‌ನ ಅಧ್ಯಕ್ಷ ಅನಿಲ್ ಅಂಬಾನಿ (Anil Ambani) ವಿರುದ್ಧ ಮಾರ್ಚ್ 2022ರಲ್ಲಿ ಅಂತಿಮ ಆದೇಶವನ್ನು ಜಾರಿಗೊಳಿಸಿತ್ತು. 2019ರಲ್ಲಿ ಮೊದಲ ಬಾರಿಗೆ ಅಘೋಷಿತ ಕಡಲಾಚೆಯ ಆಸ್ತಿಗಳ ಪ್ರಕರಣದಲ್ಲಿ ಕೈಗಾರಿಕೋದ್ಯಮಿ ಅನಿಲ್ ಅಂಬಾನಿಗೆ ನೋಟಿಸ್ ಜಾರಿ ಮಾಡಿದ ಬಳಿಕ ಕಪ್ಪು ಹಣ ಕಾಯ್ದೆಯ ಆದೇಶವನ್ನು ಸಲ್ಲಿಸಲಾಗಿದೆ.

ಈ ಆದೇಶವು ಕಡಲಾಚೆಯ ಘಟಕಗಳು ಮತ್ತು ಲಿಂಕ್ ಮಾಡಿದ ಬ್ಯಾಂಕ್ ಖಾತೆಗಳಲ್ಲಿನ ವಹಿವಾಟಿನ ವಿವರ 800 ಕೋಟಿ ರೂ.ಗೂ ಹೆಚ್ಚಿದೆ ಎಂದು ಹೇಳಲಾಗಿದೆ. ಈ ಅಂಕಿ- ಅಂಶವನ್ನು ಪ್ರಸ್ತುತ ರೂಪಾಯಿ- ಡಾಲರ್ ವಿನಿಮಯ ದರದ ಆಧಾರದ ಮೇಲೆ ಲೆಕ್ಕ ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಅನಿಲ್ ಅಂಬಾನಿಗೆ ಕಳುಹಿಸಿದ ಪ್ರಶ್ನೆಗಳಿಗೆ ಉತ್ತರವಿಲ್ಲ. 2020ರ ಫೆಬ್ರವರಿಯಲ್ಲಿ ಅನಿಲ್ ಅಂಬಾನಿ ದಿವಾಳಿ ಮತ್ತು ಅವರ ನಿವ್ವಳ ಮೌಲ್ಯ ಶೂನ್ಯವಾಗಿದೆ ಎಂದು ಯುಕೆ ನ್ಯಾಯಾಲಯಕ್ಕೆ ಅನಿಲ್ ಅಂಬಾನಿ ಘೋಷಿಸಿದ್ದರು.

ಇದನ್ನೂ ಓದಿ: Mukesh Ambani Birthday: ಭಾರತದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಬಾಲ್ಯ, ಐಷಾರಾಮಿ ನಿವಾಸದ ಕುರಿತ ಕುತೂಹಲಕರ ಮಾಹಿತಿ

ಬಹಾಮಾಸ್‌ನಲ್ಲಿ ಅನಿಲ್ ಅಂಬಾನಿ ಅವರು 2006ರಲ್ಲಿ ಡ್ರೀಮ್‌ವರ್ಕ್ ಹೋಲ್ಡಿಂಗ್ಸ್ ಇಂಕ್ ಎಂಬ ವಿದೇಶಿ ಕಂಪನಿಯೊಂದಿಗೆ ಡೈಮಂಡ್ ಟ್ರಸ್ಟ್ ಸ್ಥಾಪಿಸಿದರು. 2010ರಲ್ಲಿ BVIಯಲ್ಲಿ ಅನಿಲ್ ಅಂಬಾನಿ ಮತ್ತೊಂದು ಅಘೋಷಿತ ಕಡಲಾಚೆಯ ಕಂಪನಿ ಮೇಲೆ ಹೂಡಿಕೆ ಮಾಡಿದ್ದರು. ಇದು ನಾರ್ತ್ ಅಟ್ಲಾಂಟಿಕ್ ಟ್ರೇಡಿಂಗ್ ಅನ್ಲಿಮಿಟೆಡ್ ಆಗಿದೆ.

ಈ ಕಂಪನಿಯು ಬ್ಯಾಂಕ್ ಆಫ್ ಸೈಪ್ರಸ್‌ನೊಂದಿಗೆ ಲಿಂಕ್ ಮಾಡಿದ ಬ್ಯಾಂಕ್ ಖಾತೆಯನ್ನು ಹೊಂದಿರುವುದು ಕಂಡುಬಂದಿದೆ. “ಪಂಡೋರಾ ಪೇಪರ್ಸ್” ತನಿಖೆಯಲ್ಲಿ ಅನಿಲ್ ಅಂಬಾನಿಯೊಂದಿಗೆ ಸಂಪರ್ಕ ಹೊಂದಿದ 18 ಘಟಕಗಳಲ್ಲಿ ಈ ಘಟಕವೂ ಸೇರಿದೆ. ಕಡಲಾಚೆಯ ಆಸ್ತಿಗಳ ಮೇಲೆ ಯಾವುದೇ ಶುಲ್ಕವಿಲ್ಲದೆ ಈ ವಿದೇಶಿ ಬ್ಯಾಂಕ್ ಖಾತೆಗಳಲ್ಲಿ ಗಣನೀಯ ವಹಿವಾಟುಗಳು ನಡೆದಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ