AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನು ಹೋರಾಟಕ್ಕೆ ಮನೆಯಲ್ಲಿದ್ದ ಚಿನ್ನಾಭರಣ ಮಾರಿರುವೆ: ಅನಿಲ್​ ಅಂಬಾನಿ

ಒಂದೆಡೆ ದೇಶದ ಪ್ರತಿಷ್ಠಿತ ಹಾಗೂ ಅತಿ ದೊಡ್ಡ ಶ್ರೀಮಂತರಾಗಿ ರಿಲಯನ್ಸ್​ ಸಂಸ್ಥೆ ಮುಖ್ಯಸ್ಥ ಮುಖೇಶ್​ ಅಂಬಾನಿ ರಾರಾಜಿಸುತ್ತಿದ್ದರೆ ಇತ್ತ ಅವರ ಸಹೋದರ ಅನಿಲ್ ಅಂಬಾನಿ ದಿವಾಳಿಯಾಗುವ ಸ್ಥಿತಿ ತಲುಪಿದ್ದಾರೆ. ಚೀನಾ ಮೂಲದ ಬ್ಯಾಂಕ್‌ನಿಂದ ಪಡೆದ ಸಾಲವನ್ನು ಮರುಪಾವತಿಸಲಾಗದ ಹಿನ್ನೆಲೆಯಲ್ಲಿ ಅನಿಲ್ ಅಂಬಾನಿ ವಿರುದ್ಧ ಬ್ಯಾಂಕ್‌ ಕೇಸ್ ದಾಖಲಿಸಿತ್ತು. ಲಂಡನ್ ಕೋರ್ಟ್‌ನಲ್ಲಿ ಚೀನಾ ಬ್ಯಾಂಕ್​ ಕೇಸ್ ದಾಖಲಿಸಿದೆ. ಇದೀಗ, ಬ್ಯಾಂಕ್​ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಅನಿಲ್​ ಅಂಬಾನಿ ಹೋರಾಟಕ್ಕೆ ಮನೆಯಲ್ಲಿದ್ದ ಚಿನ್ನಾಭರಣವನ್ನೆಲ್ಲಾ ಮಾರಾಟ ಮಾಡಿದ್ದೇನೆ ಎಂದು ಲಂಡನ್ […]

ಕಾನೂನು ಹೋರಾಟಕ್ಕೆ ಮನೆಯಲ್ಲಿದ್ದ ಚಿನ್ನಾಭರಣ ಮಾರಿರುವೆ: ಅನಿಲ್​ ಅಂಬಾನಿ
KUSHAL V
|

Updated on:Sep 26, 2020 | 1:55 PM

Share

ಒಂದೆಡೆ ದೇಶದ ಪ್ರತಿಷ್ಠಿತ ಹಾಗೂ ಅತಿ ದೊಡ್ಡ ಶ್ರೀಮಂತರಾಗಿ ರಿಲಯನ್ಸ್​ ಸಂಸ್ಥೆ ಮುಖ್ಯಸ್ಥ ಮುಖೇಶ್​ ಅಂಬಾನಿ ರಾರಾಜಿಸುತ್ತಿದ್ದರೆ ಇತ್ತ ಅವರ ಸಹೋದರ ಅನಿಲ್ ಅಂಬಾನಿ ದಿವಾಳಿಯಾಗುವ ಸ್ಥಿತಿ ತಲುಪಿದ್ದಾರೆ.

ಚೀನಾ ಮೂಲದ ಬ್ಯಾಂಕ್‌ನಿಂದ ಪಡೆದ ಸಾಲವನ್ನು ಮರುಪಾವತಿಸಲಾಗದ ಹಿನ್ನೆಲೆಯಲ್ಲಿ ಅನಿಲ್ ಅಂಬಾನಿ ವಿರುದ್ಧ ಬ್ಯಾಂಕ್‌ ಕೇಸ್ ದಾಖಲಿಸಿತ್ತು. ಲಂಡನ್ ಕೋರ್ಟ್‌ನಲ್ಲಿ ಚೀನಾ ಬ್ಯಾಂಕ್​ ಕೇಸ್ ದಾಖಲಿಸಿದೆ.

ಇದೀಗ, ಬ್ಯಾಂಕ್​ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಅನಿಲ್​ ಅಂಬಾನಿ ಹೋರಾಟಕ್ಕೆ ಮನೆಯಲ್ಲಿದ್ದ ಚಿನ್ನಾಭರಣವನ್ನೆಲ್ಲಾ ಮಾರಾಟ ಮಾಡಿದ್ದೇನೆ ಎಂದು ಲಂಡನ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಜೊತೆಗೆ, ಈಗಿನ ಕೋರ್ಟ್ ವೆಚ್ಚವನ್ನು ನನ್ನ ಪತ್ನಿ ಹಾಗೂ ಕುಟುಂಬದವರು ಭರಿಸುತ್ತಿದ್ದಾರೆ. ಇದಕ್ಕಾಗಿ, ನನ್ನ ಮಗ ಕೂಡ ಸಾಲ ಪಡೆದಿದ್ದಾನೆಂದು ಅನಿಲ್ ಅಂಬಾನಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅಂದ ಹಾಗೆ, ಜಗತ್ತಿನ ಆರನೇ ಅತಿದೊಡ್ಡ ಶ್ರೀಮಂತನಾಗಿದ್ದ ಅನಿಲ್ ಅಂಬಾನಿ‌ ಬಳಿ ಈಗ ಇರೋದು ಒಂದೇ ಕಾರ್‌. ಖ್ಯಾತ ಉದ್ಯಮಿ ಇದೀಗ ಸರಳ ಜೀವನ‌ ನಡೆಸುತ್ತಿದ್ದಾರಂತೆ.

ಜೊತೆಗೆ, ತಾಯಿ ಕೋಕಿಲಾ ಬೆನ್​ರಿಂದ 500 ಕೋಟಿ ರೂಪಾಯಿ ಸಾಲ ಪಡೆದಿದ್ದು ತಮ್ಮ ಪುತ್ರ ಅನಮೋಲ್​ನಿಂದ ಸಹ 310 ಕೋಟಿ ರೂಪಾಯಿ ಸಾಲ ಪಡೆದಿದ್ದೇನೆ ಎಂದು ಲಂಡನ್ ಕೋರ್ಟ್​ಗೆ ತಿಳಿಸಿದ್ದಾರೆ. ಇದಲ್ಲದೆ, ತಮ್ಮ ಬಳಿಯಿರುವ ಆರ್ಟ್ ಕಲೆಕ್ಷನ್ ಎಲ್ಲಾ ತಮ್ಮ ಪತ್ನಿ ಟೀನಾಳ ಸಂಗ್ರಹಗಳು ಎಂದು ಹೇಳಿದ್ದಾರೆ.

Published On - 11:34 am, Sat, 26 September 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ