AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನು ಹೋರಾಟಕ್ಕೆ ಮನೆಯಲ್ಲಿದ್ದ ಚಿನ್ನಾಭರಣ ಮಾರಿರುವೆ: ಅನಿಲ್​ ಅಂಬಾನಿ

ಒಂದೆಡೆ ದೇಶದ ಪ್ರತಿಷ್ಠಿತ ಹಾಗೂ ಅತಿ ದೊಡ್ಡ ಶ್ರೀಮಂತರಾಗಿ ರಿಲಯನ್ಸ್​ ಸಂಸ್ಥೆ ಮುಖ್ಯಸ್ಥ ಮುಖೇಶ್​ ಅಂಬಾನಿ ರಾರಾಜಿಸುತ್ತಿದ್ದರೆ ಇತ್ತ ಅವರ ಸಹೋದರ ಅನಿಲ್ ಅಂಬಾನಿ ದಿವಾಳಿಯಾಗುವ ಸ್ಥಿತಿ ತಲುಪಿದ್ದಾರೆ. ಚೀನಾ ಮೂಲದ ಬ್ಯಾಂಕ್‌ನಿಂದ ಪಡೆದ ಸಾಲವನ್ನು ಮರುಪಾವತಿಸಲಾಗದ ಹಿನ್ನೆಲೆಯಲ್ಲಿ ಅನಿಲ್ ಅಂಬಾನಿ ವಿರುದ್ಧ ಬ್ಯಾಂಕ್‌ ಕೇಸ್ ದಾಖಲಿಸಿತ್ತು. ಲಂಡನ್ ಕೋರ್ಟ್‌ನಲ್ಲಿ ಚೀನಾ ಬ್ಯಾಂಕ್​ ಕೇಸ್ ದಾಖಲಿಸಿದೆ. ಇದೀಗ, ಬ್ಯಾಂಕ್​ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಅನಿಲ್​ ಅಂಬಾನಿ ಹೋರಾಟಕ್ಕೆ ಮನೆಯಲ್ಲಿದ್ದ ಚಿನ್ನಾಭರಣವನ್ನೆಲ್ಲಾ ಮಾರಾಟ ಮಾಡಿದ್ದೇನೆ ಎಂದು ಲಂಡನ್ […]

ಕಾನೂನು ಹೋರಾಟಕ್ಕೆ ಮನೆಯಲ್ಲಿದ್ದ ಚಿನ್ನಾಭರಣ ಮಾರಿರುವೆ: ಅನಿಲ್​ ಅಂಬಾನಿ
KUSHAL V
|

Updated on:Sep 26, 2020 | 1:55 PM

Share

ಒಂದೆಡೆ ದೇಶದ ಪ್ರತಿಷ್ಠಿತ ಹಾಗೂ ಅತಿ ದೊಡ್ಡ ಶ್ರೀಮಂತರಾಗಿ ರಿಲಯನ್ಸ್​ ಸಂಸ್ಥೆ ಮುಖ್ಯಸ್ಥ ಮುಖೇಶ್​ ಅಂಬಾನಿ ರಾರಾಜಿಸುತ್ತಿದ್ದರೆ ಇತ್ತ ಅವರ ಸಹೋದರ ಅನಿಲ್ ಅಂಬಾನಿ ದಿವಾಳಿಯಾಗುವ ಸ್ಥಿತಿ ತಲುಪಿದ್ದಾರೆ.

ಚೀನಾ ಮೂಲದ ಬ್ಯಾಂಕ್‌ನಿಂದ ಪಡೆದ ಸಾಲವನ್ನು ಮರುಪಾವತಿಸಲಾಗದ ಹಿನ್ನೆಲೆಯಲ್ಲಿ ಅನಿಲ್ ಅಂಬಾನಿ ವಿರುದ್ಧ ಬ್ಯಾಂಕ್‌ ಕೇಸ್ ದಾಖಲಿಸಿತ್ತು. ಲಂಡನ್ ಕೋರ್ಟ್‌ನಲ್ಲಿ ಚೀನಾ ಬ್ಯಾಂಕ್​ ಕೇಸ್ ದಾಖಲಿಸಿದೆ.

ಇದೀಗ, ಬ್ಯಾಂಕ್​ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ಅನಿಲ್​ ಅಂಬಾನಿ ಹೋರಾಟಕ್ಕೆ ಮನೆಯಲ್ಲಿದ್ದ ಚಿನ್ನಾಭರಣವನ್ನೆಲ್ಲಾ ಮಾರಾಟ ಮಾಡಿದ್ದೇನೆ ಎಂದು ಲಂಡನ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಜೊತೆಗೆ, ಈಗಿನ ಕೋರ್ಟ್ ವೆಚ್ಚವನ್ನು ನನ್ನ ಪತ್ನಿ ಹಾಗೂ ಕುಟುಂಬದವರು ಭರಿಸುತ್ತಿದ್ದಾರೆ. ಇದಕ್ಕಾಗಿ, ನನ್ನ ಮಗ ಕೂಡ ಸಾಲ ಪಡೆದಿದ್ದಾನೆಂದು ಅನಿಲ್ ಅಂಬಾನಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅಂದ ಹಾಗೆ, ಜಗತ್ತಿನ ಆರನೇ ಅತಿದೊಡ್ಡ ಶ್ರೀಮಂತನಾಗಿದ್ದ ಅನಿಲ್ ಅಂಬಾನಿ‌ ಬಳಿ ಈಗ ಇರೋದು ಒಂದೇ ಕಾರ್‌. ಖ್ಯಾತ ಉದ್ಯಮಿ ಇದೀಗ ಸರಳ ಜೀವನ‌ ನಡೆಸುತ್ತಿದ್ದಾರಂತೆ.

ಜೊತೆಗೆ, ತಾಯಿ ಕೋಕಿಲಾ ಬೆನ್​ರಿಂದ 500 ಕೋಟಿ ರೂಪಾಯಿ ಸಾಲ ಪಡೆದಿದ್ದು ತಮ್ಮ ಪುತ್ರ ಅನಮೋಲ್​ನಿಂದ ಸಹ 310 ಕೋಟಿ ರೂಪಾಯಿ ಸಾಲ ಪಡೆದಿದ್ದೇನೆ ಎಂದು ಲಂಡನ್ ಕೋರ್ಟ್​ಗೆ ತಿಳಿಸಿದ್ದಾರೆ. ಇದಲ್ಲದೆ, ತಮ್ಮ ಬಳಿಯಿರುವ ಆರ್ಟ್ ಕಲೆಕ್ಷನ್ ಎಲ್ಲಾ ತಮ್ಮ ಪತ್ನಿ ಟೀನಾಳ ಸಂಗ್ರಹಗಳು ಎಂದು ಹೇಳಿದ್ದಾರೆ.

Published On - 11:34 am, Sat, 26 September 20

Follow Us
KUSHAL V
KUSHAL V
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು