AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣ ವಿಶ್ವದ ಆಗರ್ಭ ಶ್ರೀಮಂತ, ತಮ್ಮ ದಿವಾಳಿಯತ್ತ..

ಮುಂಬೈ:ನಖಶಿಖಾಂತ ಸಾಲದ ಹೊರೆಯಲ್ಲಿ ಮುಳುಗಿರುವ ಅನಿಲ್ ಅಂಬಾನಿ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ತೆಗೆದುಕೊಂಡ ಸಾಲವನ್ನು ಹಿಂತಿರುಗಿಸಲು ವಿಫಲರಾದ ಕಾರಣ ಯೆಸ್ ಬ್ಯಾಂಕ್, ಅನಿಲ್ಗೆ ಸೇರಿದ ಮೂರು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್ ಮೂಲಗಳ ಪ್ರಕಾರ, ಅನಿಲ್ ಧೀರುಭಾಯಿ ಅಂಬಾನಿ ಗ್ರೂಪ್ (ಎಡಿಎಜಿ), 2,892 ಕೋಟಿ ರೂಪಾಯಿಗಳನ್ನು ಮರುಪಾವತಿಸಬೇಕಿದೆ. ಮೇ ತಿಂಗಳ ಮೊದಲ ವಾರದಲ್ಲೇ ಬ್ಯಾಂಕು ಆನಿಲ್ಗೆ ನೊಟೀಸೊಂದನ್ನು ಜಾರಿ ಮಾಡಿ 60 ದಿನದೊಳಗಾಗಿ ಬಾಕಿ ಚುಕ್ತಾ ಮಾಡುವಂತೆ ಹೇಳಿತ್ತು. ಆದರೆ ಡೆಡ್ಲೈನ್ ಮುಗಿದರೂ ಅನಿಲ್ ಹಣ ಹಿಂತಿರುಗಿಸುವ […]

ಅಣ್ಣ ವಿಶ್ವದ ಆಗರ್ಭ ಶ್ರೀಮಂತ, ತಮ್ಮ ದಿವಾಳಿಯತ್ತ..
ಸಾಧು ಶ್ರೀನಾಥ್​
|

Updated on: Jul 31, 2020 | 1:48 PM

Share

ಮುಂಬೈ:ನಖಶಿಖಾಂತ ಸಾಲದ ಹೊರೆಯಲ್ಲಿ ಮುಳುಗಿರುವ ಅನಿಲ್ ಅಂಬಾನಿ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ತೆಗೆದುಕೊಂಡ ಸಾಲವನ್ನು ಹಿಂತಿರುಗಿಸಲು ವಿಫಲರಾದ ಕಾರಣ ಯೆಸ್ ಬ್ಯಾಂಕ್, ಅನಿಲ್ಗೆ ಸೇರಿದ ಮೂರು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಬ್ಯಾಂಕ್ ಮೂಲಗಳ ಪ್ರಕಾರ, ಅನಿಲ್ ಧೀರುಭಾಯಿ ಅಂಬಾನಿ ಗ್ರೂಪ್ (ಎಡಿಎಜಿ), 2,892 ಕೋಟಿ ರೂಪಾಯಿಗಳನ್ನು ಮರುಪಾವತಿಸಬೇಕಿದೆ. ಮೇ ತಿಂಗಳ ಮೊದಲ ವಾರದಲ್ಲೇ ಬ್ಯಾಂಕು ಆನಿಲ್ಗೆ ನೊಟೀಸೊಂದನ್ನು ಜಾರಿ ಮಾಡಿ 60 ದಿನದೊಳಗಾಗಿ ಬಾಕಿ ಚುಕ್ತಾ ಮಾಡುವಂತೆ ಹೇಳಿತ್ತು. ಆದರೆ ಡೆಡ್ಲೈನ್ ಮುಗಿದರೂ ಅನಿಲ್ ಹಣ ಹಿಂತಿರುಗಿಸುವ ಪ್ರಯತ್ನ ಮಾಡಲಿಲ್ಲ, ಹಾಗಾಗಿ ಅವರ ಆಸ್ತಿಗಳನ್ನು ಜಪ್ತಿ ಮಾಡಬೇಕಾಯಿತೆಂದು ಬ್ಯಾಂಕ್ ತಿಳಿಸಿದೆ.

ಮುಟ್ಟುಗೋಲು ಹಾಕಿಕೊಂಡಿರುವ ಎಡಿಎಜಿ ಆಸ್ತಿಗಳಲ್ಲಿ, ಸಾಂತಾಕ್ರೂಜ್ನಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿ (ರಿಲಯನ್ಸ್ ಸೆಂಟರ್), ದಕ್ಷಿಣ ಮುಂಬೈಯಲ್ಲಿರುವ ಎರಡು ಫ್ಲ್ಯಾಟುಗಳು ಸೇರಿವೆ. ಎಡಿಎಜಿ ಸಂಸ್ಥೆಗೆ ಸೇರಿದ ಎಲ್ಲಾ ಕಂಪನಿಗಳ ವಹಿವಾಟು ರಿಲಯನ್ಸ್ ಸೆಂಟರ್ನಿಂದಲೇ ನಡೆಯುತ್ತಿದ್ದವು. ಸಾಲದ ಸುಳಿಯಿಂದ ಹೊರಬರಲು ಅನಿಲ್ ಈ ಕಚೇರಿಯನ್ನು ಬೋಗ್ಯಕ್ಕೆ ನೀಡಲು ನಿರ್ಧರಿಸಿದ್ದು ಇತ್ತೀಚೆಗೆ ವರದಿಯಾಗಿತ್ತು.

ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಯೆಸ್ ಬ್ಯಾಂಕ್, ಸದರಿ ಆಸ್ತಿಗಳೊಂದಿಗೆ ಸಾರ್ವಜನಿಕರು ವ್ಯವಹಾರ ವಿಟ್ಟುಕೊಳ್ಳಬಾರದೆಂದು ಎಚ್ಚರಿಸಿದೆ.

ವಿಶ್ವದ ಐದನೇ ಅತಿದೊಡ್ಡ ಶ್ರೀಮಂತರೆನಿಸಿಕೊಂಡಿರುವ ಅನಿಲ್ ಅಂಬಾನಿಯ ಅಣ್ಣ ಮುಕೇಶ್ ಅಂಬಾನಿ ಹಿಂದೊಮ್ಮೆ ಸಹೋದರನ ನೆರವಿಗೆ ಧಾವಿಸಿ 5,000 ಕೋಟಿ ರೂಪಾಯಿಗಳಿಗೂ ಮೀರಿದ ಸಾಲವನ್ನು ತಾವೇ ತೀರಿಸಿದ್ದರು. ಮುಳುಗುತ್ತಿರುವ ತಮ್ಮನ ರಕ್ಷಣೆಗೆ ಅವರು ಪುನಃ ಹೋಗುವರೇ?

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ