ಅಣ್ಣ ವಿಶ್ವದ ಆಗರ್ಭ ಶ್ರೀಮಂತ, ತಮ್ಮ ದಿವಾಳಿಯತ್ತ..

ಮುಂಬೈ:ನಖಶಿಖಾಂತ ಸಾಲದ ಹೊರೆಯಲ್ಲಿ ಮುಳುಗಿರುವ ಅನಿಲ್ ಅಂಬಾನಿ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ತೆಗೆದುಕೊಂಡ ಸಾಲವನ್ನು ಹಿಂತಿರುಗಿಸಲು ವಿಫಲರಾದ ಕಾರಣ ಯೆಸ್ ಬ್ಯಾಂಕ್, ಅನಿಲ್ಗೆ ಸೇರಿದ ಮೂರು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್ ಮೂಲಗಳ ಪ್ರಕಾರ, ಅನಿಲ್ ಧೀರುಭಾಯಿ ಅಂಬಾನಿ ಗ್ರೂಪ್ (ಎಡಿಎಜಿ), 2,892 ಕೋಟಿ ರೂಪಾಯಿಗಳನ್ನು ಮರುಪಾವತಿಸಬೇಕಿದೆ. ಮೇ ತಿಂಗಳ ಮೊದಲ ವಾರದಲ್ಲೇ ಬ್ಯಾಂಕು ಆನಿಲ್ಗೆ ನೊಟೀಸೊಂದನ್ನು ಜಾರಿ ಮಾಡಿ 60 ದಿನದೊಳಗಾಗಿ ಬಾಕಿ ಚುಕ್ತಾ ಮಾಡುವಂತೆ ಹೇಳಿತ್ತು. ಆದರೆ ಡೆಡ್ಲೈನ್ ಮುಗಿದರೂ ಅನಿಲ್ ಹಣ ಹಿಂತಿರುಗಿಸುವ […]

ಅಣ್ಣ ವಿಶ್ವದ ಆಗರ್ಭ ಶ್ರೀಮಂತ, ತಮ್ಮ ದಿವಾಳಿಯತ್ತ..
ಸಾಧು ಶ್ರೀನಾಥ್​

Updated on: Jul 31, 2020 | 1:48 PM

ಮುಂಬೈ:ನಖಶಿಖಾಂತ ಸಾಲದ ಹೊರೆಯಲ್ಲಿ ಮುಳುಗಿರುವ ಅನಿಲ್ ಅಂಬಾನಿ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ. ತೆಗೆದುಕೊಂಡ ಸಾಲವನ್ನು ಹಿಂತಿರುಗಿಸಲು ವಿಫಲರಾದ ಕಾರಣ ಯೆಸ್ ಬ್ಯಾಂಕ್, ಅನಿಲ್ಗೆ ಸೇರಿದ ಮೂರು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಬ್ಯಾಂಕ್ ಮೂಲಗಳ ಪ್ರಕಾರ, ಅನಿಲ್ ಧೀರುಭಾಯಿ ಅಂಬಾನಿ ಗ್ರೂಪ್ (ಎಡಿಎಜಿ), 2,892 ಕೋಟಿ ರೂಪಾಯಿಗಳನ್ನು ಮರುಪಾವತಿಸಬೇಕಿದೆ. ಮೇ ತಿಂಗಳ ಮೊದಲ ವಾರದಲ್ಲೇ ಬ್ಯಾಂಕು ಆನಿಲ್ಗೆ ನೊಟೀಸೊಂದನ್ನು ಜಾರಿ ಮಾಡಿ 60 ದಿನದೊಳಗಾಗಿ ಬಾಕಿ ಚುಕ್ತಾ ಮಾಡುವಂತೆ ಹೇಳಿತ್ತು. ಆದರೆ ಡೆಡ್ಲೈನ್ ಮುಗಿದರೂ ಅನಿಲ್ ಹಣ ಹಿಂತಿರುಗಿಸುವ ಪ್ರಯತ್ನ ಮಾಡಲಿಲ್ಲ, ಹಾಗಾಗಿ ಅವರ ಆಸ್ತಿಗಳನ್ನು ಜಪ್ತಿ ಮಾಡಬೇಕಾಯಿತೆಂದು ಬ್ಯಾಂಕ್ ತಿಳಿಸಿದೆ.

ಮುಟ್ಟುಗೋಲು ಹಾಕಿಕೊಂಡಿರುವ ಎಡಿಎಜಿ ಆಸ್ತಿಗಳಲ್ಲಿ, ಸಾಂತಾಕ್ರೂಜ್ನಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿ (ರಿಲಯನ್ಸ್ ಸೆಂಟರ್), ದಕ್ಷಿಣ ಮುಂಬೈಯಲ್ಲಿರುವ ಎರಡು ಫ್ಲ್ಯಾಟುಗಳು ಸೇರಿವೆ. ಎಡಿಎಜಿ ಸಂಸ್ಥೆಗೆ ಸೇರಿದ ಎಲ್ಲಾ ಕಂಪನಿಗಳ ವಹಿವಾಟು ರಿಲಯನ್ಸ್ ಸೆಂಟರ್ನಿಂದಲೇ ನಡೆಯುತ್ತಿದ್ದವು. ಸಾಲದ ಸುಳಿಯಿಂದ ಹೊರಬರಲು ಅನಿಲ್ ಈ ಕಚೇರಿಯನ್ನು ಬೋಗ್ಯಕ್ಕೆ ನೀಡಲು ನಿರ್ಧರಿಸಿದ್ದು ಇತ್ತೀಚೆಗೆ ವರದಿಯಾಗಿತ್ತು.

ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಯೆಸ್ ಬ್ಯಾಂಕ್, ಸದರಿ ಆಸ್ತಿಗಳೊಂದಿಗೆ ಸಾರ್ವಜನಿಕರು ವ್ಯವಹಾರ ವಿಟ್ಟುಕೊಳ್ಳಬಾರದೆಂದು ಎಚ್ಚರಿಸಿದೆ.

ವಿಶ್ವದ ಐದನೇ ಅತಿದೊಡ್ಡ ಶ್ರೀಮಂತರೆನಿಸಿಕೊಂಡಿರುವ ಅನಿಲ್ ಅಂಬಾನಿಯ ಅಣ್ಣ ಮುಕೇಶ್ ಅಂಬಾನಿ ಹಿಂದೊಮ್ಮೆ ಸಹೋದರನ ನೆರವಿಗೆ ಧಾವಿಸಿ 5,000 ಕೋಟಿ ರೂಪಾಯಿಗಳಿಗೂ ಮೀರಿದ ಸಾಲವನ್ನು ತಾವೇ ತೀರಿಸಿದ್ದರು. ಮುಳುಗುತ್ತಿರುವ ತಮ್ಮನ ರಕ್ಷಣೆಗೆ ಅವರು ಪುನಃ ಹೋಗುವರೇ?

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us