AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಪರೀಕ್ಷೆಗೆ ಮಿಲಿಟರಿ ಮಾದರಿಯ ಭದ್ರತೆ ಬೇಕೇ? ವಿದ್ಯಾರ್ಥಿಗಳ ಮೇಲಿನ ಒತ್ತಡದ ಬಗ್ಗೆ ಅಣ್ಣಾಮಲೈ ಕಳವಳ

ತಮಿಳುನಾಡು ಮಾಜಿ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರು ನೀಟ್ (NEET) ಮರುಪರೀಕ್ಷೆಯ ಬಿಗಿ ಭದ್ರತೆಯನ್ನು ಪ್ರಶ್ನಿಸಿ ಮತ್ತು ವಿದ್ಯಾರ್ಥಿಗಳ ಮಾನಸಿಕ ಒತ್ತಡದ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿಗೆ ರಾಜೀನಾಮೆ ನೀಡಿದ್ದ ಅಣ್ಣಾಮಲೈ ಹೊಸ ರಾಜಕೀಯ ಪಕ್ಷ ಕಟ್ಟುವುದಾಗಿ ಘೋಷಿಸಿದ್ದರು. ಅವರ ಈ ನಿರ್ಧಾರಕ್ಕೆ ತಮಿಳುನಾಡಿನಲ್ಲಿ ಭಾರೀ ಬೆಂಬಲ ವ್ಯಕ್ತವಾಗಿತ್ತು. ದೇಶಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್ (NEET-UG) ಮರುಪರೀಕ್ಷೆಯ ಸಂದರ್ಭದಲ್ಲಿ ಕೈಗೊಳ್ಳಲಾಗಿದ್ದ ಅತ್ಯಂತ ಕಠಿಣ ಹಾಗೂ ಮಿಲಿಟರಿ ಮಾದರಿಯ ಭದ್ರತಾ ವ್ಯವಸ್ಥೆಯನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ತೀವ್ರವಾಗಿ ಪ್ರಶ್ನಿಸಿದ್ದಾರೆ.

ನೀಟ್ ಪರೀಕ್ಷೆಗೆ ಮಿಲಿಟರಿ ಮಾದರಿಯ ಭದ್ರತೆ ಬೇಕೇ? ವಿದ್ಯಾರ್ಥಿಗಳ ಮೇಲಿನ ಒತ್ತಡದ ಬಗ್ಗೆ ಅಣ್ಣಾಮಲೈ ಕಳವಳ
Annamalai Image Credit source: PTI
ಸುಷ್ಮಾ ಚಕ್ರೆ
|

Updated on: Jun 16, 2026 | 9:21 PM

Share

ಚೆನ್ನೈ, ಜೂನ್ 16: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿದ್ದ ನೀಟ್ ಪರೀಕ್ಷೆಯ (NEET Exam) ಅಕ್ರಮಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ಮರುಪರೀಕ್ಷೆಯ ಭದ್ರತಾ ವ್ಯವಸ್ಥೆಯ ವಿರುದ್ಧ ತಮಿಳುನಾಡು ಮಾಜಿ ಬಿಜೆಪಿ ನಾಯಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಧ್ವನಿ ಎತ್ತಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಜಾರಿಗೆ ತರಲಾದ ಮಿಲಿಟರಿ ಶೈಲಿಯ ಭದ್ರತೆಯು ವಿದ್ಯಾರ್ಥಿಗಳನ್ನು ಅಪರಾಧಿಗಳಂತೆ ನೋಡುವ ವಾತಾವರಣವನ್ನು ನಿರ್ಮಿಸುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಅತಿರೇಕದ ತಪಾಸಣಾ ಕ್ರಮಗಳು ಮತ್ತು ಪರೀಕ್ಷಾ ಕೇಂದ್ರಗಳ ವಾತಾವರಣವು ವಿದ್ಯಾರ್ಥಿಗಳಲ್ಲಿ ಅನಗತ್ಯ ಭಯ ಹಾಗೂ ತೀವ್ರ ಮಾನಸಿಕ ಒತ್ತಡವನ್ನು ಸೃಷ್ಟಿಸುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾಮಲೈ, ಪರೀಕ್ಷೆಯ ಪಾರದರ್ಶಕತೆಯನ್ನು ಕಾಪಾಡುವುದು ಮುಖ್ಯವಾದರೂ, ಅದು ವಿದ್ಯಾರ್ಥಿಗಳ ಮಾನಸಿಕ ನೆಮ್ಮದಿಯನ್ನು ಕದಡುವಂತಿರಬಾರದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಕಿವಿಮಾತು ಹೇಳಿದ್ದಾರೆ. ಪರೀಕ್ಷಾ ಕೇಂದ್ರಗಳ ಹೊರಗೆ ವಿದ್ಯಾರ್ಥಿಗಳನ್ನು ತಪಾಸಣೆ ನಡೆಸುವ ವಿಧಾನವನ್ನು ತೀವ್ರವಾಗಿ ಖಂಡಿಸಿದ ಅಣ್ಣಾಮಲೈ, ಇದು ಹದಿಹರೆಯದ ಯುವಜನರ ಮೇಲೆ ಬೀರುತ್ತಿರುವ ನಕಾರಾತ್ಮಕ ಪ್ರಭಾವವನ್ನು ಎತ್ತಿ ತೋರಿಸಿದರು.

ಇದನ್ನೂ ಓದಿ: ನೀಟ್ ಮರುಪರೀಕ್ಷೆ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ

ಮಕ್ಕಳು ಯುದ್ಧಭೂಮಿಗೆ ಹೋಗುತ್ತಿಲ್ಲ:

“ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬರುತ್ತಿದ್ದಾರೆಯೇ ಹೊರತು ಯಾವುದೇ ಯುದ್ಧಭೂಮಿಗೆ ಹೋಗುತ್ತಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಲಾಗುತ್ತಿರುವ ಮಿಲಿಟರಿ ದರ್ಜೆಯ ಭದ್ರತೆ ಮತ್ತು ಕಠಿಣ ನಿಯಮಗಳು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕವನ್ನು ಉಂಟುಮಾಡುತ್ತಿವೆ. ಶೂ ಬಿಚ್ಚಿಸುವುದು, ಬಟ್ಟೆಗಳ ತಪಾಸಣೆ ಮತ್ತು ಪೋಷಕರನ್ನು ದೂರವಿಡುವುದರಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಕುಗ್ಗುತ್ತಿದೆ. ಪ್ರಸ್ತುತ ಪರೀಕ್ಷಾ ವ್ಯವಸ್ಥೆಯು ವಿದ್ಯಾರ್ಥಿಗಳ ಜ್ಞಾನವನ್ನು ಪರೀಕ್ಷಿಸುವ ಬದಲು ಅವರ ಒತ್ತಡವನ್ನು ತಾಳುವ ಶಕ್ತಿಯನ್ನು ಪರೀಕ್ಷಿಸುತ್ತಿದೆ.” ಎಂದು ಕೆ. ಅಣ್ಣಾಮಲೈ ಹೇಳಿದ್ದಾರೆ.

ಇದನ್ನೂ ಓದಿ: NEET UG Re Exam 2026 Date: ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

ಇತ್ತೀಚಿನ ದಿನಗಳಲ್ಲಿ ನೀಟ್ ಪರೀಕ್ಷೆಯ ಭೀತಿ ಹಾಗೂ ಫಲಿತಾಂಶದ ಗೊಂದಲಗಳಿಂದಾಗಿ ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗುತ್ತಿರುವುದು ಮತ್ತು ಆತ್ಮಹತ್ಯೆಯಂತಹ ಘೋರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದನ್ನು ಅಣ್ಣಾಮಲೈ ಪ್ರಸ್ತಾಪಿಸಿದರು. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಮಾಡುವುದಷ್ಟೇ ಅಲ್ಲ, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಮುನ್ನವೇ ಸೂಕ್ತ ಮಾನಸಿಕ ಸಮಾಲೋಚನೆ ಮತ್ತು ಧೈರ್ಯ ತುಂಬುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಮಾಡಬೇಕು ಎಂದರು.

ಪರೀಕ್ಷಾ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಮತ್ತು ತಂತ್ರಜ್ಞಾನವನ್ನು ಬಳಸಿ ಡಿಜಿಟಲ್ ಮಾದರಿಯಲ್ಲಿ ಸುರಕ್ಷಿತವಾಗಿ ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಗೊಂದಲಮುಕ್ತ ವಾತಾವರಣ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ