ರಜನಿಕಾಂತ್​ ಯೋಗಿ ಆದಿತ್ಯನಾಥ್​ರ ಕಾಲಿಗೆ ನಮಸ್ಕರಿಸಿದ್ದರಲ್ಲಿ ತಪ್ಪೇನಿದೆ ಎಂದ ಅಣ್ಣಾಮಲೈ

ಸೂಪರ್​ಸ್ಟಾರ್ ರಜನಿಕಾಂತ್ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರ ಕಾಲಿಗೆ ಬಿದ್ದಿದ್ದರಲ್ಲಿ ತಪ್ಪೇನಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ಜೈಲರ್ ಸಿನಿಮಾ ಬಿಡುಗಡೆಯಾದ ಹೊಸ್ತಿಲಲ್ಲಿ ಸೂಪರ್​ಸ್ಟಾರ್ ರಜನಿಕಾಂತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದರು, ಈ ಸಮಯದಲ್ಲಿ ಯೋಗಿ ಕಾಲಿಗೆ ನಮಸ್ಕರಿಸಿದ್ದರು.

ರಜನಿಕಾಂತ್​ ಯೋಗಿ ಆದಿತ್ಯನಾಥ್​ರ ಕಾಲಿಗೆ ನಮಸ್ಕರಿಸಿದ್ದರಲ್ಲಿ ತಪ್ಪೇನಿದೆ ಎಂದ ಅಣ್ಣಾಮಲೈ
ರಜಿನಿಕಾಂತ್Image Credit source: India Today
Follow us
|

Updated on:Aug 23, 2023 | 7:53 AM

ಸೂಪರ್​ಸ್ಟಾರ್ ರಜನಿಕಾಂತ್ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರ ಕಾಲಿಗೆ ಬಿದ್ದಿದ್ದರಲ್ಲಿ ತಪ್ಪೇನಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ಜೈಲರ್ ಸಿನಿಮಾ ಬಿಡುಗಡೆಯಾದ ಹೊಸ್ತಿಲಲ್ಲಿ ಸೂಪರ್​ಸ್ಟಾರ್ ರಜನಿಕಾಂತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದರು, ಈ ಸಮಯದಲ್ಲಿ ಯೋಗಿ ಕಾಲಿಗೆ ನಮಸ್ಕರಿಸಿದ್ದರು.

ಈ ಕುರಿತು ಅಣ್ಣಾಮಲೈ ಮಾತನಾಡಿ, ‘ಗೌರವಾರ್ಥವಾಗಿ ಯೋಗಿ ಅವರ ಕಾಲಿಗೆ ಬಿದ್ದಿದ್ದಾರೆ ಅದರಲ್ಲಿ ತಪ್ಪೇನಿಲ್ಲ, ಅವರು ಸನ್ಯಾಸಿ, ಜನರು ಅವರನ್ನು ಯೋಗಿ ಮಹಾರಾಜ್ ಎಂದೇ ಕರೆಯುತ್ತಾರೆ, ಯೋಗಿ ಅವರಿಗೆ ರಜನಿಕಾಂತ್ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ’ ಎಂದರು. ಕೆಲವು ಕೆಲಸವಿಲ್ಲದ ರಾಜಕೀಯ ಪಕ್ಷಗಳು ಮತ್ತು ಅದರ ಮುಖಂಡರುಗಳು ಎಲ್ಲವನ್ನೂ ಟೀಕಿಸಲು ಪ್ರಾರಂಭಿಸಿದರೆ ಇದಕ್ಕೆ ಅಂತ್ಯವೆಂಬುದೇ ಇರುವುದಿಲ್ಲ.

ಡಿಎಂಕೆ ಸಚಿವ ಅನ್ಬಿಲ್ ಮಹೇಶ್ ಅವರಿಂದ 20 ರೂಪಾಯಿ ಪಡೆಯಲು ವ್ಯಕ್ತಿಯೊಬ್ಬರು ಅವರ ಕಾಲಿಗೆ ಬಿದ್ದ ಉದಾಹರಣೆ ಇದೆ ಎಂದು ಅವರು ಆರೋಪಿಸಿದರು. ತಮಿಳುನಾಡಿನ ಸಚಿವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಕಾಲಿಗೆ ಬೀಳುತ್ತಾರೆ.

ಮತ್ತಷ್ಟು ಓದಿ: ಯೋಗಿ ಆದಿತ್ಯನಾಥ್ ಕಾಲಿಗೆ ಬಿದ್ದ ರಜನಿಕಾಂತ್​; ಇಬ್ಬರ ನಡುವೆ ವಯಸ್ಸಿನ ಅಂತರ ಎಷ್ಟು?

ಅದೇ ರೀತಿ ಉದಯನಿಧಿ ಸ್ಟಾಲಿನ್ ಅವರಿಗಿಂತ ಹಿರಿಯ ಶಾಸಕರೊಬ್ಬರು ವಿಧಾನಸಭೆಯಲ್ಲಿ ಅವರಿಗೆ ನಮಸ್ಕರಿಸಿದ್ದರು. ರಜನಿಕಾಂತ್ ಅವರನ್ನು ಟೀಕಿಸುವ ಜನರು ಈ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದ ನಂತರ ರಜನಿಕಾಂತ್ ಅವರು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರನ್ನು ಭೇಟಿಯಾದರು ಎಂದು ಅಣ್ಣಾಮಲೈ ತಿಳಿಸಿದರು . ರಜನಿಕಾಂತ್ ರಾಜಕೀಯ ಪಕ್ಷದ ನಾಯಕರೊಂದಿಗೆ ಆತ್ಮೀಯ ಸಂಬಂಧವನ್ನು ಹಂಚಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:53 am, Wed, 23 August 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ