AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra: ಸರ್ವೇಶ್ವರನ ಭಕ್ತರಿಗೆ ಸಿಹಿ ಸುದ್ದಿ; ಅಮರನಾಥ ಯಾತ್ರೆಗೆ ಅನುಮತಿ

ಈ ಬಾರಿಯ ಅಮರನಾಥ ಯಾತ್ರೆ ಕೊರೊನಾ ನಿಯಮಾವಳಿಗಳ ಅನುಸಾರ ನಡೆಯಲಿದೆ. 56 ದಿನಗಳ ಕಾಲ ನಡೆಯುವ ಯಾತ್ರೆ, ಈ ಬಾರಿ ಆಗಸ್ಟ್ 22 ರಕ್ಷಾಬಂಧನ ದಿನದಂದು ಸಮಾಪ್ತಿಯಾಗಲಿದೆ.

Amarnath Yatra: ಸರ್ವೇಶ್ವರನ ಭಕ್ತರಿಗೆ ಸಿಹಿ ಸುದ್ದಿ; ಅಮರನಾಥ ಯಾತ್ರೆಗೆ ಅನುಮತಿ
ಅಮರನಾಥ ಯಾತ್ರೆ
Follow us
TV9 Web
| Updated By: ganapathi bhat

Updated on:Apr 06, 2022 | 7:08 PM

ದೆಹಲಿ: ಶಿವರಾತ್ರಿ ಕಳೆಯುತ್ತಿದ್ದಂತೆ ಭಕ್ತಾದಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ವಾರ್ಷಿಕ ಅಮರನಾಥ ಯಾತ್ರೆಯು ಜೂನ್ 28ರಿಂದ ಆರಂಭವಾಗಲಿದೆ ಎಂದು ಅಧಿಕೃತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಯಾತ್ರೆ ಕೈಗೊಂಡು, ದೇವರ ದರ್ಶನದಿಂದ ಪಾವನರಾಗಬೇಕು ಅನ್ನುವವರು ಏಪ್ರಿಲ್ 1ರ ಬಳಿಕ ರಿಜಿಸ್ಟ್ರೇಷನ್ ಮಾಡಿಕೊಳ್ಳಬಹುದು. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನೇತೃತ್ವದ ಶ್ರೀ ಅಮರನಾಥ್ ಶ್ರೈನ್ ಬೋರ್ಡ್​ನ 40ನೇ ಸಭೆಯಲ್ಲಿ (SASB) ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಬಾರಿಯ ಅಮರನಾಥ ಯಾತ್ರೆ ಕೊರೊನಾ ನಿಯಮಾವಳಿಗಳ ಅನುಸಾರ ನಡೆಯಲಿದೆ. 56 ದಿನಗಳ ಕಾಲ ನಡೆಯುವ ಯಾತ್ರೆ, ಈ ಬಾರಿ ಆಗಸ್ಟ್ 22 ರಕ್ಷಾಬಂಧನ ದಿನದಂದು ಸಮಾಪ್ತಿಯಾಗಲಿದೆ.

ದಕ್ಷಿಣ ಕಾಶ್ಮೀರದ ಹಿಮಾಲಯ ಭಾಗದಲ್ಲಿರುವ 3,880 ಮೀಟರ್ ಎತ್ತರದ ಗುಹಾ ದೇವಾಲಯದಲ್ಲಿ ಸಂಪ್ರದಾಯದ ಪ್ರಕಾರ, 56 ದಿನದ ಯಾತ್ರೆ ನಡೆಯಲಿದೆ. ಈ ಪವಿತ್ರ ಯಾತ್ರೆಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳಲು 446 ಕೇಂದ್ರಗಳು ಕೆಲಸ ಮಾಡಲಿವೆ. ಪಂಜಾಬ್ ನೇಷನಲ್ ಬ್ಯಾಂಕ್, ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ ಹಾಗೂ ಯೆಸ್ ಬ್ಯಾಂಕ್ 37 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ರಿಜಿಸ್ಟ್ರೇಷನ್ ಕೆಲಸ ನಿರ್ವಹಿಸಲಿವೆ.

ಮಾರ್ಚ್ 13ರಂದು ನಡೆದ ಸಭೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಆಡಳಿತ ದೇವಾಲಯದ ಪೂಜಾರಿಗಳ ಸಂಭಾವನೆಯನ್ನೂ ನಿಗಧಿ ಪಡಿಸಿದೆ. ದಿನ ಒಂದಕ್ಕೆ 1,500 ರೂಪಾಯಿ ಸಂಬಳ ನೀಡಲು ನಿರ್ಧರಿಸಿದೆ. ಇದೇ ಸಂಭಾವನೆ ಮುಂದಿನ ಮೂರು ವರ್ಷಗಳವರೆಗೆ ಇರಲಿದೆ. ಈ ಮೊದಲು ದೇವಾಲಯದ ಪೂಜಾರಿಗಳಿಗೆ 1,000 ರೂಪಾಯಿ ನೀಡಲಾಗುತ್ತಿತ್ತು.

ಕಳೆದ ವರ್ಷ ಕೊವಿಡ್-19 ಮಹಾಮಾರಿಯ ಕಾರಣದಿಂದ, ಅಮರನಾಥ ಯಾತ್ರೆ ಕೇವಲ ಸಾಧು-ಸಂತರಿಗೆ ಮಾತ್ರ ಸೀಮಿತವಾಗಿತ್ತು. 2019ರಲ್ಲಿ ಭಯೋತ್ಪಾದಕ ದಾಳಿ ಕಾರಣದಿಂದ ಅಮರನಾಥ ಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಆಗಸ್ಟ್ 2ರಂದು ಯಾತ್ರೆ ನಿಲ್ಲಿಸಲಾಗಿತ್ತು.

ಲಕ್ಷಾನುಲಕ್ಷ ಸಂಖ್ಯೆಯಲ್ಲಿ ಅಮರನಾಥ ಕ್ಷೇತ್ರಕ್ಕೆ ಭಕ್ತರು ಆಗಮಿಸುತ್ತಾರೆ. 2015ರಲ್ಲಿ ಅತಿ ಹೆಚ್ಚು ಸಂಖ್ಯೆಯ, 3.52 ಲಕ್ಷ ಯಾತ್ರಾರ್ಥಿಗಳು ದೇವರ ದರ್ಶನ ಪಡೆದಿದ್ದರು. 2016ರಲ್ಲಿ 3.20 ಲಕ್ಷ ಭಕ್ತರು ಇಲ್ಲಿಗೆ ಭೇಟಿ ನೀಡಿದ್ದರು. 2017ರಲ್ಲಿ 2.60 ಲಕ್ಷ ಹಾಗೂ 2018ರಲ್ಲಿ 2.85 ಲಕ್ಷ ಜನರು ಮತ್ತು 2019ರಲ್ಲಿ 3.42 ಲಕ್ಷ ಜನರು ಯಾತ್ರೆ ಕೈಗೊಂಡಿದ್ದರು.

ಇದನ್ನೂ ಓದಿ: ವಿದ್ವಾಂಸರ ವ್ಯಾಖ್ಯಾನವಿರುವ ಭಗವದ್ಗೀತೆಯ 11 ಸಂಪುಟ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಧಾರ್ಮಿಕ ಆರಾಧನಾ ಸ್ಥಳಗಳ ಪುನರುಜ್ಜೀವನದಲ್ಲಿ ಸಮಾನತೆ; ಕೇಂದ್ರ ಸರ್ಕಾರದ ನಿಲುವು ತಿಳಿಸಲು ಸುಪ್ರೀಂ ಸೂಚನೆ

Published On - 6:48 am, Sun, 14 March 21

ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ