AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಹೆಚ್ಚಿದ ವಾರ್ಷಿಕ ಅಂತರ್ಜಲ ಮರುಪೂರಣ: ವರದಿ ಬಿಡುಗಡೆ ಮಾಡಿದ ಕೇಂದ್ರ ಜಲ ಶಕ್ತಿ ಸಚಿವ ಶೇಖಾವತ್

ಮೌಲ್ಯಮಾಪನದಿಂದ ಸಂಗ್ರಹಿಸಿದ ಮಾಹಿತಿಯ ವಿವರವಾದ ವಿಶ್ಲೇಷಣೆಯು ದೇಶದಲ್ಲಿ ಅಂತರ್ಜಲ ಮರುಪೂರಣದಲ್ಲಿ ಹೆಚ್ಚಳವನ್ನು ತೋರಿಸಿದೆ ಎಂದು ಜಲಶಕ್ತಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಹೆಚ್ಚಿದ ವಾರ್ಷಿಕ ಅಂತರ್ಜಲ ಮರುಪೂರಣ: ವರದಿ ಬಿಡುಗಡೆ ಮಾಡಿದ ಕೇಂದ್ರ ಜಲ ಶಕ್ತಿ ಸಚಿವ ಶೇಖಾವತ್
ಸಕ್ರಿಯ ಅಂತರ್ಜಲ ಸಂಪನ್ಮೂಲಗಳ ಮೌಲ್ಯಮಾಪನ ವರದಿಯನ್ನು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಬಿಡುಗಡೆ ಮಾಡಿದರು.
Follow us
TV9 Web
| Updated By: Ganapathi Sharma

Updated on: Dec 01, 2023 | 9:20 PM

ನವದೆಹಲಿ, ಡಿಸೆಂಬರ್ 1: ದೇಶದಲ್ಲಿ ವಾರ್ಷಿಕ ಅಂತರ್ಜಲ ಮರುಪೂರಣ ಹೆಚ್ಚಾಗಿರುವುದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ‘ಸಕ್ರಿಯ ಅಂತರ್ಜಲ ಸಂಪನ್ಮೂಲಗಳ ಮೌಲ್ಯಮಾಪನ (Dynamic Ground Water Resource Assessment Report 2023) ವರದಿ’ಯಿಂದ ತಿಳಿದುಬಂದಿದೆ. ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಅವರು ಶುಕ್ರವಾರ ವರದಿ ಬಿಡುಗಡೆ ಮಾಡಿದರು. ಈ ವರದಿಯನ್ನು ಕೇಂದ್ರೀಯ ಅಂತರ್ಜಲ ಮಂಡಳಿ (CGWB) ಮತ್ತು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಜಂಟಿಯಾಗಿ ನಡೆಸಿದ ಮೌಲ್ಯಮಾಪನದಿಂದ ಸಿದ್ಧಪಡಿಸಲಾಗಿದೆ.

2023 ರ ಮೌಲ್ಯಮಾಪನ ವರದಿಯ ಪ್ರಕಾರ, ಇಡೀ ದೇಶಕ್ಕೆ ಒಟ್ಟು ವಾರ್ಷಿಕ ಅಂತರ್ಜಲ ಮರುಪೂರಣವು 449.08 ಶತಕೋಟಿ ಘನ ಮೀಟರ್ (BCM / ಬಿಲಿಯನ್ ಕ್ಯೂಬಿಕ್ ಮೀಟರ್) ಆಗಿದೆ. ಇದು ಹಿಂದಿನ ವರ್ಷಕ್ಕೆ (2022) ಹೋಲಿಸಿದರೆ 11.48 ಬಿಸಿಎಂ ಹೆಚ್ಚಳವನ್ನು ತೋರಿಸಿದೆ. ಇಡೀ ದೇಶದಲ್ಲಿ ವಾರ್ಷಿಕ ಅಂತರ್ಜಲ ಹೊರತೆಗೆಯುವಿಕೆ 241.34 ಬಿಸಿಎಂ ಆಗಿದೆ. ಇದಲ್ಲದೆ, ದೇಶದಲ್ಲಿ ಒಟ್ಟು 6,553 ಮೌಲ್ಯಮಾಪನ ಘಟಕಗಳಲ್ಲಿ, 736 ಘಟಕಗಳನ್ನು ‘ಅತಿಯಾಗಿ ಬಳಸಿಕೊಳ್ಳುವ’ ಘಟಕಗಳಾಗಿ ವರ್ಗೀಕರಿಸಲಾಗಿದೆ ಎಂದು ವರದಿಯ ಬಗ್ಗೆ ಜಲಶಕ್ತಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಮೌಲ್ಯಮಾಪನದಿಂದ ಸಂಗ್ರಹಿಸಿದ ಮಾಹಿತಿಯ ವಿವರವಾದ ವಿಶ್ಲೇಷಣೆಯು ಅಂತರ್ಜಲ ಮರುಪೂರಣದಲ್ಲಿ ಹೆಚ್ಚಳವನ್ನು ತೋರಿಸಿದೆ. ಇದು ಮುಖ್ಯವಾಗಿ ಕಾಲುವೆಯ ಸೋರಿಕೆಯಿಂದ ಮರುಪೂರಣ ಹೆಚ್ಚಳ, ನೀರಾವರಿ ನೀರಿನ ಹರಿವುಗಳನ್ನು ಹಿಂತೆಗೆದುಕೊಳ್ಳುವುದು ಮತ್ತು ಜಲಮೂಲಗಳು, ತೊಟ್ಟಿಗಳು ಮತ್ತು ಜಲಸಂರಕ್ಷಣಾ ರಚನೆಗಳಿಂದ ಮರುಪೂರಣಗೊಳಿಸುವಿಕೆಗೆ ಕಾರಣವಾಗಿದೆ. ಇಷ್ಟೇ ಅಲ್ಲದೆ, ಈ ವರ್ಷದ ವಿಶ್ಲೇಷಣೆಯು 2022 ರ ಮೌಲ್ಯಮಾಪನ ದತ್ತಾಂಶಕ್ಕೆ ಹೋಲಿಸಿದರೆ ದೇಶದಲ್ಲಿ 226 ಮೌಲ್ಯಮಾಪನ ಘಟಕಗಳಲ್ಲಿ ಅಂತರ್ಜಲ ಸ್ಥಿತಿಯಲ್ಲಿ ಸುಧಾರಣೆಯನ್ನು ತೋರಿಸಿದೆ. ಇದಲ್ಲದೆ, ಅತಿಯಾದ ಬಳಕೆಯ ಘಟಕಗಳ ಸಂಖ್ಯೆಯಲ್ಲಿ ಒಟ್ಟಾರೆ ಕಡಿತ ಮತ್ತು ಅಂತರ್ಜಲ ಶೋಷಣೆಯ ಮಟ್ಟದಲ್ಲಿನ ಕಡಿತವನ್ನು ಸಹ ಗಮನಿಸಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ; ತ್ವರಿತ ಮತ್ತು ಸಶಕ್ತ ನಿರ್ಣಯ ಬೆಂಬಲಿಸುವುದಾಗಿ ಹೇಳಿದ ಭಾರತ

ವರದಿ ಬಿಡುಗಡೆಯ ಸಂದರ್ಭದಲ್ಲಿ ಜಲಶಕ್ತಿ ಸಚಿವಾಲಯದ ಜಲಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಇಲಾಖೆಯ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯದರ್ಶಿ ವಿನಿ ಮಹಾಜನ್, ಜಲ ಶಕ್ತಿ ಸಚಿವಾಲಯದ ಜಂಟಿ ಕಾರ್ಯದರ್ಶಿ (ಆಡಳಿತ, IC&GW) ಸುಬೋಧ್ ಯಾದವ್ ಮತ್ತಿತರರು ಉಪಸ್ಥಿತರಿದ್ದರು ಎಂದು ಸಚಿವಾಲಯ ತಿಳಿಸಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ