AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರದಲ್ಲಿ ಮನೆಯ ನೆಲಮಾಳಿಗೆಗೆ ನುಗ್ಗಿದ ಮಳೆ ನೀರು; ಮಗು ಸೇರಿ ಮೂವರು ಸಾವು

ಭಾರೀ ಮಳೆಯಿಂದಾಗಿ ಜೈಪುರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ರಾಜ್ಯ ರಾಜಧಾನಿಯಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದೆ. ಜೈಪುರದ ವಿಶ್ವಕರ್ಮ ಪ್ರದೇಶದಲ್ಲಿ ನೆಲಮಾಳಿಗೆಯಲ್ಲಿ ನೀರು ತುಂಬಿದ ಪರಿಣಾಮ ಮೂವರು ಸಾವನ್ನಪ್ಪಿರುವುದು ದೃಢಪಟ್ಟಿದೆ.

ಜೈಪುರದಲ್ಲಿ ಮನೆಯ ನೆಲಮಾಳಿಗೆಗೆ ನುಗ್ಗಿದ ಮಳೆ ನೀರು; ಮಗು ಸೇರಿ ಮೂವರು ಸಾವು
ಜೈಪುರದ ಪ್ರವಾಹ
ಸುಷ್ಮಾ ಚಕ್ರೆ
|

Updated on: Aug 01, 2024 | 3:08 PM

Share

ಜೈಪುರ: ಪ್ರವಾಹದಿಂದಾಗಿ ದೆಹಲಿಯ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ಮೂವರು ಐಎಎಸ್ ಆಕಾಂಕ್ಷಿಗಳು ಸಾವನ್ನಪ್ಪಿದ ಕೆಲವೇ ದಿನಗಳಲ್ಲಿ, ರಾಜಸ್ಥಾನದ ಜೈಪುರದಲ್ಲಿ ಅಂತಹುದೇ ದುರಂತ ಸಂಭವಿಸಿದ್ದು, 3 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಭಾರೀ ಮಳೆಯಿಂದಾಗಿ ಜೈಪುರದ ಮನೆಯೊಂದರ ನೆಲಮಾಳಿಗೆಯು ಇಂದು ಜಲಾವೃತಗೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ ಹಾಗೂ ಮಳೆಯ ಪರಿಣಾಮವಾಗಿ ನಾಲ್ವರು ನಾಪತ್ತೆಯಾಗಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಆರಂಭವಾದ ಏಳು ಗಂಟೆಗಳ ಬಳಿಕ ಮೃತದೇಹಗಳನ್ನು ಹೊರತೆಗೆಯಲಾಯಿತು. ಜೈಪುರದಲ್ಲಿ ಮಳೆಯಿಂದಾಗಿ ನೆಲಮಾಳಿಗೆಯು ಜಲಾವೃತವಾಗಿತ್ತು. ಸಂತ್ರಸ್ತರು ಸಕಾಲದಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ದುರಂತವಾಗಿ ಮಳೆಯ ನೀರಿನಲ್ಲಿ ಮುಳುಗಿದ್ದಾರೆ.

ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೆ ಭಾರಿ ಮಳೆ

ಮನೆಯ ನೆಲಮಾಳಿಗೆಯಲ್ಲಿ ನೀರು ತುಂಬಿ ಮೃತಪಟ್ಟವರನ್ನು ಪೂರ್ವಿ (3), ಪೂಜಾ (19), ಮತ್ತು ಕಮಲ್ (24) ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ಕಮಲ ಮತ್ತು ಪೂಜಾ ದಿನಗೂಲಿ ಕಾರ್ಮಿಕರಾಗಿದ್ದು, ನಗರದ ವಿಶ್ವಕರ್ಮ ಪ್ರದೇಶದಲ್ಲಿ ವಾಸವಾಗಿದ್ದರು. ಜೈಪುರದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಅಧಿಕಾರಿಗಳು ಎಲ್ಲಾ ಶಾಲೆಗಳು ಮತ್ತು ಹಲವಾರು ಕಚೇರಿಗಳನ್ನು ಮುಚ್ಚಲು ಆದೇಶಿಸಿದ್ದಾರೆ.

ಜಾಮ್ಡೋಲಿ ಪ್ರದೇಶದಲ್ಲಿ ರಸ್ತೆಯೊಂದರಲ್ಲಿ ಗುಂಡಿ ಬಿದ್ದಿದೆ. ಅದರ ನಂತರ ಶಾಲಾ ಬಸ್, ಟ್ಯಾಕ್ಸಿ ಮತ್ತು ಬುಲ್ಡೋಜರ್ ಅಲ್ಲಿ ಸಿಲುಕಿಕೊಂಡವು. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಜೈಪುರದ ಮಹಾರಾಣಿ ಫಾರ್ಮ್ ಪ್ರದೇಶದ ಬಳಿ ಪ್ರವಾಹಕ್ಕೆ ಸಿಲುಕಿದ ದ್ರವಾವತಿ ನದಿಯಲ್ಲಿ ಕಾರೊಂದು ಕೊಚ್ಚಿ ಹೋಗಿದೆ. ಚಾಲಕ ಕಾರಿನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಗೋಪಾಲಪುರದ ಗಂಗೋತ್ರಿ ನಗರದಲ್ಲಿ ಮೂರು ಮನೆಗಳು ಕುಸಿದು ಇಬ್ಬರು ಗಾಯಗೊಂಡಿದ್ದಾರೆ. ಇದೇ ವೇಳೆ ಬಗ್ರು ಎಂಬಲ್ಲಿ 12 ವರ್ಷದ ಬಾಲಕ ಮಳೆಗೆ ಕೊಚ್ಚಿ ಹೋಗಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!