AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರದಲ್ಲಿ ಮನೆಯ ನೆಲಮಾಳಿಗೆಗೆ ನುಗ್ಗಿದ ಮಳೆ ನೀರು; ಮಗು ಸೇರಿ ಮೂವರು ಸಾವು

ಭಾರೀ ಮಳೆಯಿಂದಾಗಿ ಜೈಪುರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ರಾಜ್ಯ ರಾಜಧಾನಿಯಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದೆ. ಜೈಪುರದ ವಿಶ್ವಕರ್ಮ ಪ್ರದೇಶದಲ್ಲಿ ನೆಲಮಾಳಿಗೆಯಲ್ಲಿ ನೀರು ತುಂಬಿದ ಪರಿಣಾಮ ಮೂವರು ಸಾವನ್ನಪ್ಪಿರುವುದು ದೃಢಪಟ್ಟಿದೆ.

ಜೈಪುರದಲ್ಲಿ ಮನೆಯ ನೆಲಮಾಳಿಗೆಗೆ ನುಗ್ಗಿದ ಮಳೆ ನೀರು; ಮಗು ಸೇರಿ ಮೂವರು ಸಾವು
ಜೈಪುರದ ಪ್ರವಾಹ
ಸುಷ್ಮಾ ಚಕ್ರೆ
|

Updated on: Aug 01, 2024 | 3:08 PM

Share

ಜೈಪುರ: ಪ್ರವಾಹದಿಂದಾಗಿ ದೆಹಲಿಯ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ಮೂವರು ಐಎಎಸ್ ಆಕಾಂಕ್ಷಿಗಳು ಸಾವನ್ನಪ್ಪಿದ ಕೆಲವೇ ದಿನಗಳಲ್ಲಿ, ರಾಜಸ್ಥಾನದ ಜೈಪುರದಲ್ಲಿ ಅಂತಹುದೇ ದುರಂತ ಸಂಭವಿಸಿದ್ದು, 3 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಭಾರೀ ಮಳೆಯಿಂದಾಗಿ ಜೈಪುರದ ಮನೆಯೊಂದರ ನೆಲಮಾಳಿಗೆಯು ಇಂದು ಜಲಾವೃತಗೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ ಹಾಗೂ ಮಳೆಯ ಪರಿಣಾಮವಾಗಿ ನಾಲ್ವರು ನಾಪತ್ತೆಯಾಗಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಆರಂಭವಾದ ಏಳು ಗಂಟೆಗಳ ಬಳಿಕ ಮೃತದೇಹಗಳನ್ನು ಹೊರತೆಗೆಯಲಾಯಿತು. ಜೈಪುರದಲ್ಲಿ ಮಳೆಯಿಂದಾಗಿ ನೆಲಮಾಳಿಗೆಯು ಜಲಾವೃತವಾಗಿತ್ತು. ಸಂತ್ರಸ್ತರು ಸಕಾಲದಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ದುರಂತವಾಗಿ ಮಳೆಯ ನೀರಿನಲ್ಲಿ ಮುಳುಗಿದ್ದಾರೆ.

ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೆ ಭಾರಿ ಮಳೆ

ಮನೆಯ ನೆಲಮಾಳಿಗೆಯಲ್ಲಿ ನೀರು ತುಂಬಿ ಮೃತಪಟ್ಟವರನ್ನು ಪೂರ್ವಿ (3), ಪೂಜಾ (19), ಮತ್ತು ಕಮಲ್ (24) ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ಕಮಲ ಮತ್ತು ಪೂಜಾ ದಿನಗೂಲಿ ಕಾರ್ಮಿಕರಾಗಿದ್ದು, ನಗರದ ವಿಶ್ವಕರ್ಮ ಪ್ರದೇಶದಲ್ಲಿ ವಾಸವಾಗಿದ್ದರು. ಜೈಪುರದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಅಧಿಕಾರಿಗಳು ಎಲ್ಲಾ ಶಾಲೆಗಳು ಮತ್ತು ಹಲವಾರು ಕಚೇರಿಗಳನ್ನು ಮುಚ್ಚಲು ಆದೇಶಿಸಿದ್ದಾರೆ.

ಜಾಮ್ಡೋಲಿ ಪ್ರದೇಶದಲ್ಲಿ ರಸ್ತೆಯೊಂದರಲ್ಲಿ ಗುಂಡಿ ಬಿದ್ದಿದೆ. ಅದರ ನಂತರ ಶಾಲಾ ಬಸ್, ಟ್ಯಾಕ್ಸಿ ಮತ್ತು ಬುಲ್ಡೋಜರ್ ಅಲ್ಲಿ ಸಿಲುಕಿಕೊಂಡವು. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಜೈಪುರದ ಮಹಾರಾಣಿ ಫಾರ್ಮ್ ಪ್ರದೇಶದ ಬಳಿ ಪ್ರವಾಹಕ್ಕೆ ಸಿಲುಕಿದ ದ್ರವಾವತಿ ನದಿಯಲ್ಲಿ ಕಾರೊಂದು ಕೊಚ್ಚಿ ಹೋಗಿದೆ. ಚಾಲಕ ಕಾರಿನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಗೋಪಾಲಪುರದ ಗಂಗೋತ್ರಿ ನಗರದಲ್ಲಿ ಮೂರು ಮನೆಗಳು ಕುಸಿದು ಇಬ್ಬರು ಗಾಯಗೊಂಡಿದ್ದಾರೆ. ಇದೇ ವೇಳೆ ಬಗ್ರು ಎಂಬಲ್ಲಿ 12 ವರ್ಷದ ಬಾಲಕ ಮಳೆಗೆ ಕೊಚ್ಚಿ ಹೋಗಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ