AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಪುರದಲ್ಲಿ ಮನೆಯ ನೆಲಮಾಳಿಗೆಗೆ ನುಗ್ಗಿದ ಮಳೆ ನೀರು; ಮಗು ಸೇರಿ ಮೂವರು ಸಾವು

ಭಾರೀ ಮಳೆಯಿಂದಾಗಿ ಜೈಪುರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ರಾಜ್ಯ ರಾಜಧಾನಿಯಾದ್ಯಂತ ಟ್ರಾಫಿಕ್ ಜಾಮ್ ಉಂಟಾಗಿದೆ. ಜೈಪುರದ ವಿಶ್ವಕರ್ಮ ಪ್ರದೇಶದಲ್ಲಿ ನೆಲಮಾಳಿಗೆಯಲ್ಲಿ ನೀರು ತುಂಬಿದ ಪರಿಣಾಮ ಮೂವರು ಸಾವನ್ನಪ್ಪಿರುವುದು ದೃಢಪಟ್ಟಿದೆ.

ಜೈಪುರದಲ್ಲಿ ಮನೆಯ ನೆಲಮಾಳಿಗೆಗೆ ನುಗ್ಗಿದ ಮಳೆ ನೀರು; ಮಗು ಸೇರಿ ಮೂವರು ಸಾವು
ಜೈಪುರದ ಪ್ರವಾಹ
ಸುಷ್ಮಾ ಚಕ್ರೆ
|

Updated on: Aug 01, 2024 | 3:08 PM

Share

ಜೈಪುರ: ಪ್ರವಾಹದಿಂದಾಗಿ ದೆಹಲಿಯ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆಯಲ್ಲಿ ಮೂವರು ಐಎಎಸ್ ಆಕಾಂಕ್ಷಿಗಳು ಸಾವನ್ನಪ್ಪಿದ ಕೆಲವೇ ದಿನಗಳಲ್ಲಿ, ರಾಜಸ್ಥಾನದ ಜೈಪುರದಲ್ಲಿ ಅಂತಹುದೇ ದುರಂತ ಸಂಭವಿಸಿದ್ದು, 3 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಭಾರೀ ಮಳೆಯಿಂದಾಗಿ ಜೈಪುರದ ಮನೆಯೊಂದರ ನೆಲಮಾಳಿಗೆಯು ಇಂದು ಜಲಾವೃತಗೊಂಡಿದ್ದು, ಮೂವರು ಸಾವನ್ನಪ್ಪಿದ್ದಾರೆ ಹಾಗೂ ಮಳೆಯ ಪರಿಣಾಮವಾಗಿ ನಾಲ್ವರು ನಾಪತ್ತೆಯಾಗಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಆರಂಭವಾದ ಏಳು ಗಂಟೆಗಳ ಬಳಿಕ ಮೃತದೇಹಗಳನ್ನು ಹೊರತೆಗೆಯಲಾಯಿತು. ಜೈಪುರದಲ್ಲಿ ಮಳೆಯಿಂದಾಗಿ ನೆಲಮಾಳಿಗೆಯು ಜಲಾವೃತವಾಗಿತ್ತು. ಸಂತ್ರಸ್ತರು ಸಕಾಲದಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ದುರಂತವಾಗಿ ಮಳೆಯ ನೀರಿನಲ್ಲಿ ಮುಳುಗಿದ್ದಾರೆ.

ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಆಗಸ್ಟ್ 6ರವರೆಗೆ ಭಾರಿ ಮಳೆ

ಮನೆಯ ನೆಲಮಾಳಿಗೆಯಲ್ಲಿ ನೀರು ತುಂಬಿ ಮೃತಪಟ್ಟವರನ್ನು ಪೂರ್ವಿ (3), ಪೂಜಾ (19), ಮತ್ತು ಕಮಲ್ (24) ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ಕಮಲ ಮತ್ತು ಪೂಜಾ ದಿನಗೂಲಿ ಕಾರ್ಮಿಕರಾಗಿದ್ದು, ನಗರದ ವಿಶ್ವಕರ್ಮ ಪ್ರದೇಶದಲ್ಲಿ ವಾಸವಾಗಿದ್ದರು. ಜೈಪುರದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಅಧಿಕಾರಿಗಳು ಎಲ್ಲಾ ಶಾಲೆಗಳು ಮತ್ತು ಹಲವಾರು ಕಚೇರಿಗಳನ್ನು ಮುಚ್ಚಲು ಆದೇಶಿಸಿದ್ದಾರೆ.

ಜಾಮ್ಡೋಲಿ ಪ್ರದೇಶದಲ್ಲಿ ರಸ್ತೆಯೊಂದರಲ್ಲಿ ಗುಂಡಿ ಬಿದ್ದಿದೆ. ಅದರ ನಂತರ ಶಾಲಾ ಬಸ್, ಟ್ಯಾಕ್ಸಿ ಮತ್ತು ಬುಲ್ಡೋಜರ್ ಅಲ್ಲಿ ಸಿಲುಕಿಕೊಂಡವು. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಜೈಪುರದ ಮಹಾರಾಣಿ ಫಾರ್ಮ್ ಪ್ರದೇಶದ ಬಳಿ ಪ್ರವಾಹಕ್ಕೆ ಸಿಲುಕಿದ ದ್ರವಾವತಿ ನದಿಯಲ್ಲಿ ಕಾರೊಂದು ಕೊಚ್ಚಿ ಹೋಗಿದೆ. ಚಾಲಕ ಕಾರಿನಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಗೋಪಾಲಪುರದ ಗಂಗೋತ್ರಿ ನಗರದಲ್ಲಿ ಮೂರು ಮನೆಗಳು ಕುಸಿದು ಇಬ್ಬರು ಗಾಯಗೊಂಡಿದ್ದಾರೆ. ಇದೇ ವೇಳೆ ಬಗ್ರು ಎಂಬಲ್ಲಿ 12 ವರ್ಷದ ಬಾಲಕ ಮಳೆಗೆ ಕೊಚ್ಚಿ ಹೋಗಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ