AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheetah Death: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು, ನಾಲ್ಕು ತಿಂಗಳಲ್ಲಿ 8ನೇ ಘಟನೆ

ಚೀತಾ ಸಾವು: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. 20 ಚೀತಾಗಳಲ್ಲಿ 4 ತಿಂಗಳಲ್ಲಿ ಒಟ್ಟು 8 ಚೀತಾಗಳು ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Cheetah Death: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು, ನಾಲ್ಕು ತಿಂಗಳಲ್ಲಿ 8ನೇ ಘಟನೆ
ಚೀತಾ
ಅಕ್ಷಯ್​ ಪಲ್ಲಮಜಲು​​
|

Updated on:Jul 14, 2023 | 5:11 PM

Share

ಭೋಪಾಲ್, ಜುಲೈ 14: ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ತರಲಾಗಿದ್ದ, ಒಟ್ಟು 20 ಚೀತಾಗಳಲ್ಲಿ (Cheetah Death) 8 ಚೀತಾಗಳು ಸಾವನ್ನಪ್ಪಿದೆ. ಇದೀಗ ಮತ್ತೊಂದು ಚೀತಾ ಸಾವನ್ನಪ್ಪಿದ್ದು, ಇದು ಸೇರಿ 4 ತಿಂಗಳಲ್ಲಿ ಒಟ್ಟು 8 ಚೀತಾಗಳು ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾವನ್ನಪ್ಪಿರುವ ಚೀತಾವನ್ನು ಸೂರಜ್​ ಎಂದು ಗರುತಿಸಲಾಗಿದೆ. ಸೂರಜ್ ಎಂಬ ಚೀತಾದ ಸಾವಿಗೆ ಕಾರಣ ಏನು ಎಂಬದನ್ನು ಪತ್ತೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ, ಮತ್ತೊಂದು ತೇಜಸ್ ಎಂಬ ಗಂಡು ಚೀತಾ ಸಾವನ್ನಪ್ಪಿದೆ. ಈ ಚೀತಾ ಆಂತರಿಕವಾಗಿ ದುರ್ಬಲವಾಗಿತ್ತು ಎಂದು ಶವಪರೀಕ್ಷೆ ವರದಿ ಬಹಿರಂಗಪಡಿಸಿದೆ. ತೇಜಸ್ ಒಂದು ಹೆಣ್ಣು ಚೀತಾದೊಡನೆ ಕಾದಾಟದಲ್ಲಿ ತೋಡಗಿತ್ತು. ಇದರಿಂದ ತೇಜಸ್​​ಗೆ ಗಂಭೀರ ಗಾಯಗಳಾಗಿದ್ದು, ಚೇತರಿಸಿಕೊಳ್ಳಲು ಸಾಧ್ಯವಾಗದೆ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಆದರೆ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಚೀತಾಗಳನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ.

ಸೆಪ್ಟೆಂಬರ್ 17, 2022 ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದಂದು ನಮೀಬಿಯಾದಿಂದ 8 ಚೀತಾಗಳನ್ನು ತರಲಾಗಿತ್ತು, ಅದನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನ ಬಿಡಲಾಗಿತ್ತು. ನಂತರ ಐದು ತಿಂಗಳ ನಂತರ,ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ತಂದು ಬಿಟ್ಟಿದ್ದಾರೆ. ಒಟ್ಟು 20 ಚೀತಾಗಳನ್ನು ಇಲ್ಲಿಗೆ ತರಲಾಗಿತ್ತು.

ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವು, 3 ತಿಂಗಳಲ್ಲಿ ಮೂರನೇ ಘಟನೆ

ಮಾರ್ಚ್‌ನಲ್ಲಿ, ನಮೀಬಿಯಾದ ಸಶಾ ಎಂಬ ಚೀತಾ ಮೂತ್ರಪಿಂಡ ಕಾಯಿಲೆಯಿಂದ ಸಾವನ್ನಪ್ಪಿತ್ತು. ಏಪ್ರಿಲ್‌ನಲ್ಲಿ ದಕ್ಷಿಣ ಆಫ್ರಿಕಾದ ಉದಯ್ ಎಂಬ ಚೀತಾ ಹೃದಯ ವೈಫಲ್ಯದಿಂದ ಸಾವನ್ನಪ್ಪಿತ್ತು, ಇದರ ನಂತರ ಕೆಲವೇ ವಾರಗಳಲ್ಲಿ ದಕ್ಷಿಣ ಆಫ್ರಿಕಾದ ದಕ್ಷ ಚೀತಾ ಗಂಡು ಚೀತಾದೊಂದಿಗೆ ಹಿಂಸಾತ್ಮಕ ಕಾದಾಟ ಮಾಡಿ ಸಾವನ್ನಪ್ಪಿದೆ. ಭಾರತದಲ್ಲಿ ಚೀತಾಗಳು ನಾಶವಾಗುತ್ತಿದೆ ಎಂದು ಮತ್ತೆ ಅದನ್ನು ಇಲ್ಲಿ ಬೆಳೆಸಬೇಕು ಎಂಬ ಪ್ರಯತ್ನ ವಿಫಲವಾಗುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Fri, 14 July 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ