AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನಲ್ಲಿ ಹೆಚ್ಚಿದ ಉಗ್ರ ಚಟುವಟಿಕೆ; ನಿನ್ನೆ ಎರಡು ಡ್ರೋನ್​ ಪತ್ತೆಯಾದ ಬೆನ್ನಲ್ಲೇ ಇಂದು ಸುಂಜ್ವಾನಾದಲ್ಲಿ ಇನ್ನೊಂದು ಡ್ರೋನ್​ ಹಾರಾಟ

ಜಮ್ಮುವಿನ ಮಿಲಿಟರಿ ಇನ್​​ಸ್ಟಾಲೇಶನ್​ ಸಮೀಪ ಕಳೆದ ಮೂರು ದಿನಗಳಿಂದಲೂ ಡ್ರೋನ್​ಗಳು ಹಾರಾಡುತ್ತಿದ್ದು, ಸೋಮವಾರ ಕುಲಚಕ್​ ಮಿಲಿಟರಿ ಕ್ಯಾಂಪ್​ ಬಳಿ ಕಾಣಿಸಿಕೊಂಡ ಡ್ರೋನ್​ ಮೇಲೆ ಭಾರತೀಯ ಸೇನೆ ಯೋಧರು ಗುಂಡಿನ ದಾಳಿಯನ್ನೂ ನಡೆಸಿದ್ದರು.

ಜಮ್ಮುವಿನಲ್ಲಿ ಹೆಚ್ಚಿದ ಉಗ್ರ ಚಟುವಟಿಕೆ; ನಿನ್ನೆ ಎರಡು ಡ್ರೋನ್​ ಪತ್ತೆಯಾದ ಬೆನ್ನಲ್ಲೇ ಇಂದು ಸುಂಜ್ವಾನಾದಲ್ಲಿ ಇನ್ನೊಂದು ಡ್ರೋನ್​ ಹಾರಾಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 29, 2021 | 10:01 AM

Share

ಜಮ್ಮುವಿನಲ್ಲಿ ಉಗ್ರ ಚಟುವಟಿಕೆ ಹೆಚ್ಚುತ್ತಿದೆ. ಇಂದು ಮುಂಜಾನೆ 2.30ರ ಹೊತ್ತಿಗೆ ಜಮ್ಮುವಿನ ಸುಂಜ್ವಾನ್​ ಮಿಲಿಟರಿ ಸ್ಟೇಶನ್​​ ಬಳಿ ಇನ್ನೊಂದು ಡ್ರೋನ್​ ಪತ್ತೆಯಾಗಿದೆ. ಈ ಡ್ರೋನ್​ ಕುಂಜ್ವಾನಿ, ಸುಂಜ್ವಾನ್ ಮತ್ತು ಕಲುಚಕ್ ಪ್ರದೇಶಗಳಲ್ಲಿ ಕಾಣಿಸಿಕೊಂಡಿತ್ತು. ಅದಾದ ಬಳಿಕ ಕೆಲವೇ ಹೊತ್ತಲ್ಲಿ ಕಣ್ಮರೆಯಾಗಿದೆ. ಕುಂಜ್ವಾನಿ ಪ್ರದೇಶ ಜಮ್ಮು ಪಟ್ಟಣದ ಒಳಗೇ ಇದ್ದು, ಸತ್ವಾರಿ ಏರ್​ಫೋರ್ಸ್​ ಸ್ಟೇಶನ್​​ ಸಮೀಪ ಇದೆ. ಕುಲಚಕ್​​ನಿಂದ 4.5 ಕಿಮೀ ದೂರದಲ್ಲಿ ಸುಂಜ್ವಾನಾ ಇದ್ದು, ಇಲ್ಲಿಂದ 6.5 ಕಿಮೀ ದೂರದಲ್ಲಿ ಕುಂಜ್ವಾನಿ ಇದೆ. ಈ ಏರಿಯಾ ಸುತ್ತಮುತ್ತಲೂ ಡ್ರೋನ್​ಗಳು ಮಧ್ಯರಾತ್ರಿಯಿಂದ ಮುಂಜಾನೆವರೆಗೆ ಹಾರಾಟ ನಡೆಸುತ್ತಿವೆ.

ಜಮ್ಮುವಿನ ಮಿಲಿಟರಿ ಇನ್​​ಸ್ಟಾಲೇಶನ್​ ಸಮೀಪ ಕಳೆದ ಮೂರು ದಿನಗಳಿಂದಲೂ ಡ್ರೋನ್​ಗಳು ಹಾರಾಡುತ್ತಿದ್ದು, ಸೋಮವಾರ ಕುಲಚಕ್​ ಮಿಲಿಟರಿ ಕ್ಯಾಂಪ್​ ಬಳಿ ಕಾಣಿಸಿಕೊಂಡ ಡ್ರೋನ್​ ಮೇಲೆ ಭಾರತೀಯ ಸೇನೆ ಯೋಧರು ಗುಂಡಿನ ದಾಳಿಯನ್ನೂ ನಡೆಸಿದ್ದರು. ಒಂದು ಮಾನವರಹಿತ ವೈಮಾನಿಕ ವಾಹನ ((UAV) ಭಾನುವಾರ ರಾತ್ರಿ 11: 45 ಕ್ಕೆ ಸೇನಾ ನೆಲೆಯೊಳಗೆ ಮತ್ತು ಇನ್ನೊಂದು ಸೋಮವಾರ ಮುಂಜಾನೆ 2:40 ಕ್ಕೆ ಹಾರಾಟ ನಡೆಸುತ್ತಿತ್ತು. ಅದರ ಮೇಲೆ ಯೋಧರು ಸುಮಾರು 202-25 ಬಾರಿ ಗುಂಡು ಹಾರಿಸಿದ್ದರು.

ಅದಕ್ಕೂ ಮೊದಲು ಜಮ್ಮುವಿನ ಏರ್​ಪೋರ್ಟ್​​ನಲ್ಲಿರುವ ಏರ್​ಫೋರ್ಸ್​ ಸ್ಟೇಶನ್​ನಲ್ಲಿ ಎರಡು ಸ್ಫೋಟ ಆಗಿತ್ತು. ಐಇಡಿ ಸ್ಫೋಟಕವನ್ನು ಡ್ರೋನ್​ ಮೂಲಕವೇ ಎಸೆದು ಸ್ಫೋಟಿಸಿದ್ದಾಗಿ ತನಿಖೆಯಿಂದ ಗೊತ್ತಾಗಿದೆ. ಒಟ್ಟಾರೆ ಜಮ್ಮುವಿನಲ್ಲಿ ಮತ್ತೆ ಉಗ್ರ ಚಟುವಟಿಕೆ ಹೆಚ್ಚಿದೆ. ಜಮ್ಮು-ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಪ್ರಯತ್ನ ಮಾಡಿದಷ್ಟೂ ಉಗ್ರರು ಮತ್ತೆಮತ್ತೆ ದಾಳಿ ಮಾಡುತ್ತಿದ್ದಾರೆ. ಹಾಗೇ ಇಂದು ಕಾಶ್ಮೀರದಲ್ಲಿ ಲಷ್ಕರ್ ಇ ತೈಬಾ ಉಗ್ರಸಂಘಟನೆಯ ಉನ್ನತ ಕಮಾಂಡರ್​ ನದೀಮ್​ ಅಬ್ರಾಬ್​ನನ್ನು ಜಮ್ಮು-ಕಾಶ್ಮೀರ ಪೊಲೀಸರು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ