AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನಲ್ಲಿ ಹೆಚ್ಚಿದ ಉಗ್ರ ಚಟುವಟಿಕೆ; ನಿನ್ನೆ ಎರಡು ಡ್ರೋನ್​ ಪತ್ತೆಯಾದ ಬೆನ್ನಲ್ಲೇ ಇಂದು ಸುಂಜ್ವಾನಾದಲ್ಲಿ ಇನ್ನೊಂದು ಡ್ರೋನ್​ ಹಾರಾಟ

ಜಮ್ಮುವಿನ ಮಿಲಿಟರಿ ಇನ್​​ಸ್ಟಾಲೇಶನ್​ ಸಮೀಪ ಕಳೆದ ಮೂರು ದಿನಗಳಿಂದಲೂ ಡ್ರೋನ್​ಗಳು ಹಾರಾಡುತ್ತಿದ್ದು, ಸೋಮವಾರ ಕುಲಚಕ್​ ಮಿಲಿಟರಿ ಕ್ಯಾಂಪ್​ ಬಳಿ ಕಾಣಿಸಿಕೊಂಡ ಡ್ರೋನ್​ ಮೇಲೆ ಭಾರತೀಯ ಸೇನೆ ಯೋಧರು ಗುಂಡಿನ ದಾಳಿಯನ್ನೂ ನಡೆಸಿದ್ದರು.

ಜಮ್ಮುವಿನಲ್ಲಿ ಹೆಚ್ಚಿದ ಉಗ್ರ ಚಟುವಟಿಕೆ; ನಿನ್ನೆ ಎರಡು ಡ್ರೋನ್​ ಪತ್ತೆಯಾದ ಬೆನ್ನಲ್ಲೇ ಇಂದು ಸುಂಜ್ವಾನಾದಲ್ಲಿ ಇನ್ನೊಂದು ಡ್ರೋನ್​ ಹಾರಾಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 29, 2021 | 10:01 AM

Share

ಜಮ್ಮುವಿನಲ್ಲಿ ಉಗ್ರ ಚಟುವಟಿಕೆ ಹೆಚ್ಚುತ್ತಿದೆ. ಇಂದು ಮುಂಜಾನೆ 2.30ರ ಹೊತ್ತಿಗೆ ಜಮ್ಮುವಿನ ಸುಂಜ್ವಾನ್​ ಮಿಲಿಟರಿ ಸ್ಟೇಶನ್​​ ಬಳಿ ಇನ್ನೊಂದು ಡ್ರೋನ್​ ಪತ್ತೆಯಾಗಿದೆ. ಈ ಡ್ರೋನ್​ ಕುಂಜ್ವಾನಿ, ಸುಂಜ್ವಾನ್ ಮತ್ತು ಕಲುಚಕ್ ಪ್ರದೇಶಗಳಲ್ಲಿ ಕಾಣಿಸಿಕೊಂಡಿತ್ತು. ಅದಾದ ಬಳಿಕ ಕೆಲವೇ ಹೊತ್ತಲ್ಲಿ ಕಣ್ಮರೆಯಾಗಿದೆ. ಕುಂಜ್ವಾನಿ ಪ್ರದೇಶ ಜಮ್ಮು ಪಟ್ಟಣದ ಒಳಗೇ ಇದ್ದು, ಸತ್ವಾರಿ ಏರ್​ಫೋರ್ಸ್​ ಸ್ಟೇಶನ್​​ ಸಮೀಪ ಇದೆ. ಕುಲಚಕ್​​ನಿಂದ 4.5 ಕಿಮೀ ದೂರದಲ್ಲಿ ಸುಂಜ್ವಾನಾ ಇದ್ದು, ಇಲ್ಲಿಂದ 6.5 ಕಿಮೀ ದೂರದಲ್ಲಿ ಕುಂಜ್ವಾನಿ ಇದೆ. ಈ ಏರಿಯಾ ಸುತ್ತಮುತ್ತಲೂ ಡ್ರೋನ್​ಗಳು ಮಧ್ಯರಾತ್ರಿಯಿಂದ ಮುಂಜಾನೆವರೆಗೆ ಹಾರಾಟ ನಡೆಸುತ್ತಿವೆ.

ಜಮ್ಮುವಿನ ಮಿಲಿಟರಿ ಇನ್​​ಸ್ಟಾಲೇಶನ್​ ಸಮೀಪ ಕಳೆದ ಮೂರು ದಿನಗಳಿಂದಲೂ ಡ್ರೋನ್​ಗಳು ಹಾರಾಡುತ್ತಿದ್ದು, ಸೋಮವಾರ ಕುಲಚಕ್​ ಮಿಲಿಟರಿ ಕ್ಯಾಂಪ್​ ಬಳಿ ಕಾಣಿಸಿಕೊಂಡ ಡ್ರೋನ್​ ಮೇಲೆ ಭಾರತೀಯ ಸೇನೆ ಯೋಧರು ಗುಂಡಿನ ದಾಳಿಯನ್ನೂ ನಡೆಸಿದ್ದರು. ಒಂದು ಮಾನವರಹಿತ ವೈಮಾನಿಕ ವಾಹನ ((UAV) ಭಾನುವಾರ ರಾತ್ರಿ 11: 45 ಕ್ಕೆ ಸೇನಾ ನೆಲೆಯೊಳಗೆ ಮತ್ತು ಇನ್ನೊಂದು ಸೋಮವಾರ ಮುಂಜಾನೆ 2:40 ಕ್ಕೆ ಹಾರಾಟ ನಡೆಸುತ್ತಿತ್ತು. ಅದರ ಮೇಲೆ ಯೋಧರು ಸುಮಾರು 202-25 ಬಾರಿ ಗುಂಡು ಹಾರಿಸಿದ್ದರು.

ಅದಕ್ಕೂ ಮೊದಲು ಜಮ್ಮುವಿನ ಏರ್​ಪೋರ್ಟ್​​ನಲ್ಲಿರುವ ಏರ್​ಫೋರ್ಸ್​ ಸ್ಟೇಶನ್​ನಲ್ಲಿ ಎರಡು ಸ್ಫೋಟ ಆಗಿತ್ತು. ಐಇಡಿ ಸ್ಫೋಟಕವನ್ನು ಡ್ರೋನ್​ ಮೂಲಕವೇ ಎಸೆದು ಸ್ಫೋಟಿಸಿದ್ದಾಗಿ ತನಿಖೆಯಿಂದ ಗೊತ್ತಾಗಿದೆ. ಒಟ್ಟಾರೆ ಜಮ್ಮುವಿನಲ್ಲಿ ಮತ್ತೆ ಉಗ್ರ ಚಟುವಟಿಕೆ ಹೆಚ್ಚಿದೆ. ಜಮ್ಮು-ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಪ್ರಯತ್ನ ಮಾಡಿದಷ್ಟೂ ಉಗ್ರರು ಮತ್ತೆಮತ್ತೆ ದಾಳಿ ಮಾಡುತ್ತಿದ್ದಾರೆ. ಹಾಗೇ ಇಂದು ಕಾಶ್ಮೀರದಲ್ಲಿ ಲಷ್ಕರ್ ಇ ತೈಬಾ ಉಗ್ರಸಂಘಟನೆಯ ಉನ್ನತ ಕಮಾಂಡರ್​ ನದೀಮ್​ ಅಬ್ರಾಬ್​ನನ್ನು ಜಮ್ಮು-ಕಾಶ್ಮೀರ ಪೊಲೀಸರು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ