AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮುವಿನಲ್ಲಿ ಹೆಚ್ಚಿದ ಉಗ್ರ ಚಟುವಟಿಕೆ; ನಿನ್ನೆ ಎರಡು ಡ್ರೋನ್​ ಪತ್ತೆಯಾದ ಬೆನ್ನಲ್ಲೇ ಇಂದು ಸುಂಜ್ವಾನಾದಲ್ಲಿ ಇನ್ನೊಂದು ಡ್ರೋನ್​ ಹಾರಾಟ

ಜಮ್ಮುವಿನ ಮಿಲಿಟರಿ ಇನ್​​ಸ್ಟಾಲೇಶನ್​ ಸಮೀಪ ಕಳೆದ ಮೂರು ದಿನಗಳಿಂದಲೂ ಡ್ರೋನ್​ಗಳು ಹಾರಾಡುತ್ತಿದ್ದು, ಸೋಮವಾರ ಕುಲಚಕ್​ ಮಿಲಿಟರಿ ಕ್ಯಾಂಪ್​ ಬಳಿ ಕಾಣಿಸಿಕೊಂಡ ಡ್ರೋನ್​ ಮೇಲೆ ಭಾರತೀಯ ಸೇನೆ ಯೋಧರು ಗುಂಡಿನ ದಾಳಿಯನ್ನೂ ನಡೆಸಿದ್ದರು.

ಜಮ್ಮುವಿನಲ್ಲಿ ಹೆಚ್ಚಿದ ಉಗ್ರ ಚಟುವಟಿಕೆ; ನಿನ್ನೆ ಎರಡು ಡ್ರೋನ್​ ಪತ್ತೆಯಾದ ಬೆನ್ನಲ್ಲೇ ಇಂದು ಸುಂಜ್ವಾನಾದಲ್ಲಿ ಇನ್ನೊಂದು ಡ್ರೋನ್​ ಹಾರಾಟ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 29, 2021 | 10:01 AM

Share

ಜಮ್ಮುವಿನಲ್ಲಿ ಉಗ್ರ ಚಟುವಟಿಕೆ ಹೆಚ್ಚುತ್ತಿದೆ. ಇಂದು ಮುಂಜಾನೆ 2.30ರ ಹೊತ್ತಿಗೆ ಜಮ್ಮುವಿನ ಸುಂಜ್ವಾನ್​ ಮಿಲಿಟರಿ ಸ್ಟೇಶನ್​​ ಬಳಿ ಇನ್ನೊಂದು ಡ್ರೋನ್​ ಪತ್ತೆಯಾಗಿದೆ. ಈ ಡ್ರೋನ್​ ಕುಂಜ್ವಾನಿ, ಸುಂಜ್ವಾನ್ ಮತ್ತು ಕಲುಚಕ್ ಪ್ರದೇಶಗಳಲ್ಲಿ ಕಾಣಿಸಿಕೊಂಡಿತ್ತು. ಅದಾದ ಬಳಿಕ ಕೆಲವೇ ಹೊತ್ತಲ್ಲಿ ಕಣ್ಮರೆಯಾಗಿದೆ. ಕುಂಜ್ವಾನಿ ಪ್ರದೇಶ ಜಮ್ಮು ಪಟ್ಟಣದ ಒಳಗೇ ಇದ್ದು, ಸತ್ವಾರಿ ಏರ್​ಫೋರ್ಸ್​ ಸ್ಟೇಶನ್​​ ಸಮೀಪ ಇದೆ. ಕುಲಚಕ್​​ನಿಂದ 4.5 ಕಿಮೀ ದೂರದಲ್ಲಿ ಸುಂಜ್ವಾನಾ ಇದ್ದು, ಇಲ್ಲಿಂದ 6.5 ಕಿಮೀ ದೂರದಲ್ಲಿ ಕುಂಜ್ವಾನಿ ಇದೆ. ಈ ಏರಿಯಾ ಸುತ್ತಮುತ್ತಲೂ ಡ್ರೋನ್​ಗಳು ಮಧ್ಯರಾತ್ರಿಯಿಂದ ಮುಂಜಾನೆವರೆಗೆ ಹಾರಾಟ ನಡೆಸುತ್ತಿವೆ.

ಜಮ್ಮುವಿನ ಮಿಲಿಟರಿ ಇನ್​​ಸ್ಟಾಲೇಶನ್​ ಸಮೀಪ ಕಳೆದ ಮೂರು ದಿನಗಳಿಂದಲೂ ಡ್ರೋನ್​ಗಳು ಹಾರಾಡುತ್ತಿದ್ದು, ಸೋಮವಾರ ಕುಲಚಕ್​ ಮಿಲಿಟರಿ ಕ್ಯಾಂಪ್​ ಬಳಿ ಕಾಣಿಸಿಕೊಂಡ ಡ್ರೋನ್​ ಮೇಲೆ ಭಾರತೀಯ ಸೇನೆ ಯೋಧರು ಗುಂಡಿನ ದಾಳಿಯನ್ನೂ ನಡೆಸಿದ್ದರು. ಒಂದು ಮಾನವರಹಿತ ವೈಮಾನಿಕ ವಾಹನ ((UAV) ಭಾನುವಾರ ರಾತ್ರಿ 11: 45 ಕ್ಕೆ ಸೇನಾ ನೆಲೆಯೊಳಗೆ ಮತ್ತು ಇನ್ನೊಂದು ಸೋಮವಾರ ಮುಂಜಾನೆ 2:40 ಕ್ಕೆ ಹಾರಾಟ ನಡೆಸುತ್ತಿತ್ತು. ಅದರ ಮೇಲೆ ಯೋಧರು ಸುಮಾರು 202-25 ಬಾರಿ ಗುಂಡು ಹಾರಿಸಿದ್ದರು.

ಅದಕ್ಕೂ ಮೊದಲು ಜಮ್ಮುವಿನ ಏರ್​ಪೋರ್ಟ್​​ನಲ್ಲಿರುವ ಏರ್​ಫೋರ್ಸ್​ ಸ್ಟೇಶನ್​ನಲ್ಲಿ ಎರಡು ಸ್ಫೋಟ ಆಗಿತ್ತು. ಐಇಡಿ ಸ್ಫೋಟಕವನ್ನು ಡ್ರೋನ್​ ಮೂಲಕವೇ ಎಸೆದು ಸ್ಫೋಟಿಸಿದ್ದಾಗಿ ತನಿಖೆಯಿಂದ ಗೊತ್ತಾಗಿದೆ. ಒಟ್ಟಾರೆ ಜಮ್ಮುವಿನಲ್ಲಿ ಮತ್ತೆ ಉಗ್ರ ಚಟುವಟಿಕೆ ಹೆಚ್ಚಿದೆ. ಜಮ್ಮು-ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ಪ್ರಯತ್ನ ಮಾಡಿದಷ್ಟೂ ಉಗ್ರರು ಮತ್ತೆಮತ್ತೆ ದಾಳಿ ಮಾಡುತ್ತಿದ್ದಾರೆ. ಹಾಗೇ ಇಂದು ಕಾಶ್ಮೀರದಲ್ಲಿ ಲಷ್ಕರ್ ಇ ತೈಬಾ ಉಗ್ರಸಂಘಟನೆಯ ಉನ್ನತ ಕಮಾಂಡರ್​ ನದೀಮ್​ ಅಬ್ರಾಬ್​ನನ್ನು ಜಮ್ಮು-ಕಾಶ್ಮೀರ ಪೊಲೀಸರು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್ ಮನೆಯಲ್ಲಿ ಒಟ್ಟೊಟ್ಟಿಗೆ ಅತ್ತ ಪ್ರಶಾಂತ್​-ಚಕ್ರವರ್ತಿ, ಮಂಜು-ದಿವ್ಯಾ; ಇದೆಂಥ ಋಣಾನುಬಂಧ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ