AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಮಧ್ಯಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ, ಪಾದ ನೆಕ್ಕುವಂತೆ ಒತ್ತಾಯಿಸಿ ಯುವಕನಿಗೆ ಥಳಿತ

ಯವಕನೊಬ್ಬನಿಗೆ ತನ್ನ ಪಾದಗಳನ್ನು ನೆಕ್ಕುವಂತೆ ವ್ಯಕ್ತಿಯೊಬ್ಬ ಒತ್ತಾಯ ಮಾಡಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಗ್ವಾಲಿಯರ್​ ನಡೆದಿದೆ ಎಂದು ಹೇಳಲಾಗಿದೆ.

Madhya Pradesh: ಮಧ್ಯಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ, ಪಾದ ನೆಕ್ಕುವಂತೆ ಒತ್ತಾಯಿಸಿ ಯುವಕನಿಗೆ ಥಳಿತ
ವೈರಲ್​​ ವೀಡಿಯೊ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 08, 2023 | 3:57 PM

ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) ಒಂದಲ್ಲ ಒಂದು ಅಮಾನವೀಯ ಘಟನೆಗಳು ನಡೆಯುತ್ತಿದೆ. ಇತ್ತಿಚೇಗೆ ಆದಿವಾಸಿ ಸಮುದಾಯದ ವ್ಯಕ್ತಿಯ ಮೇಲೆ ಬಿಜೆಪಿ ಮುಖಂಡನೊಬ್ಬ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿತ್ತು, ಇದರ ಬೆನ್ನಲ್ಲೇ ಆದಿವಾಸಿ ಯುವತಿಯರಿಗೆ ಕಿರುಕುಳ ನೀಡಿ, ಇಬ್ಬರು ಯುವಕರಿಗೆ ಮಲ ತಿನ್ನಿಸಿ, ಚಪ್ಪಲಿಯ ಮಾಲೆ ಹಾಕಿ ಊರೆಲ್ಲ ಮೆರವಣಿಗೆ ಮಾಡಿರುವ ಹೇಯ ಕೃತ್ಯ ಮಧ್ಯಪ್ರದೇಶದಲ್ಲಿ ತಡವಾಗಿ ಬೆಳಿಕಿಗೆ ಬಂದಿದೆ. ಇದೀಗ ಮತ್ತೊಂದು ಘಟನೆ ಇದೆ ರಾಜ್ಯದಲ್ಲಿ ನಡೆದಿದೆ. ಯವಕನೊಬ್ಬನಿಗೆ ತನ್ನ ಪಾದಗಳನ್ನು ನೆಕ್ಕುವಂತೆ ವ್ಯಕ್ತಿಯೊಬ್ಬ ಒತ್ತಾಯ ಮಾಡಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಗ್ವಾಲಿಯರ್​ ನಡೆದಿದೆ ಎಂದು ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಇವರನ್ನು ಗ್ವಾಲಿಯರ್ ಜಿಲ್ಲೆಯ ದಾಬ್ರಾ ಪಟ್ಟಣದ ನಿವಾಸಿಗಳು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಯುವಕ ಮತ್ತು ಆರೋಪಿಗಳು ಒಂದೇ ಊರಿನವರು ಎಂದು ಹೇಳಲಾಗಿದೆ. ಕಾರಿನಲ್ಲಿ ಕೂರಿಸಿಕೊಂಡು ಯುವಕನಿಗೆ ಪದೇ ಪದೇ ಆರೋಪಿಗಳು ಕಪಾಳಮೋಕ್ಷ ಮಾಡುವುದನ್ನು ಈ ವೀಡಿಯೊದಲ್ಲಿ ನೋಡಬಹುದು. ಜತೆಗೆ “ಗೋಲು ಗುರ್ಜರ್ ಬಾಪ್ ಹೈ” (ಗೋಲು ಗುರ್ಜರ್ ತಂದೆ) ಎಂದು ಹೇಳುವಂತೆ ಹಿಂಸೆ ನೀಡುತ್ತಿರುವುದು ಮತ್ತು ಆ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಕೂಡ ವೀಡಿಯೊದಲ್ಲಿ ರೆಕಾರ್ಡ್​ ಆಗಿದೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಮತ್ತೊಂದು ಹೀನ ಕೃತ್ಯ; ಇಬ್ಬರು ದಲಿತ ಯುವಕರಿಗೆ ಮಲ ತಿನಿಸಿ ಮೆರವಣಿಗೆ, 7 ಮಂದಿ ಅರೆಸ್ಟ್

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಬ್ರಾ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ವಿವೇಕ್ ಕುಮಾರ್ ಶರ್ಮಾ ಮಾತನಾಡಿ, ಶುಕ್ರವಾರ ಸಂಜೆ ವಾಹನದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಡಿಯೊ ಕ್ಲಿಪ್​ನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಯುವಕನ ಕುಟುಂಬದವರ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಅಪಹರಣ ಮತ್ತು ಥಳಿಸಿದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಶರ್ಮಾ ತಿಳಿಸಿದ್ದಾರೆ.

ಯುವಕ ಮತ್ತು ಆರೋಪಿಗಳು ಗ್ವಾಲಿಯರ್ ಜಿಲ್ಲೆಯ ದಾಬ್ರಾ ಪಟ್ಟಣದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಮಾತನಾಡಿದ ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 341 (ಒಬ್ಬ ವ್ಯಕ್ತಿಯನ್ನು ತಪ್ಪಾಗಿ ನಿರ್ಬಂಧಿಸುವುದು), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 324 (ಸ್ವಯಂಪ್ರೇರಿತವಾಗಿ ಆಯುಧ ಅಥವಾ ವಸ್ತುವಿನಿಂದ ಗಾಯಗೊಳಿಸುವುದು), 307 (ಕೊಲೆಗೆ ಯತ್ನ) ಮತ್ತು 34 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ( IPC) ಎಂದು ಹೇಳಿದ್ದಾರೆ.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:43 pm, Sat, 8 July 23

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ