AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnal: ರೈತರೊಂದಿಗೆ ನಿನ್ನೆಯ ಮಾತುಕತೆ ವಿಫಲ; ಇಂದು ಮತ್ತೆ ಸರ್ಕಾರಿ ಅಧಿಕಾರಿಗಳಿಂದ ರಾಜಿ ಪಂಚಾಯತಿ

ಪೊಲೀಸರ ಲಾಠಿ ಚಾರ್ಜ್​ ಮತ್ತು ಐಎಎಸ್ ಅಧಿಕಾರಿಯ ವಿರುದ್ಧ ಕಳೆದ ನಾಲ್ಕು ದಿನಗಳಿಂದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದಾರೆ. ಲಾಠಿ ಏಟು ನೀಡಿದ ಪೊಲೀಸರು ಮತ್ತು ಐಎಎಸ್​ ಅಧಿಕಾರಿ ಆಯುಷ್​ರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

Karnal: ರೈತರೊಂದಿಗೆ ನಿನ್ನೆಯ ಮಾತುಕತೆ ವಿಫಲ; ಇಂದು ಮತ್ತೆ ಸರ್ಕಾರಿ ಅಧಿಕಾರಿಗಳಿಂದ ರಾಜಿ ಪಂಚಾಯತಿ
ಹರ್ಯಾಣ ಪ್ರತಿಭಟನಾ ನಿರತ ರೈತರು
TV9 Web
| Edited By: |

Updated on: Sep 11, 2021 | 9:45 AM

Share

ಹರ್ಯಾಣದ ಕರ್ನಾಲ್​​ನಲ್ಲಿ ಆಗಸ್ಟ್​ 28ರಂದು ರೈತರ ಮೇಲೆ ನಡೆದ ಲಾಠಿ ಚಾರ್ಜ್​ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ರೈತರು ಕರ್ನಾಲ ಜಿಲ್ಲಾ ಪಂಚಾಯತ್​ ಕಚೇರಿಯ  ಗೇಟ್​ ಬಳಿ ಧರಣಿ ನಡೆಸುತ್ತಿದ್ದಾರೆ. ಈ ಸಂಬಂಧ ಸ್ಥಳೀಯ ಆಡಳಿತದ ಅಧಿಕಾರಿಗಳು ನಿನ್ನೆ ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದ್ದರೂ ಅದು ವಿಫಲವಾಗಿದೆ. ಈ ನಿಟ್ಟಿನಲ್ಲಿ ಇನ್ನೊಂದು ಬಾರಿ ಇಂದು ಸರ್ಕಾರ ರೈತರೊಟ್ಟಿಗೆ ಮಾತುಕತೆಗೆ ಮುಂದಾಗಿದೆ. 

ಆಗಸ್ಟ್​ 28ರಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್​ ಅವರು ಬಿಜೆಪಿ ಕಾರ್ಯಕಾರಿಣಿ ಸಭೆಗಾಗಿ ಕರ್ನಾಲ್​ಗೆ ಭೇಟಿ ಕೊಟ್ಟಿದ್ದರು. ಆದರೆ ಅವರ ಭೇಟಿಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಆಗ ಪೊಲೀಸರು ಲಾಠಿ ಚಾರ್ಜ್​ ನಡೆಸಿದ ಪರಿಣಾಮ ಹಲವು ರೈತರು ಗಾಯಗೊಂಡಿದ್ದರು. ಈ ಮಧ್ಯೆ ಜಿಲ್ಲಾಧಿಕಾರಿ ಆಯುಷ್​ ಸಿನ್ಹಾ, ಪ್ರತಿಭಟನಾ ನಿರತರ ತಲೆ ಒಡಿಯಿರಿ ಎಂದು ಪೊಲೀಸರಿಗೆ ಆದೇಶ ನೀಡಿದ ವಿಡಿಯೋ ವೈರಲ್​ ಆಗಿತ್ತು.

ಪೊಲೀಸರ ಲಾಠಿ ಚಾರ್ಜ್​ ಮತ್ತು ಐಎಎಸ್ ಅಧಿಕಾರಿಯ ವಿರುದ್ಧ ಕಳೆದ ನಾಲ್ಕು ದಿನಗಳಿಂದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದಾರೆ. ಲಾಠಿ ಏಟು ನೀಡಿದ ಪೊಲೀಸರು ಮತ್ತು ಐಎಎಸ್​ ಅಧಿಕಾರಿ ಆಯುಷ್​ರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇನ್ನು ಈ ಘಟನೆಯಲ್ಲಿ ಮೃತಪಟ್ಟ ರೈತನ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ನೀಡಬೇಕು.ಹಾಗೇ, ಹತ್ತಿರದ ಸಂಬಂಧಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಗಾಯಗೊಂಡ ರೈತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದೂ ಒತ್ತಾಯಿಸಿದ್ದಾರೆ.  ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಕೇಂದ್ರ ಸರ್ಕಾರದ ಮಾತುಕತೆ ಕೂಡ ವಿಫಲವಾಗಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ನಡುಗಿದ ಭೂಮಿ; ಒಂದು ವಾರದಲ್ಲಿ ಎರಡನೇ ಬಾರಿಗೆ ಭೂಕಂಪನದ ಅನುಭವ

ನಾಯಿಯ ನಿಯತ್ತು ಎಂಬ ಮಾತಿಗೆ ಸಾಕ್ಷಿ ಈ ವಿಡಿಯೋ; ಮುದ್ದಾದ ಶ್ವಾನ ತನ್ನ ಮನೆ ಮಕ್ಕಳ ಕಡೆಗೆ ತೋರಿಸುವ ಕಾಳಜಿ ಹೇಗಿದೆ ನೋಡಿ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ