AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnal: ರೈತರೊಂದಿಗೆ ನಿನ್ನೆಯ ಮಾತುಕತೆ ವಿಫಲ; ಇಂದು ಮತ್ತೆ ಸರ್ಕಾರಿ ಅಧಿಕಾರಿಗಳಿಂದ ರಾಜಿ ಪಂಚಾಯತಿ

ಪೊಲೀಸರ ಲಾಠಿ ಚಾರ್ಜ್​ ಮತ್ತು ಐಎಎಸ್ ಅಧಿಕಾರಿಯ ವಿರುದ್ಧ ಕಳೆದ ನಾಲ್ಕು ದಿನಗಳಿಂದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದಾರೆ. ಲಾಠಿ ಏಟು ನೀಡಿದ ಪೊಲೀಸರು ಮತ್ತು ಐಎಎಸ್​ ಅಧಿಕಾರಿ ಆಯುಷ್​ರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

Karnal: ರೈತರೊಂದಿಗೆ ನಿನ್ನೆಯ ಮಾತುಕತೆ ವಿಫಲ; ಇಂದು ಮತ್ತೆ ಸರ್ಕಾರಿ ಅಧಿಕಾರಿಗಳಿಂದ ರಾಜಿ ಪಂಚಾಯತಿ
ಹರ್ಯಾಣ ಪ್ರತಿಭಟನಾ ನಿರತ ರೈತರು
TV9 Web
| Updated By: Lakshmi Hegde|

Updated on: Sep 11, 2021 | 9:45 AM

Share

ಹರ್ಯಾಣದ ಕರ್ನಾಲ್​​ನಲ್ಲಿ ಆಗಸ್ಟ್​ 28ರಂದು ರೈತರ ಮೇಲೆ ನಡೆದ ಲಾಠಿ ಚಾರ್ಜ್​ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ರೈತರು ಕರ್ನಾಲ ಜಿಲ್ಲಾ ಪಂಚಾಯತ್​ ಕಚೇರಿಯ  ಗೇಟ್​ ಬಳಿ ಧರಣಿ ನಡೆಸುತ್ತಿದ್ದಾರೆ. ಈ ಸಂಬಂಧ ಸ್ಥಳೀಯ ಆಡಳಿತದ ಅಧಿಕಾರಿಗಳು ನಿನ್ನೆ ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದ್ದರೂ ಅದು ವಿಫಲವಾಗಿದೆ. ಈ ನಿಟ್ಟಿನಲ್ಲಿ ಇನ್ನೊಂದು ಬಾರಿ ಇಂದು ಸರ್ಕಾರ ರೈತರೊಟ್ಟಿಗೆ ಮಾತುಕತೆಗೆ ಮುಂದಾಗಿದೆ. 

ಆಗಸ್ಟ್​ 28ರಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್​ ಅವರು ಬಿಜೆಪಿ ಕಾರ್ಯಕಾರಿಣಿ ಸಭೆಗಾಗಿ ಕರ್ನಾಲ್​ಗೆ ಭೇಟಿ ಕೊಟ್ಟಿದ್ದರು. ಆದರೆ ಅವರ ಭೇಟಿಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಆಗ ಪೊಲೀಸರು ಲಾಠಿ ಚಾರ್ಜ್​ ನಡೆಸಿದ ಪರಿಣಾಮ ಹಲವು ರೈತರು ಗಾಯಗೊಂಡಿದ್ದರು. ಈ ಮಧ್ಯೆ ಜಿಲ್ಲಾಧಿಕಾರಿ ಆಯುಷ್​ ಸಿನ್ಹಾ, ಪ್ರತಿಭಟನಾ ನಿರತರ ತಲೆ ಒಡಿಯಿರಿ ಎಂದು ಪೊಲೀಸರಿಗೆ ಆದೇಶ ನೀಡಿದ ವಿಡಿಯೋ ವೈರಲ್​ ಆಗಿತ್ತು.

ಪೊಲೀಸರ ಲಾಠಿ ಚಾರ್ಜ್​ ಮತ್ತು ಐಎಎಸ್ ಅಧಿಕಾರಿಯ ವಿರುದ್ಧ ಕಳೆದ ನಾಲ್ಕು ದಿನಗಳಿಂದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದಾರೆ. ಲಾಠಿ ಏಟು ನೀಡಿದ ಪೊಲೀಸರು ಮತ್ತು ಐಎಎಸ್​ ಅಧಿಕಾರಿ ಆಯುಷ್​ರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇನ್ನು ಈ ಘಟನೆಯಲ್ಲಿ ಮೃತಪಟ್ಟ ರೈತನ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ನೀಡಬೇಕು.ಹಾಗೇ, ಹತ್ತಿರದ ಸಂಬಂಧಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಗಾಯಗೊಂಡ ರೈತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದೂ ಒತ್ತಾಯಿಸಿದ್ದಾರೆ.  ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಕೇಂದ್ರ ಸರ್ಕಾರದ ಮಾತುಕತೆ ಕೂಡ ವಿಫಲವಾಗಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ನಡುಗಿದ ಭೂಮಿ; ಒಂದು ವಾರದಲ್ಲಿ ಎರಡನೇ ಬಾರಿಗೆ ಭೂಕಂಪನದ ಅನುಭವ

ನಾಯಿಯ ನಿಯತ್ತು ಎಂಬ ಮಾತಿಗೆ ಸಾಕ್ಷಿ ಈ ವಿಡಿಯೋ; ಮುದ್ದಾದ ಶ್ವಾನ ತನ್ನ ಮನೆ ಮಕ್ಕಳ ಕಡೆಗೆ ತೋರಿಸುವ ಕಾಳಜಿ ಹೇಗಿದೆ ನೋಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?