AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnal: ರೈತರೊಂದಿಗೆ ನಿನ್ನೆಯ ಮಾತುಕತೆ ವಿಫಲ; ಇಂದು ಮತ್ತೆ ಸರ್ಕಾರಿ ಅಧಿಕಾರಿಗಳಿಂದ ರಾಜಿ ಪಂಚಾಯತಿ

ಪೊಲೀಸರ ಲಾಠಿ ಚಾರ್ಜ್​ ಮತ್ತು ಐಎಎಸ್ ಅಧಿಕಾರಿಯ ವಿರುದ್ಧ ಕಳೆದ ನಾಲ್ಕು ದಿನಗಳಿಂದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದಾರೆ. ಲಾಠಿ ಏಟು ನೀಡಿದ ಪೊಲೀಸರು ಮತ್ತು ಐಎಎಸ್​ ಅಧಿಕಾರಿ ಆಯುಷ್​ರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

Karnal: ರೈತರೊಂದಿಗೆ ನಿನ್ನೆಯ ಮಾತುಕತೆ ವಿಫಲ; ಇಂದು ಮತ್ತೆ ಸರ್ಕಾರಿ ಅಧಿಕಾರಿಗಳಿಂದ ರಾಜಿ ಪಂಚಾಯತಿ
ಹರ್ಯಾಣ ಪ್ರತಿಭಟನಾ ನಿರತ ರೈತರು
TV9 Web
| Edited By: |

Updated on: Sep 11, 2021 | 9:45 AM

Share

ಹರ್ಯಾಣದ ಕರ್ನಾಲ್​​ನಲ್ಲಿ ಆಗಸ್ಟ್​ 28ರಂದು ರೈತರ ಮೇಲೆ ನಡೆದ ಲಾಠಿ ಚಾರ್ಜ್​ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ರೈತರು ಕರ್ನಾಲ ಜಿಲ್ಲಾ ಪಂಚಾಯತ್​ ಕಚೇರಿಯ  ಗೇಟ್​ ಬಳಿ ಧರಣಿ ನಡೆಸುತ್ತಿದ್ದಾರೆ. ಈ ಸಂಬಂಧ ಸ್ಥಳೀಯ ಆಡಳಿತದ ಅಧಿಕಾರಿಗಳು ನಿನ್ನೆ ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದ್ದರೂ ಅದು ವಿಫಲವಾಗಿದೆ. ಈ ನಿಟ್ಟಿನಲ್ಲಿ ಇನ್ನೊಂದು ಬಾರಿ ಇಂದು ಸರ್ಕಾರ ರೈತರೊಟ್ಟಿಗೆ ಮಾತುಕತೆಗೆ ಮುಂದಾಗಿದೆ. 

ಆಗಸ್ಟ್​ 28ರಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್​ ಅವರು ಬಿಜೆಪಿ ಕಾರ್ಯಕಾರಿಣಿ ಸಭೆಗಾಗಿ ಕರ್ನಾಲ್​ಗೆ ಭೇಟಿ ಕೊಟ್ಟಿದ್ದರು. ಆದರೆ ಅವರ ಭೇಟಿಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಆಗ ಪೊಲೀಸರು ಲಾಠಿ ಚಾರ್ಜ್​ ನಡೆಸಿದ ಪರಿಣಾಮ ಹಲವು ರೈತರು ಗಾಯಗೊಂಡಿದ್ದರು. ಈ ಮಧ್ಯೆ ಜಿಲ್ಲಾಧಿಕಾರಿ ಆಯುಷ್​ ಸಿನ್ಹಾ, ಪ್ರತಿಭಟನಾ ನಿರತರ ತಲೆ ಒಡಿಯಿರಿ ಎಂದು ಪೊಲೀಸರಿಗೆ ಆದೇಶ ನೀಡಿದ ವಿಡಿಯೋ ವೈರಲ್​ ಆಗಿತ್ತು.

ಪೊಲೀಸರ ಲಾಠಿ ಚಾರ್ಜ್​ ಮತ್ತು ಐಎಎಸ್ ಅಧಿಕಾರಿಯ ವಿರುದ್ಧ ಕಳೆದ ನಾಲ್ಕು ದಿನಗಳಿಂದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದಾರೆ. ಲಾಠಿ ಏಟು ನೀಡಿದ ಪೊಲೀಸರು ಮತ್ತು ಐಎಎಸ್​ ಅಧಿಕಾರಿ ಆಯುಷ್​ರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇನ್ನು ಈ ಘಟನೆಯಲ್ಲಿ ಮೃತಪಟ್ಟ ರೈತನ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ನೀಡಬೇಕು.ಹಾಗೇ, ಹತ್ತಿರದ ಸಂಬಂಧಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಗಾಯಗೊಂಡ ರೈತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದೂ ಒತ್ತಾಯಿಸಿದ್ದಾರೆ.  ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಕೇಂದ್ರ ಸರ್ಕಾರದ ಮಾತುಕತೆ ಕೂಡ ವಿಫಲವಾಗಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ನಡುಗಿದ ಭೂಮಿ; ಒಂದು ವಾರದಲ್ಲಿ ಎರಡನೇ ಬಾರಿಗೆ ಭೂಕಂಪನದ ಅನುಭವ

ನಾಯಿಯ ನಿಯತ್ತು ಎಂಬ ಮಾತಿಗೆ ಸಾಕ್ಷಿ ಈ ವಿಡಿಯೋ; ಮುದ್ದಾದ ಶ್ವಾನ ತನ್ನ ಮನೆ ಮಕ್ಕಳ ಕಡೆಗೆ ತೋರಿಸುವ ಕಾಳಜಿ ಹೇಗಿದೆ ನೋಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ