AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡಿನಿಂದ ಸ್ಪರ್ಧಿಸಿದ್ದ ಇನ್ನೊಬ್ಬ ರಾಹುಲ್ ಗಾಂಧಿ ಕೂಡ ಅನರ್ಹ; ಯಾರು ಇವರು?

ಆಗ 33 ವರ್ಷ ವಯಸ್ಸಿನ ರಾಹುಲ್ ಗಾಂಧಿ ಕೆ ಇ ಅವರು ಲೋಕಸಭೆ ಚುನಾವಣೆಯಲ್ಲಿ ವಯನಾಡ್‌ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ  ರಾಹುಲ್,  7 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದರು

ವಯನಾಡಿನಿಂದ ಸ್ಪರ್ಧಿಸಿದ್ದ ಇನ್ನೊಬ್ಬ ರಾಹುಲ್ ಗಾಂಧಿ ಕೂಡ ಅನರ್ಹ; ಯಾರು ಇವರು?
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on: Mar 31, 2023 | 4:22 PM

Share

ಲೋಕಸಭೆಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ (Rahul Gandhi) ಅನರ್ಹತೆ ಚರ್ಚೆಯಾಗುತ್ತಿರುವ ಈ ಹೊತ್ತಲ್ಲಿ2019 ರಲ್ಲಿ ಕೇರಳದ ಅದೇ ವಯನಾಡ್ (Lok Sabha) ಕ್ಷೇತ್ರದಿಂದ ಸ್ಪರ್ಧಿಸಿದ್ದ ಇನ್ನೊಬ್ಬ ‘ರಾಹುಲ್ ಗಾಂಧಿ’ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಂಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಮಾರ್ಚ್ 29 ರಂದು ಭಾರತದ ಚುನಾವಣಾ ಆಯೋಗವು (ECI) ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಕಳುಹಿಸಿದ ಜನಪ್ರತಿನಿಧಿ ಕಾಯ್ದೆ, 1951 ರ ಸೆಕ್ಷನ್ 10 ಎ ಅಡಿಯಲ್ಲಿ ಅನರ್ಹಗೊಂಡ ವ್ಯಕ್ತಿಗಳ ಸಾಮಾನ್ಯ ಪಟ್ಟಿಯಲ್ಲಿ, ರಾಹುಲ್ ಗಾಂಧಿ ಕೆ.ಇ. ಕೊಟ್ಟಾಯಂ ಒಳಗೊಂಡಿತ್ತು. ಪಟ್ಟಿಯ ಪ್ರಕಾರ ಅವರನ್ನು ಮೂರು ವರ್ಷಗಳ ಅವಧಿಗೆ ಸೆಪ್ಟೆಂಬರ್ 9, 2021 ರಂದು ಅನರ್ಹಗೊಳಿಸಲಾಯಿತು.

ಸೆಕ್ಷನ್ 10ಎ ಅಡಿಯಲ್ಲಿ, ಚುನಾವಣೆಗೆ ಸ್ಪರ್ಧಿಸಿದ ನಂತರ ಚುನಾವಣಾ ವೆಚ್ಚದ ಖಾತೆಯನ್ನು ಇಸಿಐಗೆ ಸಲ್ಲಿಸಲು ವಿಫಲರಾದವರನ್ನು ಮೂರು ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗುತ್ತದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರು ಪಟ್ಟಿಯಲ್ಲಿ ಇರಲಿಲ್ಲ. ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯ ನಂತರ ಮಾರ್ಚ್ 23 ರಂದು ಅವರನ್ನು ಅನರ್ಹಗೊಳಿಸಲಾಗಿದ್ದರೂ, ವಿಚಾರಣಾ ನ್ಯಾಯಾಲಯವು ಕಾನೂನು ಪರಿಹಾರವನ್ನು ಪಡೆಯಲು ಅವರಿಗೆ 30 ದಿನಗಳ ಕಾಲಾವಕಾಶವನ್ನು ನೀಡಲಾಯಿತು.

ಆಗ 33 ವರ್ಷ ವಯಸ್ಸಿನ ರಾಹುಲ್ ಗಾಂಧಿ ಕೆ ಇ ಅವರು ಲೋಕಸಭೆ ಚುನಾವಣೆಯಲ್ಲಿ ವಯನಾಡ್‌ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ  ರಾಹುಲ್,  7 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದರು. ರಾಹುಲ್ ಗಾಂಧಿ ಕೆ ಇ, ರಾಘುಲ್ ಗಾಂಧಿ ಕೆ ಎಂಬ ಇಬ್ಬರು ಬರೀ ಹೆಸರು ಮಾತ್ರಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.ರಾಹುಲ್ ಗಾಂಧಿ ಕೆ ಇ 2,196 ಮತಗಳನ್ನು ಪಡೆದರೆ, ರಾಘುಲ್ ಗಾಂಧಿ ಕೆ 845 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: Navjot Singh Sidhu: ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ನಾಳೆ ಪಟಿಯಾಲ ಜೈಲಿನಿಂದ ಬಿಡುಗಡೆ

ರಾಹುಲ್ ಗಾಂಧಿ ಕೆ ಇ ಅವರಲ್ಲಿ ಅನರ್ಹತೆಯ ಬಗ್ಗೆ ಕೇಳಿದಾಗ ತಾನು 2019 ರ ಚುನಾವಣೆಯಲ್ಲಿ ಸ್ಪರ್ಧಿಸಿರುವುದಾಗಿ ಹೇಳಿದ್ದು ಹೆಚ್ಚಿನ ವಿಷಯ ಹೇಳಲು ನಿರಾಕರಿಸಿದರು. ನಾನು ಆ ರಾಹುಲ್ ಗಾಂಧಿ ಅಲ್ಲ ಎಂದು ಅವರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
ವಿರೇಂದ್ರ ಪಪ್ಪಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
‘ತುಂಬಾ ಸಣ್ಣ ಜೀವನ, ಪಾಸಿಟಿವ್ ಆಗಿರೋಣ’; ರಾಗಿಣಿ ದ್ವಿವೇದಿ ಹೀಗ್ಯಾಕಂದ್ರು?
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ