AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​​ಗೆ ಮತ್ತೊಂದು ಶಾಕ್​​​, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ

ಕಾಂಗ್ರೆಸ್​​ಗೆ ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ, ಪಕ್ಷದ ಅಭ್ಯರ್ಥಿಗಳು, ಸೂರತ್​​​​, ಇಂದೋರ್​​​ ಆಯಿತು, ಇದೀಗ ಒಡಿಶಾ ಪುರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್​​ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ನಾನು ಸ್ವರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಪುರಿಯಲ್ಲಿ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಪಕ್ಷ ಹಣ ನೀಡಿಲ್ಲ, ಆ ಕಾರಣಕ್ಕೆ ಹಣ ಕೊರತೆಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್​​​ಗೆ ಮತ್ತೊಂದು ಶಾಕ್​​​, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ
ಅಕ್ಷಯ್​ ಪಲ್ಲಮಜಲು​​
| Edited By: |

Updated on:May 04, 2024 | 11:56 AM

Share

ಪುರಿ, ಮೇ.4: ಸೂರತ್​​​​, ಇಂದೋರ್​​​ ಆಯಿತು,. ಇದೀಗ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​​​​ ಅಭ್ಯರ್ಥಿ ಪಕ್ಷಕ್ಕೆ ಶಾಕ್​​​ ನೀಡಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಸುಚರಿತ ಮೊಹಾಂತಿ (Sucharita Mohanty) ಅವರು ನಾನು ಪುರಿ ಕ್ಷೇತ್ರದಿಂದ ಸ್ವರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಪುರಿಯಲ್ಲಿ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಪಕ್ಷ ಹಣ ನೀಡಿಲ್ಲ, ಆ ಕಾರಣಕ್ಕೆ ಹಣ ಕೊರತೆಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಸುಚರಿತ ಮೊಹಾಂತಿ ಅವರು ಶುಕ್ರವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರಿಗೆ ಪತ್ರ ಬರೆದಿದ್ದು, ನನಗೆ ಹಣಕಾಸಿನ ಕೊರತೆಯಿರುವ ಕಾರಣ ನನ್ನ ಪ್ರಚಾರಕ್ಕೆ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಮೊಹಾಂತಿ ಅವರು ತಮ್ಮ ಪತ್ರದಲ್ಲಿ ಹೀಗೆ ಬರೆದಿದ್ದಾರೆ. ” ಪಕ್ಷವು ನನಗೆ ಧನಸಹಾಯವನ್ನು ನಿರಾಕರಿಸಿದ ಕಾರಣ ಪುರಿ ಸಂಸದೀಯ ಕ್ಷೇತ್ರದಲ್ಲಿ ನಮ್ಮ ಪ್ರಚಾರಕ್ಕೆ ಭಾರಿ ಹೊಡೆತ ಬಿದ್ದಿದೆ. ಎಐಸಿಸಿ ಒಡಿಶಾ ಉಸ್ತುವಾರಿ ಡಾ ಅಜೋಯ್ ಕುಮಾರ್ ಅವರು ನನ್ನನ್ನು ನಾನು ರಕ್ಷಿಸಿಕೊಳ್ಳುವಂತೆ ಸ್ಪಷ್ಟವಾಗಿ ಹೇಳಿದ್ದಾರೆ. ಪ್ರಚಾರಕ್ಕೆ ಧನಸಹಾಯ ನೀಡಲು ವಿಫಲವಾದ ಕಾರಣಗಳನ್ನು ನೀಡಿ ಹಾಗೂ ನಾನು ಉಳಿತಾಯ ಮಾಡಿದ ಎಲ್ಲ ಹಣವನ್ನು ಈಗಾಗಲೇ ಪ್ರಚಾರಕ್ಕೆ ಹಾಕಿದ್ದೇನೆ. ಇನ್ನು ಮುಂದಿನ ಪ್ರಚಾರಕ್ಕೆ ಹಣ ನನ್ನಲ್ಲಿ ಇಲ್ಲ” ಎಂದು ಪತ್ರ ಬರೆದಿದ್ದಾರೆ.

ನಾನು 10 ವರ್ಷಗಳ ಹಿಂದೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಸಂಬಳ ಪಡೆಯುವ ವೃತ್ತಿಪರ ಪತ್ರಕರ್ತನಾಗಿದ್ದೆ. ಆದರೆ ಈಗ ರಾಜಕೀಯ ಕ್ಷೇತ್ರಕ್ಕಾಗಿ ನನ್ನನ್ನೂ ನಾನು ತೋಡಗಿಸಿಕೊಂಡಿದ್ದೇನೆ. ನನ್ನಲ್ಲಿರುವ ಎಲ್ಲ ಹಣವನ್ನು ರಾಜಕೀಯ ಪ್ರಚಾರಕ್ಕೆ ಬಳಸಿದ್ದೇನೆ ಎಂದು ಹೇಳಿದ್ದಾರೆ. ಇನ್ನು ಪ್ರಗತಿಪರ ರಾಜಕೀಯಕ್ಕಾಗಿ ನಾನು ಸಾರ್ವಜನಿಕ ದೇಣಿಗೆ ಅಭಿಯಾನವನ್ನು ಮಾಡಿದೆ, ಆದರೆ ಅದು ವಿಫಲವಾಗಿದೆ ಎಂದರು.

ಇದನ್ನೂ ಓದಿ: ಪ್ರಧಾನಿ ಸ್ಥಾನಕ್ಕೆ ಸವಾಲು ಹಾಕುವ ಮೊದಲು ರಾಯ್‌ಬರೇಲಿಯಲ್ಲಿ ಗೆಲ್ಲಿ, ರಾಹುಲ್​​​ಗೆ ರಷ್ಯಾ ರಾಜಕೀಯ ವಿಮರ್ಶಕ ಗ್ಯಾರಿ ಕ್ಯಾಸ್ಪರೋವ್ ಸಲಹೆ

ಕಾಂಗ್ರೆಸ್​​ ಪುರಿಯಲ್ಲಿ ತನ್ನ ಅಭ್ಯರ್ಥಿಯನ್ನಾಗಿ ಸುಚರಿತ ಮೊಹಾಂತಿ ಅವರನ್ನು ಘೋಷಣೆ ಮಾಡಿದೆ, ಆದರೆ ಅವರು ಇನ್ನು ನಾಮಪತ್ರ ಸಲ್ಲಿಸಿಲ್ಲ. ಮತ್ತೊಂದೆಡೆ, ಒಡಿಶಾ ಕ್ಷೇತ್ರದಿಂದ ಬಿಜೆಡಿಯ ಅರೂಪ್ ಪಟ್ನಾಯಕ್ ಮತ್ತು ಬಿಜೆಪಿಯ ಸಂಬಿತ್ ಪಾತ್ರಾ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಇದರ ಜತೆಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ನಿಕಟವರ್ತಿ ವಿಕೆ ಪಾಂಡಿಯನ್ ಅವರ ಪತ್ನಿ ಒಡಿಶಾದ ಹಿರಿಯ ಅಧಿಕಾರಿ ಸುಜಾತಾ ಆರ್ ಕಾರ್ತಿಕೇಯನ್ ಅವರನ್ನು ಸಾರ್ವಜನಿಕ ಕಚೇರಿಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಾರ್ವಜನಿಕರಲ್ಲದ ಇಲಾಖೆಗೆ ವರ್ಗಾಯಿಸಲು ಚುನಾವಣಾ ಆಯೋಗ ಗುರುವಾರ ಆದೇಶ ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:19 am, Sat, 4 May 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್