AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರದ್ಧಾ ರೀತಿಯಲ್ಲೇ ಮತ್ತೊಂದು ಕೊಲೆ: ಢಾಬಾದ ಫ್ರಿಡ್ಜ್‌ನಲ್ಲಿ ಬಾಲಕಿಯ ಶವ ಪತ್ತೆ

ದೆಹಲಿಯಲ್ಲಿ ಶ್ರದ್ಧಾ ರೀತಿಯಲ್ಲೇ ಮತ್ತೊಂದು ಕೊಲೆ ಪ್ರಕರಣ ಮುನ್ನೆಲೆಗೆ ಬಂದಿದೆ. ಪೊಲೀಸರು ಬಾಲಕಿಯ ಶವವನ್ನು ಢಾಬಾದ ಫ್ರಿಡ್ಜ್‌ನಲ್ಲಿ ಪತ್ತೆ ಮಾಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಶವವನ್ನು ವಶಪಡಿಸಿಕೊಂಡಿದ್ದಾರೆ.

ಶ್ರದ್ಧಾ ರೀತಿಯಲ್ಲೇ ಮತ್ತೊಂದು ಕೊಲೆ: ಢಾಬಾದ ಫ್ರಿಡ್ಜ್‌ನಲ್ಲಿ ಬಾಲಕಿಯ ಶವ ಪತ್ತೆ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Feb 14, 2023 | 3:41 PM

ದೆಹಲಿ: ದೆಹಲಿಯಲ್ಲಿ ಶ್ರದ್ಧಾ (Shraddha) ರೀತಿಯಲ್ಲೇ ಮತ್ತೊಂದು ಕೊಲೆ ಪ್ರಕರಣ ಮುನ್ನೆಲೆಗೆ ಬಂದಿದೆ. ಪೊಲೀಸರು ಬಾಲಕಿಯ ಶವವನ್ನು ಢಾಬಾದ ಫ್ರಿಡ್ಜ್‌ನಲ್ಲಿ ಪತ್ತೆ ಮಾಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಶವವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದೆಹಲಿಯ ಬಾಬಾ ಹರಿದಾಸ್ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆರೋಪಿಯನ್ನು ಸಾಹಿಲ್ ಗೆಹ್ಲೋಟ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಬಾಲಕನ ವಿಚಾರಣೆ ನಡೆಯುತ್ತಿದೆ. ಬಾಲಕಿಯನ್ನು ಕೊಂದ ಬಳಿಕ ಆರೋಪಿಗಳು ಮೃತದೇಹವನ್ನು ಢಾಬಾದ ಫ್ರಿಡ್ಜ್‌ನಲ್ಲಿ ಬಚ್ಚಿಟ್ಟಿದ್ದರು ಎಂದು ಹೇಳಲಾಗುತ್ತಿದೆ. ಪೊಲೀಸರು ಬಾಲಕಿಯ ಮೃತದೇಹವನ್ನು ಫ್ರಿಡ್ಜ್‌ನಿಂದ ಹೊರತೆಗೆದಿದ್ದಾರೆ.

ಮಾಹಿತಿ ಪ್ರಕಾರ, ಕಾಶ್ಮೀರ ಗೇಟ್ ಐಎಸ್‌ಬಿಟಿ ಬಳಿ ಕಾರಿನಲ್ಲಿ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಇದಾದ ನಂತರ ಆರೋಪಿಯು ಮೃತ ದೇಹವನ್ನು ಮಿತ್ರೌ ಗ್ರಾಮದ ತನ್ನ ಧಾಬಾದ ಫ್ರೀಜರ್‌ನಲ್ಲಿ ಬಚ್ಚಿಟ್ಟಿದ್ದ. ಆರೋಪಿ ಬಾಲಕನ ವಯಸ್ಸು 26 ವರ್ಷ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಶ್ರದ್ಧಾ ಹತ್ಯೆ ಪ್ರಕರಣ

ಮೊನ್ನೆಯಷ್ಟೇ ದೆಹಲಿಯಲ್ಲಿ ನಡೆದ ಶ್ರದ್ಧಾ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ದೆಹಲಿಯ ಮೆಹ್ರೌಲಿಯಲ್ಲಿ ಶ್ರದ್ಧಾಳ ಪ್ರಿಯಕರ ಅಫ್ತಾಬ್ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕಳೆದ ವರ್ಷ ಮೇ 18 ರಂದು ಅಫ್ತಾಬ್ ಶ್ರದ್ಧಾಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ. ಇದಾದ ನಂತರ ಮೃತ ದೇಹವನ್ನು 35 ತುಂಡುಗಳಾಗಿ ಕತ್ತರಿಸಲಾಯಿತು.

ಮೃತ ದೇಹವನ್ನು ಇಡಲು ಅಫ್ತಾಬ್ ಫ್ರಿಡ್ಜ್ ಖರೀದಿಸಿದ್ದ. ಇದರಲ್ಲಿ ಮೃತದೇಹದ ತುಂಡುಗಳನ್ನು ಇಟ್ಟುಕೊಂಡಿದ್ದ. ಮೆಹ್ರೌಲಿ ಅರಣ್ಯದಲ್ಲಿ ಶ್ರದ್ಧಾ ಮೃತದೇಹದ ತುಂಡನ್ನು ಎಸೆಯಲು ಆತ ಪ್ರತಿದಿನ ರಾತ್ರಿ ಹೋಗುತ್ತಿದ್ದ. ಅಷ್ಟೇ ಅಲ್ಲ, ಶ್ರದ್ಧಾ ಕೊಲೆಯಾದ ನಂತರವೂ ಅಫ್ತಾಬ್ ಇದೇ ಫ್ಲಾಟ್ ನಲ್ಲಿ ವಾಸವಾಗಿದ್ದ, ಆತನ ಇತರೆ ಗೆಳತಿಯರು ಕೂಡ ಫ್ಲಾಟ್ ನಲ್ಲಿ ಅವರನ್ನು ಭೇಟಿಯಾಗಲು ಬರುತ್ತಿದ್ದರು.

ಇದನ್ನೂ ಓದಿ: Shraddha Walker Murder Case: ಶ್ರದ್ಧಾ ವಾಕರ್​​ ಸ್ನೇಹಿತರೊಬ್ಬರನ್ನು ಭೇಟಿ ಮಾಡಿದ್ದಕ್ಕೆ ರೊಚ್ಚಿಗೆದ್ದಿದ್ದ ಅಫ್ತಾಬ್ ಪೂನಾವಾಲಾ

ನವೆಂಬರ್ 12ರಂದು ಅಫ್ತಾಬ್​​ನನ್ನು ಪೊಲೀಸರು ಬಂಧಿಸಿದ್ದರು. ಪಾಲಿಗ್ರಾಫಿ ಪರೀಕ್ಷೆ ಮತ್ತು ನಾರ್ಕೋ ಪರೀಕ್ಷೆಯಲ್ಲಿ ಶ್ರದ್ಧಾ ಕೊಲೆಯನ್ನು ಅಫ್ತಾಬ್ ಒಪ್ಪಿಕೊಂಡಿದ್ದ. ಶ್ರದ್ಧಾಳನ್ನು ನಾನೇ ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಶ್ರದ್ಧಾ ಸಾವಿನ ನಂತರ ತನಗೆ ಹಲವು ಹುಡುಗಿಯರ ಜತೆ ಸಂಬಂಧವಿತ್ತು ಎಂದು ಅಫ್ತಾಬ್ ಒಪ್ಪಿಕೊಂಡಿದ್ದ. ಇದಲ್ಲದೆ, ಮೆಹ್ರೌಲಿ ಅರಣ್ಯದಿಂದ ಪೊಲೀಸರು ಶ್ರದ್ಧಾ ಮೃತದೇಹದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಡಿಎನ್‌ಎ ಪರೀಕ್ಷೆಯಲ್ಲೂ ಮೃತದೇಹದ ತುಣುಕುಗಳು ಶ್ರದ್ಧಾಳ ತಂದೆಯ ಮಾದರಿಯೊಂದಿಗೆ ಹೊಂದಾಣಿಕೆಯಾಗುತ್ತಿವೆ. ಇತ್ತೀಚೆಗಷ್ಟೇ ಶ್ರದ್ಧಾ ಹತ್ಯೆ ಪ್ರಕರಣದಲ್ಲಿ ಅಫ್ತಾಬ್ ವಿರುದ್ಧ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು.

Published On - 3:41 pm, Tue, 14 February 23

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ