AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಮಲ್​, ರಜನಿ ನಂತರ ತಮಿಳಿನ ಮತ್ತೋರ್ವ ಸ್ಟಾರ್​​ ನಟ ರಾಜಕೀಯಕ್ಕೆ ಎಂಟ್ರಿ?

ಈಗಾಗಲೇ ವಿಶಾಲ್​ ತಮ್ಮ ಬೆಂಬಲಿಗರ ಜೊತೆ ಚರ್ಚೆ ಆರಂಭಿಸಿದ್ದಾರೆ ಎನ್ನುತ್ತಿವೆ ಮೂಲಗಳು. ಇದು ನಿಜವೇ ಆಗಿದ್ದಲ್ಲಿ ಅವರು ಚುನಾವಣೆಗೆ ಸ್ಪರ್ಧಿಸೋದು ಬಹುತೇಕ ಖಚಿತವಾಗಲಿದೆ.

ಕಮಲ್​, ರಜನಿ ನಂತರ ತಮಿಳಿನ ಮತ್ತೋರ್ವ ಸ್ಟಾರ್​​ ನಟ ರಾಜಕೀಯಕ್ಕೆ ಎಂಟ್ರಿ?
ರಜನಿಕಾಂತ್
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 17, 2020 | 9:08 PM

Share

ಚೆನ್ನೈ: ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ  ವಿಧಾನಸಭಾ ಚುನಾವಣೆಗೆ ಈಗಲೇ ಸಿದ್ಧತೆಗಳು ನಡೆಯುತ್ತಿವೆ. ಕಮಲ್​ ಹಾಸನ್ ಈಗಾಗಲೇ ಪಕ್ಷ ಘೋಷಣೆ ಮಾಡಿದರೆ, ರಜನಿಕಾಂತ್​ ಹೊಸ ಪಕ್ಷದ ಅನಾವರಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಮತ್ತೋರ್ವ ಸ್ಟಾರ್​ ನಟ ರಾಜಕೀಯಕ್ಕೆ ಧುಮುಕುವ ಸೂಚನೆ ಸಿಕ್ಕಿದೆ.

ತಮಿಳಿನಿ ಖ್ಯಾತ ನಟ ವಿಶಾಲ್​ ರಾಜಕೀಯಕ್ಕೆ ಕಾಲಿಡುವ ಸಾಧ್ಯತೆ ಇದೆ ಎನ್ನುವ ಗುಲ್ಲು ಹರಿದಾಡಿದೆ. ಅವರು 2021ರಲ್ಲಿ ನಡೆಯುವ ವಿಧಾನಸಭೆಯಲ್ಲಿ ಸ್ಪರ್ಧೆ ಕೂಡ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಅದು 2018ರ ಸಮಯ. ತಮಿಳುನಾಡಿನಲ್ಲಿ ಉಪ ಚುನಾವಣೆ ನಡೆದಿತ್ತು. ಈ ವೇಳೆ ವಿಶಾಲ್​ ಪ್ರತಿಷ್ಠಿತ ಆರ್​ಕೆ ನಗರದಿಂದ ಸ್ಪರ್ಧೆಗೆ ಮುಂದಾಗಿದ್ದರು. ಆದರೆ, ಇವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿತ್ತು. ಹೀಗಾಗಿ, ಅವರಿಗೆ ಸ್ಪರ್ಧೆ ಅಸಾಧ್ಯವಾಗಿತ್ತು. ಇದರಿಂದ ಪಾಠ ಕಲಿತಿರುವ ವಿಶಾಲ್ ಈ ಬಾರಿ  ಹೆಚ್ಚು ಜಾಗರೂಕವಾಗಿ ಹೆಜ್ಜೆ ಹಾಕುತ್ತಿದ್ದಾರಂತೆ.

ಈಗಾಗಲೇ ವಿಶಾಲ್​ ತಮ್ಮ ಬೆಂಬಲಿಗರ ಜೊತೆ ಚರ್ಚೆ ಆರಂಭಿಸಿದ್ದಾರೆ ಎನ್ನುತ್ತಿವೆ ಮೂಲಗಳು. ಇದು ನಿಜವೇ ಆಗಿದ್ದಲ್ಲಿ ಅವರು ಚುನಾವಣೆಗೆ ಸ್ಪರ್ಧಿಸೋದು ಬಹುತೇಕ ಖಚಿತವಾಗಲಿದೆ. ಅಂದಹಾಗೆ, ಅವರು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎನ್ನುವುದು ಇನ್ನೂ ಅಧಿಕೃತವಾಗಿಲ್ಲ.

ಅಂದಹಾಗೆ, ವಿಶಾಲ್​ ಆರ್​ಕೆ ನಗರ ಕ್ಷೇತ್ರದಿಂದಲೇ ಕಣಕ್ಕೆ ಇಳಿದರೂ ಯಾವುದೇ ಅಚ್ಚರಿ ಇಲ್ಲ. ಏಕೆಂದರೆ, ಉಪಚುನಾವಣೆಯಲ್ಲಿ ಅವರು ಈ ಕ್ಷೇತ್ರದಿಂದ ಸ್ಪರ್ಧಿಸೋಕೆ ಪ್ರಯತ್ನ ನಡೆಸಿದ್ದರು. ಆದರೆ, ಅದು ಸಾಧ್ಯವಾಗಿರಲಿಲ್ಲ. ಹೀಗಾಗಿ, ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಪ್ರತಿಷ್ಠೆ ಉಳಿಸಿಕೊಳ್ಳುವ ಅಲೋಚನೆ ವಿಶಾಲ್​ ಅವರದ್ದು.

ತಮಿಳುನಾಡಿನಲ್ಲಿ ಮೈತ್ರಿ?

ರಜನಿಕಾಂತ್​​ ಹಾಗೂ ಕಮಲ್​ ಹಾಸನ್​ ಪಕ್ಷಗಳು ಮೈತ್ರಿಯೊಂದಿಗೆ ಸ್ಪರ್ಧೆ ಮಾಡುವ ಸೂಚನೆ ಸಿಕ್ಕಿತ್ತು. ಇತ್ತೀಚೆಗೆ ಮಾತನಾಡಿದ್ದ ಕಮಲ್​ ಹಾಸನ್​, ನಮ್ಮಿಬ್ಬರ ಸಿದ್ಧಾಂತಗಳಲ್ಲಿ ಹೋಲಿಕೆಯಿದ್ದರೆ ಮತ್ತು ಅದರಿಂದ ಜನರಿಗೆ ಪ್ರಯೋಜನವಾಗುತ್ತದೆ ಎಂದಾದರೆ ನಮ್ಮ ಅಹಂಕಾರವನ್ನು ಬದಿಗಿಟ್ಟು ಪರಸ್ಪರ ಸಹಕರಿಸಲು ನಾವು ಸಿದ್ಧರಿದ್ದೇವೆ. ಇಬ್ಬರ ಮೈತ್ರಿಗೆ ಒಂದು ದೂರವಾಣಿ ಕರೆ ಮಾಡುವುದು ಮಾತ್ರ ಬಾಕಿ ಉಳಿದಿದೆ ಎಂದಿದ್ದರು.

2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವೆ: ಕಮಲ್ ಹಾಸನ್

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ