AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಚೀನಾ ಮಧ್ಯೆ ಶೀಘ್ರ ಮತ್ತೊಂದು ಯುದ್ಧ ಸಾಧ್ಯತೆ: ಆತಂಕಕಾರಿ ವರದಿ ಬಹಿರಂಗ

ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ, 1962 ರ ಭಾರತ-ಚೀನಾ ಯುದ್ಧದ ಅನುಭವಿ ಜನರಲ್ ವಿಪಿ ಮಲಿಕ್ ಕೂಡ ಯುದ್ಧ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದಿದ್ದಾರೆ. ‘ನ್ಯೂಸ್ 9 ಪ್ಲಸ್’ ಶೋದಲ್ಲಿ ಭಾಗವಹಿಸಿದ ಅವರು, ಬ್ರಿಟನ್​ ಸಂಸ್ಥೆಯ ವರದಿಯ ಬಗ್ಗೆ ಏನು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ? ಯುದ್ಧ ಸಾಧ್ಯತೆಯ ಬಗ್ಗೆ ಅವರು ಹೇಳಿದ್ದೇನು ಎಂಬ ವಿವರ ಇಲ್ಲಿದೆ.

ಭಾರತ ಚೀನಾ ಮಧ್ಯೆ ಶೀಘ್ರ ಮತ್ತೊಂದು ಯುದ್ಧ ಸಾಧ್ಯತೆ: ಆತಂಕಕಾರಿ ವರದಿ ಬಹಿರಂಗ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Mar 09, 2024 | 4:28 PM

Share

ನವದೆಹಲಿ, ಮಾರ್ಚ್​ 9: ಭಾರತ ಮತ್ತು ಚೀನಾ ಮಧ್ಯೆ 2025ರಿಂದ 2030 ರ ನಡುವಣ ಅವಧಿಯಲ್ಲಿ ಯಾವಾಗ ಬೇಕಾದರೂ ಮತ್ತೊಂದು ಯುದ್ಧ (Indo China War) ಸಂಭವಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಬ್ರಿಟನ್​ ಸಂಸ್ಥೆಯೊಂದರ (RUSI) ವರದಿ ಸುಳಿವು ನೀಡಿದೆ. ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ, ಜನರಲ್ ವಿಪಿ ಮಲಿಕ್ (Gen VP Malik) ಕೂಡ ಮತ್ತೊಂದು ಯುದ್ಧದ ಸಾಧ್ಯತೆಯನ್ನು ಒಪ್ಪಿಕೊಂಡಿದ್ದಾರೆ. ಇಷ್ಟೇ ಅಲ್ಲದೆ, ಸೇನೆಯು ಸದಾ ಕಟ್ಟೆಚ್ಚರದಿಂದ ಇರಬೇಕು ಎಂದಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಭಾರತ ಮತ್ತು ಚೀನಾ ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಸೇನಾ ಮುಖಾಮುಖಿ ಎದುರಿಸುತ್ತಿವೆ. ಇದೇ ಸಂದರ್ಭದಲ್ಲೇ, 2030 ರ ವೇಳೆಗೆ ಭಾರತ ಮತ್ತು ಚೀನಾ ನಡುವೆ ಯುದ್ಧ ಸಂಭವಿಸಬಹುದು ಎಂದು ಬ್ರಿಟನ್ ಮೂಲದ ರಾಯಲ್ ಯುನೈಟೆಡ್ ಸರ್ವಿಸಸ್ ಇನ್‌ಸ್ಟಿಟ್ಯೂಟ್ (ಆರ್​ಯುಎಸ್​ಐ) ಎಚ್ಚರಿಸಿದೆ. ಎರಡನೇ ಚೀನಾ-ಭಾರತ ಯುದ್ಧವು 2025 ಮತ್ತು 2030 ರ ನಡುವೆ ಪೂರ್ವ ಲಡಾಖ್‌ನಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ವರದಿ ಉಲ್ಲೇಖಿಸಿದೆ.

ಈ ವಿಚಾರವಾಗಿ ‘ನ್ಯೂಸ್ 9 ಪ್ಲಸ್’ ಶೋದಲ್ಲಿ ಜನರಲ್ ವಿಪಿ ಮಲಿಕ್ ಉಲ್ಲೇಖಿಸಿದ್ದು, ಮತ್ತೊಂದು ಯುದ್ಧ ಸಾಧ್ಯತೆಯನ್ನು ಒಪ್ಪಿಕೊಂಡಿದ್ದಾರೆ. ಇವರು 1962 ರ ಭಾರತ-ಚೀನಾ ಯುದ್ಧದ ಅನುಭವಿ ಜನರಲ್ ಎಂಬುದು ಗಮನಾರ್ಹ.

ಯುದ್ಧವು ಯಾವಾಗ ಬೇಕಾದರೂ ಸಂಭವಿಸಬಹುದು. 1996 ರಲ್ಲಿ ಎಲ್​ಎಸಿ ಪ್ರದೇಶದಲ್ಲಿ ಶಾಂತಿಗಾಗಿ ನಾವು ಚೀನಾದೊಂದಿಗೆ ಸಹಿ ಮಾಡಿದ ಒಪ್ಪಂದವನ್ನು ಈಗಾಗಲೇ ಮುರಿದು ಹಾಕಲಾಗಿದೆ. ಚೀನಾ 2020 ರಲ್ಲಿ ಪೂರ್ವ ಲಡಾಖ್ ಸೆಕ್ಟರ್ ಮೇಲೆ ದಾಳಿ ಮಾಡಿದೆ. ಈಶಾನ್ಯದಲ್ಲಿ ಹಲವಾರು ಘರ್ಷಣೆಗಳು ನಡೆದಿವೆ. ಯುದ್ಧವು ಯಾವಾಗ ಬೇಕಾದರೂ ಸಂಭವಿಸಬಹುದು. ಹೀಗಾಗಿ ನಾವು ಜಾಗರೂಕರಾಗಿರಬೇಕು ಎಂದು ಮಲಿಕ್ ಹೇಳಿದ್ದಾರೆ.

ಚೀನಾದಿಂದ ಯುದ್ಧ ಬೆದರಿಕೆ ಇರುವ ಕಾರಣವೇ ಭಾರತ ಸರ್ಕಾರವು ಹಿಮಾಲಯದ ಗಡಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದೆ. ಗಡಿಯುದ್ದಕ್ಕೂ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದೆ. ನಮ್ಮ ಕಾರ್ಯಾಚರಣೆಯ ಯೋಜನೆಯನ್ನು ಬದಲಾಯಿಸಿದೆ. ಮತ್ತು ಇದಕ್ಕೆ ಮೂಲಸೌಕರ್ಯವು ಸಂಪೂರ್ಣವಾಗಿ ಅವಶ್ಯಕವಾಗಿದೆ ಎಂದು ಜನರಲ್ ಮಲಿಕ್ ಹೇಳಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಭಾರತವು ಗಡಿಯಲ್ಲಿ ಮೂಲಸೌಕರ್ಯ ಹೆಚ್ಚಿಸಲು ಮತ್ತು ಗಡಿ ರಸ್ತೆಗಳ ನಿರ್ಮಾಣಕ್ಕೆ ಅನುದಾನವನ್ನು 10 ಪಟ್ಟು ಹೆಚ್ಚಿಸಿದೆ. ರಸ್ತೆಗಳು, ಸೇತುವೆಗಳು, ಸುರಂಗಗಳು ಸೇರಿದಂತೆ ಇತರ ಮೂಲಸೌಕರ್ಯಗಳನ್ನು ಯುದ್ಧದ ಸಾಧ್ಯತೆಯ ಆಧಾರದ ಮೇಲೆಯೇ ತ್ವರಿತಗತಿಯಲ್ಲಿ ನಿರ್ಮಿಸಲಾಗುತ್ತಿದೆ. ಗಡಿಯುದ್ದಕ್ಕೂ ಭಾರತದ ಆಯಕಟ್ಟಿನ ಪ್ರಮುಖ ಸ್ಥಳಗಳಿಗೆ ಪಡೆಗಳ ವೇಗದ ಚಲನೆಯನ್ನು ಖಚಿತಪಡಿಸುವುದು ಈ ಯೋಜನೆಗಳ ಗುರಿಯಾಗಿದೆ.

ಇದನ್ನೂ ಓದಿ: ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ; ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ

ಚೀನಾ ಗಡಿ ಪ್ರದೇಶದಲ್ಲಿ ಮಹತ್ವದ್ದೆನ್ನಲಾದ ಅರುಣಾಚಲ ಪ್ರದೇಶದ ಸೆಲಾ ಪಾಸ್ (Sela Pass) ದ್ವಿಪಥ ಸುರಂಗ ಮಾರ್ಗವನ್ನು ಪ್ರಧಾನಿ ಮೋದಿ ಇಂದು (ಮಾರ್ಚ್ 9) ಲೋಕಾರ್ಪಣೆಗೊಳಿಸಿದ್ದಾರೆ. ಈ ಸುರಂಗ ಮಾರ್ಗ ಅರುಣಾಚಲ ಪ್ರದೇಶದ ತವಾಂಗ್ ಅನ್ನು ಅಸ್ಸಾಂನೊಂದಿಗೆ ಸಂಪರ್ಕಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಇದನ್ನು ಸುಮಾರು 825 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು 13,000 ಅಡಿಗಳಷ್ಟು ವಿಶ್ವದ ಅತಿ ಉದ್ದದ ದ್ವಿ-ಪಥದ ಸುರಂಗವಾಗಿದೆ. ಸೆಲಾ ಸುರಂಗವು ಹಿಮಪಾತದಂಥ ಪ್ರತಿಕೂಲ ಹವಾಮಾನದ ಸಂದರ್ಭಗಳಲ್ಲಿ ಶೀಘ್ರ ಗಡಿ ಪ್ರದೇಶವನ್ನು ತಲುಪಲು ಸೇನೆಗೆ ಅನುವು ಮಾಡಿಕೊಡಲಿದೆ. ಗಡಿ ಪ್ರದೇಶಗಳಿಗೆ ಸೇನೆಯ ಸಂಪರ್ಕ ಸುಗಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಉದ್ದೇಶಿಸಿರುವ ಹಲವು ನಿರ್ಣಾಯಕ ಯೋಜನೆಗಳಲ್ಲಿ ಒಂದಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು