AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್-19 ಸೃಷ್ಟಿಸಿರುವ ಆತಂಕವನ್ನು ವಿಧ್ವಂಸಕ ಮತ್ತು ಭಾರತ-ವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ: ಆರ್​ಎಸ್​ಎಸ್​

ಈ ಬಾರಿ ಕೊವಿಡ್-19 ಸೋಂಕಿನ ಪ್ರಮಾಣ ಮತ್ತು ತೀವ್ರತೆ ಬಹಳ ಗಂಭೀರವಾಗಿದ್ದು ಇಡೀ ದೇಶವೇ ಅದರಡಿ ಸಿಲುಕಿ ನಲುಗುವಂತಾಗಿದೆ ಎಂದು ಹೇಳಿರುವ ಹೊಸಬಾಳೆ ಅವರು, ಪರಿಸ್ಥಿತಿ ಬಹಳ ಚಿಂತಾಜನಕವಾಗಿದ್ದರೂ ನಮ್ಮ ಸಮಾಜ ಅದಕ್ಕಿಂತ ಬಲಾಢ್ಯವಾಗಿದೆ ಎಂದು ಹೇಳಿದ್ದಾರೆ.

ಕೊವಿಡ್-19 ಸೃಷ್ಟಿಸಿರುವ ಆತಂಕವನ್ನು ವಿಧ್ವಂಸಕ ಮತ್ತು ಭಾರತ-ವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ: ಆರ್​ಎಸ್​ಎಸ್​
ಆರ್​ಎಸ್​ಎಸ್​ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ
ಅರುಣ್​ ಕುಮಾರ್​ ಬೆಳ್ಳಿ
|

Updated on: Apr 24, 2021 | 11:54 PM

Share

ಕೊವಿಡ್-19 ಸಾಂಕ್ರಾಮಿಕ ಪಿಡುಗು ಭಾರತದಲ್ಲಿ ಉಂಟುಮಾಡಿರುವ ಭಯಾನಕ ಸ್ಥಿತಿಯನ್ನು ಕೆಲವು ವಿಧ್ವಂಸಕ ಮತ್ತು ಭಾರತ-ವಿರೋಧಿ ಶಕ್ತಿಗಳು ದುರುಪಯೋಗಪಡಿಸಿಕೊಂಡು ನಕರಾತ್ಮಕ ಮತ್ತು ಅಪನಂಬಿಕೆಯ ವಾತಾವರಣವನ್ನು ಸೃಷ್ಟಿಸುವ ಸಾಧ್ಯತೆಯಿರುವುದರಿಂದ ಜನರು ಜಾಗ್ರತೆಯಿಂದಿರಬೇಕೆಂದು ರಾಷ್ಟ್ರೀಯ ಸ್ವಯಂ ಸಂಘ (ಆರ್​ಎಸ್​ಎಸ್) ಮನವಿ ಮಾಡಿದೆ.

ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಬಿಡುಗಡೆ ಮಾಡಿರುವ ಹೇಳಿಕೆಯೊಂದರಲ್ಲಿ, ಸಂಘದ ಕಾರ್ಯಕರ್ತರು, ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಸ್ಥೆಗಳಿಗೆ ಪ್ರಸ್ತುತವಾಗಿ ತಲೆದೋರಿರುವ ಸವಾಲುಗಳನ್ನು ಎದುರಿಸಲು ಮುಂದೆ ಬರಬೇಕೆಂದು ಕೇಳಲಾಗಿದೆ. ಕೊವಿಡ್-19 ಪಿಡುಗಿನ ಎರಡನೇ ಅಲೆಯಲ್ಲಿ ದಿನೇದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಾ ದೇಶವನ್ನು ಭಾರೀ ಸಂಕಷ್ಟಕ್ಕೆ ದೂಡಿರುವುದರಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್, ಬೆಡ್ ಮತ್ತು ವೈದ್ಯಕೀಯ ಸರಬರಾಜುಗಳ ತೀವ್ರ ಅಭಾವ ಎದುರಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

‘ದೇಶದ ಪ್ರಸ್ತುತ ವಿದ್ಯಮಾನಗಳ ಹಿನ್ನೆಲೆಯಲ್ಲಿ ವಿಧ್ವಂಸಕ ಮತ್ತು ದೇಶ-ವಿರೋಧಿ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆದು ದೇಶದಲ್ಲಿ ನಕಾರಾತ್ಮಕ ಮತ್ತು ಅಪನಂಬಿಕೆಯ ವಾತಾವರಣವನ್ನು ಸೃಷ್ಟಿಸುವ ಸಾದ್ಯತೆ ಕೂಡ ಇದೆ. ದೇಶದ ಲ್ಲಿ ವಾಸವಾಗಿರುವ ಜನರು ಸ್ಥಿತಿಯನ್ನು ಎದುರಿಸಲು ತಮ್ಮ ಸಕಾರಾತ್ಮಕ ಪ್ರಯತ್ನಗಳಲ್ಲದೆ, ಈ ವಿಧ್ವಂಸಕ ಶಕ್ತಿಗಳು ರೂಪಿಸುವ ಕುತಂತ್ರಗಳ ಬಗ್ಗೆ ಜಾಗರೂಕರಾಗಿರಬೇಕು,’ ಎಂದು ಹೊಸಬಾಳೆ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಂಘದ ಪರವಾಗಿ ಅವರು, ಮಾಧ್ಯಮವೂ ಸೇರಿದಂತೆ ಸಮಾಜದ ಎಲ್ಲ್ಲಾ ವರ್ಗಗಳು ದೇಶದಲ್ಲಿ ಸಕಾರಾತ್ಮಕ ವಾತಾವಣ, ನಿರೀಕ್ಷೆ ಮತ್ತು ವಿಶ್ವಾಸ ನೆಲೆಗೊಂಡಿರಲು ತಮ್ಮ ಕಾಣಿಕೆ ನೀಡಬೇಕೆಂದು ಮನವಿ ಮಾಡಿದ್ದಾರೆ.

‘ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವವರು ಸಂಯಮ ಮತ್ತು ಜಾಗರೂಕತೆಯಿಂದ ಸಕಾರಾತ್ಮಕ ಪಾತ್ರ ನಿರ್ವಹಿಸಬೇಕು,’ ಎಂದು ಅವರು ಕರೆ ನೀಡಿದ್ದಾರೆ.

ಈ ಬಾರಿ ಕೊವಿಡ್-19 ಸೋಂಕಿನ ಪ್ರಮಾಣ ಮತ್ತು ತೀವ್ರತೆ ಬಹಳ ಗಂಭೀರವಾಗಿದ್ದು ಇಡೀ ದೇಶವೇ ಅದರಡಿ ಸಿಲುಕಿ ನಲುಗುವಂತಾಗಿದೆ ಎಂದು ಹೇಳಿರುವ ಹೊಸಬಾಳೆ ಅವರು, ಪರಿಸ್ಥಿತಿ ಬಹಳ ಚಿಂತಾಜನಕವಾಗಿದ್ದರೂ ನಮ್ಮ ಸಮಾಜ ಅದಕ್ಕಿಂತ ಬಲಾಢ್ಯವಾಗಿದೆ ಎಂದು ಹೇಳಿದ್ದಾರೆ.

‘ಸಂಕಷ್ಟ ಎದುರಾದಾಗೆಲೆಲ್ಲ ಅದನ್ನು ಮೆಟ್ಟಿ ನಿಲ್ಲುವ ನಮ್ಮ ಸಾಮರ್ಥ್ಯ ಇಡೀ ವಿಶ್ವಕ್ಕೆ ಗೊತ್ತಿದೆ. ಶಿಸ್ತು-ಸಂಯಮ ಮತ್ತು ಪರಸ್ಪರ ಬೆಂಬಲದೊಂದಿಗೆ ತಾಳ್ಮೆಯನ್ನು ಕಾಯ್ದುಕೊಳ್ಳುತ್ತಾ, ನಮ್ಮ ಆತ್ಮಸ್ಥೈರ್ಯ ಹೆಚ್ಚಿಸಿಕೊಂಡು ಈಗಿನ ಸ್ಥಿತಿಯನ್ನು ಹಿಮ್ಮೆಟ್ಟಿಸುವ ಅಚಲ ವಿಶ್ವಾಸ ನಮ್ಮಲ್ಲಿದೆ,’ ಎಂದು ಅವರು ಹೇಳಿದ್ದಾರೆ.

ಮಾಸ್ಕ್​ ಧರಿಸುವ, ಸ್ವಚ್ಛತೆ, ದೈಹಿಕ ಅಂತರ, ಆಯುರ್ವೇದ ಕಷಾಯ, ಆವಿಯನ್ನು ಮೂಗಿನ ಮೂಲಕ ಎಳೆದುಕೊಳ್ಳುವ ಮತ್ತು ಲಸಿಕೆ ಹಾಕಿಸಿಕೊಳ್ಳುವುದು ಮೊದಲಾದವುಗಳ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಹೊಸಬಾಳೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Dattatreya Hosabale: ಆರ್​ಎಸ್​ಎಸ್​ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ: ಮಿತಭಾಷಿ, ಮಧ್ಯಮ ಮಾರ್ಗಿ

ಇದನ್ನೂ ಓದಿ: Dattatreya Hosabale: ದತ್ತಾತ್ರೇಯ ಹೊಸಬಾಳೆ ಆರ್​ಎಸ್​ಎಸ್​ ಸರಕಾರ್ಯವಾಹ್​ ಆಗಿ ಆಯ್ಕೆ; ಮುಖ್ಯಮಂತ್ರಿ ಅಭಿನಂದನೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ