AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CAA ವಿರುದ್ಧ 7 ಈಶಾನ್ಯ ರಾಜ್ಯ ವಿದ್ಯಾರ್ಥಿಗಳಿಂದ Black Day ಆಚರಣೆ

ಕೊರೊನಾ ಬಳಿಕ ಮಸುಕಾಗಿದ್ದ CAA ವಿರುದ್ಧದ ಪ್ರತಿಭಟನೆಗಳು ಮತ್ತೆ ಸದ್ದು ಮಾಡುತ್ತಿವೆ. ಈಶಾನ್ಯ ರಾಜ್ಯದ ವಿದ್ಯಾರ್ಥಿಗಳು ಡಿ.11ರಂದು ‘Black Day’ ಆಚರಿಸಲಿದ್ದಾರೆ.

CAA ವಿರುದ್ಧ 7 ಈಶಾನ್ಯ ರಾಜ್ಯ ವಿದ್ಯಾರ್ಥಿಗಳಿಂದ Black Day ಆಚರಣೆ
ಸಂಗ್ರಹ ಚಿತ್ರ
TV9 Web
| Updated By: ganapathi bhat|

Updated on:Apr 07, 2022 | 5:44 PM

Share

ಗುವಹಾಟಿ: ಕೊವಿಡ್ ಕಾರಣದಿಂದ ಮಸುಕಾಗಿದ್ದ CAA (Citizenship Amendment Act), National Register of Citizens (NRC) ವಿಚಾರವು ಮತ್ತೆ ಮುನ್ನೆಲೆಗೆ ಬರುವ ಸೂಚನೆ ಕಂಡುಬಂದಿದೆ. ಸಿಎಎ ರದ್ದತಿಯನ್ನು ಕೋರಿ NESO (North East Students Organization) ವಿದ್ಯಾರ್ಥಿ ಸಂಘಟನೆಯು ಡಿ. 11ರಂದು ‘Black Day’ ಆಚರಿಸಲಿದ್ದು, ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿದುಬಂದಿದೆ.

ಈಶಾನ್ಯ ರಾಜ್ಯಗಳ ಜನರು ಸಿಎಎ ತಿದ್ದುಪಡಿ ಕಾಯ್ದೆ 2019ನ್ನು ವಿರೋಧಿಸುತ್ತಲೇ ಬಂದಿದ್ದೇವೆ. ಆದರೂ, ಸರ್ಕಾರ ಇತ್ತಕಡೆ ಗಮನ ಹರಿಸದೇ ಕಾಯ್ದೆಯನ್ನು ಅಂಗೀಕರಿಸಿದೆ ಎಂದು NESO ಮುಖ್ಯಸ್ಥ, ಸ್ಯಾಮುಯಲ್ ಬಿ ಜೈರ್ವಾ ಹೇಳಿದ್ದಾರೆ. ಹೀಗಾಗಿ ಎಲ್ಲಾ 7 ಈಶಾನ್ಯ ರಾಜ್ಯಗಳ ಮುಖ್ಯ ನಗರಗಳಲ್ಲಿ ಕಪ್ಪು ಬಾವುಟ, ಕಪ್ಪು ಫಲಕಗಳನ್ನು ಹಿಡಿದು ಸಿಎಎ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಈ ಮೂಲಕ ಸಿಎಎ ವಿರೋಧಿ ಸಂದೇಶವನ್ನು ಸರ್ಕಾರಕ್ಕೆ ರವಾನಿಸುವ ಇರಾದೆಯನ್ನು NESO ಹೊಂದಿದೆ. ಜೊತೆಗೆ, ಸರ್ಕಾರದ ಅನ್ಯಾಯವನ್ನು ಜನರಿಗೆ ಮನವರಿಕೆ ಮಾಡುವ ಉದ್ದೇಶವನ್ನೂ ಈ ಪ್ರತಿಭಟನೆ ಹೊಂದಿದೆ ಎಂದು NESO ಮುಖಂಡರು ಹೇಳಿದ್ದಾರೆ. NESO ಸಂಘಟನೆಯು ಏಳು ಈಶಾನ್ಯ ರಾಜ್ಯಗಳ, ಎಂಟು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟವಾಗಿದೆ.

ಸಿಎಎ ಮತ್ತು ಎನ್​ಆರ್​ಸಿ ತಿದ್ದುಪಡಿ ಕಾಯ್ದೆಯು ಕಳೆದ ವರ್ಷ ಡಿ. 9ರಂದು ಲೋಕಸಭೆಯಲ್ಲಿ ಒಪ್ಪಿಗೆ ಪಡೆದಿತ್ತು. ಡಿ. 11ರಂದು ರಾಜ್ಯಸಭೆಯಲ್ಲಿ ಅನುಮೋದನೆ ಪಡೆದಿತ್ತು ಮತ್ತು ಡಿ. 12ರಂದು ರಾಷ್ಟ್ರಪತಿಗಳಿಂದಲೂ ಅಂಗೀಕರಿಸಲ್ಪಟ್ಟಿತ್ತು. ಆ ಬಳಿಕ ದೇಶಾದ್ಯಂತ ಈ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಗಳು ನಡೆದಿದ್ದವು. ಕೊವಿಡ್ ಕಾರಣದಿಂದ ಪ್ರತಿಭಟನೆ ಕಾವು ಕಡಿಮೆಯಾಗಿತ್ತು. ಇದೀಗ ಒಂದು ವರ್ಷದ ಬಳಿಕ ಸಿಎಎ ಮತ್ತೆ ಸದ್ದು ಮಾಡುವಂತೆ ಕಾಣುತ್ತಿದೆ.

Explainer | ಪೌರತ್ವ ತಿದ್ದುಪಡಿ ಕಾಯ್ದೆ ಎಂದು ಅನುಷ್ಠಾನ? ಏಕಿಷ್ಟು ವಿರೋಧ?

Published On - 11:21 am, Fri, 11 December 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್