AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CAA ವಿರುದ್ಧ 7 ಈಶಾನ್ಯ ರಾಜ್ಯ ವಿದ್ಯಾರ್ಥಿಗಳಿಂದ Black Day ಆಚರಣೆ

ಕೊರೊನಾ ಬಳಿಕ ಮಸುಕಾಗಿದ್ದ CAA ವಿರುದ್ಧದ ಪ್ರತಿಭಟನೆಗಳು ಮತ್ತೆ ಸದ್ದು ಮಾಡುತ್ತಿವೆ. ಈಶಾನ್ಯ ರಾಜ್ಯದ ವಿದ್ಯಾರ್ಥಿಗಳು ಡಿ.11ರಂದು ‘Black Day’ ಆಚರಿಸಲಿದ್ದಾರೆ.

CAA ವಿರುದ್ಧ 7 ಈಶಾನ್ಯ ರಾಜ್ಯ ವಿದ್ಯಾರ್ಥಿಗಳಿಂದ Black Day ಆಚರಣೆ
ಸಂಗ್ರಹ ಚಿತ್ರ
TV9 Web
| Edited By: |

Updated on:Apr 07, 2022 | 5:44 PM

Share

ಗುವಹಾಟಿ: ಕೊವಿಡ್ ಕಾರಣದಿಂದ ಮಸುಕಾಗಿದ್ದ CAA (Citizenship Amendment Act), National Register of Citizens (NRC) ವಿಚಾರವು ಮತ್ತೆ ಮುನ್ನೆಲೆಗೆ ಬರುವ ಸೂಚನೆ ಕಂಡುಬಂದಿದೆ. ಸಿಎಎ ರದ್ದತಿಯನ್ನು ಕೋರಿ NESO (North East Students Organization) ವಿದ್ಯಾರ್ಥಿ ಸಂಘಟನೆಯು ಡಿ. 11ರಂದು ‘Black Day’ ಆಚರಿಸಲಿದ್ದು, ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿದುಬಂದಿದೆ.

ಈಶಾನ್ಯ ರಾಜ್ಯಗಳ ಜನರು ಸಿಎಎ ತಿದ್ದುಪಡಿ ಕಾಯ್ದೆ 2019ನ್ನು ವಿರೋಧಿಸುತ್ತಲೇ ಬಂದಿದ್ದೇವೆ. ಆದರೂ, ಸರ್ಕಾರ ಇತ್ತಕಡೆ ಗಮನ ಹರಿಸದೇ ಕಾಯ್ದೆಯನ್ನು ಅಂಗೀಕರಿಸಿದೆ ಎಂದು NESO ಮುಖ್ಯಸ್ಥ, ಸ್ಯಾಮುಯಲ್ ಬಿ ಜೈರ್ವಾ ಹೇಳಿದ್ದಾರೆ. ಹೀಗಾಗಿ ಎಲ್ಲಾ 7 ಈಶಾನ್ಯ ರಾಜ್ಯಗಳ ಮುಖ್ಯ ನಗರಗಳಲ್ಲಿ ಕಪ್ಪು ಬಾವುಟ, ಕಪ್ಪು ಫಲಕಗಳನ್ನು ಹಿಡಿದು ಸಿಎಎ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಈ ಮೂಲಕ ಸಿಎಎ ವಿರೋಧಿ ಸಂದೇಶವನ್ನು ಸರ್ಕಾರಕ್ಕೆ ರವಾನಿಸುವ ಇರಾದೆಯನ್ನು NESO ಹೊಂದಿದೆ. ಜೊತೆಗೆ, ಸರ್ಕಾರದ ಅನ್ಯಾಯವನ್ನು ಜನರಿಗೆ ಮನವರಿಕೆ ಮಾಡುವ ಉದ್ದೇಶವನ್ನೂ ಈ ಪ್ರತಿಭಟನೆ ಹೊಂದಿದೆ ಎಂದು NESO ಮುಖಂಡರು ಹೇಳಿದ್ದಾರೆ. NESO ಸಂಘಟನೆಯು ಏಳು ಈಶಾನ್ಯ ರಾಜ್ಯಗಳ, ಎಂಟು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟವಾಗಿದೆ.

ಸಿಎಎ ಮತ್ತು ಎನ್​ಆರ್​ಸಿ ತಿದ್ದುಪಡಿ ಕಾಯ್ದೆಯು ಕಳೆದ ವರ್ಷ ಡಿ. 9ರಂದು ಲೋಕಸಭೆಯಲ್ಲಿ ಒಪ್ಪಿಗೆ ಪಡೆದಿತ್ತು. ಡಿ. 11ರಂದು ರಾಜ್ಯಸಭೆಯಲ್ಲಿ ಅನುಮೋದನೆ ಪಡೆದಿತ್ತು ಮತ್ತು ಡಿ. 12ರಂದು ರಾಷ್ಟ್ರಪತಿಗಳಿಂದಲೂ ಅಂಗೀಕರಿಸಲ್ಪಟ್ಟಿತ್ತು. ಆ ಬಳಿಕ ದೇಶಾದ್ಯಂತ ಈ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಗಳು ನಡೆದಿದ್ದವು. ಕೊವಿಡ್ ಕಾರಣದಿಂದ ಪ್ರತಿಭಟನೆ ಕಾವು ಕಡಿಮೆಯಾಗಿತ್ತು. ಇದೀಗ ಒಂದು ವರ್ಷದ ಬಳಿಕ ಸಿಎಎ ಮತ್ತೆ ಸದ್ದು ಮಾಡುವಂತೆ ಕಾಣುತ್ತಿದೆ.

Explainer | ಪೌರತ್ವ ತಿದ್ದುಪಡಿ ಕಾಯ್ದೆ ಎಂದು ಅನುಷ್ಠಾನ? ಏಕಿಷ್ಟು ವಿರೋಧ?

Published On - 11:21 am, Fri, 11 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ