AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anti Cold Syrup Ban: 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಶೀತದ ಸಿರಪ್ ನಿಷೇಧ

ಔಷಧ ತಯಾರಕರು ‘ಫಿಕ್ಸೆಡ್ ಡ್ರಗ್ ಕಾಂಬಿನೇಷನ್ (FDC)’ ಅನ್ನು ನಾಲ್ಕು ವರ್ಷದ ಒಳಗಿನ ಮಕ್ಕಳಿಗೆ ನೀಡುವಂತಿಲ್ಲ ಎಂದು ಉತ್ಪನ್ನಗಳ ಮೇಲೆ ಲೇಬಲ್ ಅಂಟಿಸುವಂತೆ ಔಷಧ ತಯಾರಕರಿಗೆ ಔಷಧ ನಿಯಂತ್ರಕ ಡಿಸೆಂಬರ್ 18ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ.

Anti Cold Syrup Ban: 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಶೀತದ ಸಿರಪ್ ನಿಷೇಧ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 21, 2023 | 11:43 AM

Share

ನವದೆಹಲಿ, ಡಿಸೆಂಬರ್ 21: ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಶೀತ ನಿರೋಧಕ ಸಿರಪ್ (Anti Cold Syrup) ನೀಡುವಂತಿಲ್ಲ ಎಂದು ಭಾರತದ ಔಷಧ ನಿಯಂತ್ರಕ (The drugs regulator in India) ಹೇಳಿದೆ. ಕೆಮ್ಮಿನ ಸಿರಪ್​​ ನೀಡಿದ ಬಳಿಕ ಜಾಗತಿಕವಾಗಿ 141 ಮಕ್ಕಳು ಮೃತಪಟ್ಟಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಔಷಧ ನಿಯಂತ್ರಕ ಈ ಕ್ರಮ ಕೈಗೊಂಡಿದೆ.

ಮಕ್ಕಳಿಗೆ ಶೀತ ನಿರೋಧಕ ಔಷಧ​ ನೀಡುವ ಬಗ್ಗೆ ಚರ್ಚೆಯಾಗುತ್ತಿದೆ. ಶೀತ ನಿರೋಧಕ ಔಷಧದ ಸಂಯೋಜನೆಯ (ಫಿಕ್ಸೆಡ್ ಡ್ರಗ್ ಕಾಂಬಿನೇಷನ್) ಬಗ್ಗೆಯೂ ಚರ್ಚೆಗಳಾಗುತ್ತಿವೆ. ಸದ್ಯದ ಮಟ್ಟಿಗೆ ಚಿಕ್ಕಮಕ್ಕಳಿಗೆ ಅನುಮೋದಿತವಲ್ಲದ ಈ ಸಿರಪ್​ ಅನ್ನು ನೀಡಬಾರದು ಎಂದು ಔಷಧ ನಿಯಂತ್ರಕ ಹೇಳಿದೆ.

ಕಳೆದ ವರ್ಷ ಗ್ಯಾಂಬಿಯಾ, ಉಜ್ಬೇಕಿಸ್ತಾನ್ ಮತ್ತು ಕ್ಯಾಮರೂನ್‌ನಲ್ಲಿ ಕನಿಷ್ಠ 141 ಮಕ್ಕಳು ಸಿರಪ್​ ಸೇವನೆಯ ಪರಿಣಾಮ ಮೃತಪಟ್ಟಿದ್ದರು. 2019ರಿಂದಲೂ ಕಫ್ ಸಿರಪ್​ಗಳಲ್ಲಿ ವಿಶಾಂಷ ಇರುವ ಬಗ್ಗೆ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದರು. ಮಕ್ಕಳ ಸಾವಿನ ವಿಚಾರ ಜಾಗತಿಕವಾಗಿ ಚರ್ಚೆಗೆ ಗ್ರಾಸವಾಗಿತ್ತು.

ಔಷಧ ತಯಾರಕರು ‘ಫಿಕ್ಸೆಡ್ ಡ್ರಗ್ ಕಾಂಬಿನೇಷನ್ (FDC)’ ಅನ್ನು ನಾಲ್ಕು ವರ್ಷದ ಒಳಗಿನ ಮಕ್ಕಳಿಗೆ ನೀಡುವಂತಿಲ್ಲ ಎಂದು ಉತ್ಪನ್ನಗಳ ಮೇಲೆ ಲೇಬಲ್ ಅಂಟಿಸುವಂತೆ ಔಷಧ ತಯಾರಕರಿಗೆ ಔಷಧ ನಿಯಂತ್ರಕ ಡಿಸೆಂಬರ್ 18ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಸಾಮಾನ್ಯ ಶೀತವೆಂದು ಕೋವಿಡ್ ನಿರ್ಲಕ್ಷಿಸಬೇಡಿ, ದೀರ್ಘ ಕಾಲದ ಪರಿಣಾಮ ಅನೇಕ: ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಎಚ್ಚರಿಕೆ

‘ಫಿಕ್ಸೆಡ್ ಡ್ರಗ್ ಕಾಂಬಿನೇಷನ್’ ಎಂಬುದು ಕ್ಲೋರ್ಫೆನಿರಮೈನ್ ಮೆಲೇಟ್ ಮತ್ತು ಫಿನೈಲ್ಫ್ರಿನ್ ಅನ್ನು ಒಳಗೊಂಡಿರುತ್ತದೆ. ಇದನ್ನು ಸಾಮಾನ್ಯವಾಗಿ ಶೀತದ ರೋಗಲಕ್ಷಣಗಳಿಗೆ ಚಿಕಿತ್ಸೆ ನೀಡಲು ಸಿರಪ್ ಅಥವಾ ಮಾತ್ರೆಗಳಲ್ಲಿ ಬಳಸಲಾಗುತ್ತದೆ.

ವಿಶ್ವ ಆರೋಗ್ಯ ಸಂಸ್ಥೆಯು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕೆಮ್ಮು ಮತ್ತು ಶೀತ ರೋಗಲಕ್ಷಣಗಳ ಚಿಕಿತ್ಸೆಗಾಗಿ ಪ್ರತ್ಯಕ್ಷವಾದ ಕೆಮ್ಮಿನ ಸಿರಪ್‌ಗಳು ಅಥವಾ ಔಷಧಗಳ ಬಳಕೆಯನ್ನು ಶಿಫಾರಸು ಮಾಡುವುದಿಲ್ಲ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ