AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ವಿರೋಧಿ ಘೋಷಣೆ ಆರೋಪ: ಉತ್ತರಪ್ರದೇಶದ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ಉತ್ತರಪ್ರದೇಶದ ಸಾಕೇತ್ ಡಿಗ್ರಿ ಕಾಲೇಜಿನಲ್ಲಿ ಡಿಸೆಂಬರ್ 16ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಕೆಲವು ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆ ಕೂಗಿದ್ದರು ಎಂದು ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದರು.

ದೇಶ ವಿರೋಧಿ ಘೋಷಣೆ ಆರೋಪ: ಉತ್ತರಪ್ರದೇಶದ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ಸಾಕೇತ್ ಪಿಜಿ ಕಾಲೇಜು (ಕೃಪೆ: ಫೇಸ್​ಬುಕ್)
ರಶ್ಮಿ ಕಲ್ಲಕಟ್ಟ
|

Updated on:Dec 28, 2020 | 5:09 PM

Share

ಅಯೋಧ್ಯೆ: ಉತ್ತರಪ್ರದೇಶದ ಸಾಕೇತ್ ಡಿಗ್ರಿ ಕಾಲೇಜಿನಲ್ಲಿ ನಡೆದ ಪ್ರತಿಭಟನೆ ವೇಳೆ ದೇಶ ವಿರೋಧಿ ಘೋಷಣೆ ಕೂಗಿದ ಆರೋಪದಲ್ಲಿ 6 ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘಟನೆಯ ಚುನಾವಣೆ ನಡೆಸದೆ ಇರುವುದನ್ನು ಪ್ರಶ್ನಿಸಿ ಡಿ.16ರಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಆಜಾದಿ ಲೇ ಕೆ ರಹೇಂಗೆ (ಸ್ವಾತಂತ್ರ್ಯ ಪಡೆದೇ ತೀರುತ್ತೇವೆ) ಎಂಬ ಘೋಷಣೆ ಕೂಗಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ಎನ್.ಡಿ. ಪಾಂಡೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ರೀತಿ ಘೋಷಣೆ ಕೂಗಿದ ವಿದ್ಯಾರ್ಥಿಗಳ ಹೆಸರನ್ನು ಪ್ರಾಂಶುಪಾಲರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಆರೋಪವನ್ನು ತಳ್ಳಿ ಹಾಕಿದ ವಿದ್ಯಾರ್ಥಿಗಳು ನಾವು ಭ್ರಷ್ಟ ಪ್ರಾಂಶುಪಾಲ ಮತ್ತು ಕಾಲೇಜಿನ ವಿದ್ಯಾರ್ಥಿ ವಿರೋಧಿ ವ್ಯವಸ್ಥೆಯಿಂದ ಆಜಾದಿ (ಸ್ವಾತಂತ್ರ್ಯ) ಬೇಕು ಎಂದು ಒತ್ತಾಯಿಸಿದ್ದೆವು ಎಂದಿದ್ದಾರೆ.

ಪ್ರಾಂಶುಪಾಲರ ದೂರಿನ ಮೇರೆಗೆ ಪೊಲೀಸರು ಸುಮಿತ್ ತಿವಾರಿ, ಶೇಷ್ ನಾರಾಯಣ್ ಪಾಂಡೆ, ಇಮ್ರಾನ್ ಹಾಶ್ಮಿ, ಸಾತ್ವಿಕ್ ಪಾಂಡೆ, ಮೋಹಿತ್ ಯಾದವ್ ಮತ್ತು ಮನೋಜ್ ಮಿಶ್ರಾ ಎಂಬ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ 124 ಎ (ದೇಶದ್ರೋಹ), 147( ಗಲಭೆ) , 188 (ಆದೇಶದ ಉಲ್ಲಂಘನೆ ), 332 (ಸಾರ್ವಜನಿಕ ಸೇವಾ ನಿರತ ಸಿಬ್ಬಂದಿಗೆ ಕರ್ತವ್ಯ ಮಾಡದಂತೆ ಅಡ್ಡಿಪಡಿಸುವುದು), 427 (ಆಸ್ತಿ ಹಾನಿ), 435 (ಬೆಂಕಿ ಅಥವಾ ಸ್ಫೋಟಕ ವಸ್ತು ಬಳಸಿ ಹಾನಿ) ಮತ್ತು 506 ( ಅಪರಾಧ ಕೃತ್ಯದ ಬೆದರಿಕೆ) ಸೆಕ್ಷನ್ ಅಡಿಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೇಶದ್ರೋಹ ಪ್ರಕರಣ: ಶಾರ್ಜೀಲ್ ಇಮಾಮ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ

Published On - 4:48 pm, Mon, 28 December 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ