AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ವಿರೋಧಿ ಘೋಷಣೆ ಆರೋಪ: ಉತ್ತರಪ್ರದೇಶದ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

ಉತ್ತರಪ್ರದೇಶದ ಸಾಕೇತ್ ಡಿಗ್ರಿ ಕಾಲೇಜಿನಲ್ಲಿ ಡಿಸೆಂಬರ್ 16ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಕೆಲವು ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆ ಕೂಗಿದ್ದರು ಎಂದು ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದರು.

ದೇಶ ವಿರೋಧಿ ಘೋಷಣೆ ಆರೋಪ: ಉತ್ತರಪ್ರದೇಶದ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ಸಾಕೇತ್ ಪಿಜಿ ಕಾಲೇಜು (ಕೃಪೆ: ಫೇಸ್​ಬುಕ್)
ರಶ್ಮಿ ಕಲ್ಲಕಟ್ಟ
|

Updated on:Dec 28, 2020 | 5:09 PM

Share

ಅಯೋಧ್ಯೆ: ಉತ್ತರಪ್ರದೇಶದ ಸಾಕೇತ್ ಡಿಗ್ರಿ ಕಾಲೇಜಿನಲ್ಲಿ ನಡೆದ ಪ್ರತಿಭಟನೆ ವೇಳೆ ದೇಶ ವಿರೋಧಿ ಘೋಷಣೆ ಕೂಗಿದ ಆರೋಪದಲ್ಲಿ 6 ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘಟನೆಯ ಚುನಾವಣೆ ನಡೆಸದೆ ಇರುವುದನ್ನು ಪ್ರಶ್ನಿಸಿ ಡಿ.16ರಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಆಜಾದಿ ಲೇ ಕೆ ರಹೇಂಗೆ (ಸ್ವಾತಂತ್ರ್ಯ ಪಡೆದೇ ತೀರುತ್ತೇವೆ) ಎಂಬ ಘೋಷಣೆ ಕೂಗಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ಎನ್.ಡಿ. ಪಾಂಡೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ರೀತಿ ಘೋಷಣೆ ಕೂಗಿದ ವಿದ್ಯಾರ್ಥಿಗಳ ಹೆಸರನ್ನು ಪ್ರಾಂಶುಪಾಲರು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈ ಆರೋಪವನ್ನು ತಳ್ಳಿ ಹಾಕಿದ ವಿದ್ಯಾರ್ಥಿಗಳು ನಾವು ಭ್ರಷ್ಟ ಪ್ರಾಂಶುಪಾಲ ಮತ್ತು ಕಾಲೇಜಿನ ವಿದ್ಯಾರ್ಥಿ ವಿರೋಧಿ ವ್ಯವಸ್ಥೆಯಿಂದ ಆಜಾದಿ (ಸ್ವಾತಂತ್ರ್ಯ) ಬೇಕು ಎಂದು ಒತ್ತಾಯಿಸಿದ್ದೆವು ಎಂದಿದ್ದಾರೆ.

ಪ್ರಾಂಶುಪಾಲರ ದೂರಿನ ಮೇರೆಗೆ ಪೊಲೀಸರು ಸುಮಿತ್ ತಿವಾರಿ, ಶೇಷ್ ನಾರಾಯಣ್ ಪಾಂಡೆ, ಇಮ್ರಾನ್ ಹಾಶ್ಮಿ, ಸಾತ್ವಿಕ್ ಪಾಂಡೆ, ಮೋಹಿತ್ ಯಾದವ್ ಮತ್ತು ಮನೋಜ್ ಮಿಶ್ರಾ ಎಂಬ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ 124 ಎ (ದೇಶದ್ರೋಹ), 147( ಗಲಭೆ) , 188 (ಆದೇಶದ ಉಲ್ಲಂಘನೆ ), 332 (ಸಾರ್ವಜನಿಕ ಸೇವಾ ನಿರತ ಸಿಬ್ಬಂದಿಗೆ ಕರ್ತವ್ಯ ಮಾಡದಂತೆ ಅಡ್ಡಿಪಡಿಸುವುದು), 427 (ಆಸ್ತಿ ಹಾನಿ), 435 (ಬೆಂಕಿ ಅಥವಾ ಸ್ಫೋಟಕ ವಸ್ತು ಬಳಸಿ ಹಾನಿ) ಮತ್ತು 506 ( ಅಪರಾಧ ಕೃತ್ಯದ ಬೆದರಿಕೆ) ಸೆಕ್ಷನ್ ಅಡಿಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೇಶದ್ರೋಹ ಪ್ರಕರಣ: ಶಾರ್ಜೀಲ್ ಇಮಾಮ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ

Published On - 4:48 pm, Mon, 28 December 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್