AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಮಹಿಳೆ ಸೇರಿದಂತೆ ಐವರು ನಕ್ಸಲರನ್ನು ಬಂಧಿಸಿದ ಭಯೋತ್ಪಾದನಾ ನಿಗ್ರಹ ದಳ

ಮಹಿಳಾ ಗುಂಪಿನ ಮುಖ್ಯಸ್ಥೆ ತಾರಾ ದೇವಿ ಸೇರಿದಂತೆ ಐವರು ನಕ್ಸಲರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಲ್ಲಿಯಾದಲ್ಲಿ ಬಂಧಿಸಿದೆ. ಸಹತ್ವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಸಂತಪುರ ಗ್ರಾಮದಲ್ಲಿ ಅಡಗಿದ್ದ ನಕ್ಸಲರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ನಕ್ಸಲೀಯ ಸಾಹಿತ್ಯ, ಕೈಬರಹದ ಸಂದೇಶಗಳು, ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ನಿಷೇಧಿತ ಸಿಪಿಐ ಮಾವೋವಾದಿ ಗುಂಪಿನೊಂದಿಗೆ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ.

ಉತ್ತರ ಪ್ರದೇಶದಲ್ಲಿ ಮಹಿಳೆ ಸೇರಿದಂತೆ ಐವರು ನಕ್ಸಲರನ್ನು ಬಂಧಿಸಿದ ಭಯೋತ್ಪಾದನಾ ನಿಗ್ರಹ ದಳ
ನಕ್ಸಲರು-ಸಾಂದರ್ಭಿಕ ಚಿತ್ರImage Credit source: Mint
ನಯನಾ ರಾಜೀವ್
|

Updated on:Aug 17, 2023 | 8:21 AM

Share

ಮಹಿಳಾ ಗುಂಪಿನ ಮುಖ್ಯಸ್ಥೆ ತಾರಾ ದೇವಿ ಸೇರಿದಂತೆ ಐವರು ನಕ್ಸಲರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಲ್ಲಿಯಾದಲ್ಲಿ ಬಂಧಿಸಿದೆ. ಸಹತ್ವಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಸಂತಪುರ ಗ್ರಾಮದಲ್ಲಿ ಅಡಗಿದ್ದ ನಕ್ಸಲರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ನಕ್ಸಲೀಯ ಸಾಹಿತ್ಯ, ಕೈಬರಹದ ಸಂದೇಶಗಳು, ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ನಿಷೇಧಿತ ಸಿಪಿಐ ಮಾವೋವಾದಿ ಗುಂಪಿನೊಂದಿಗೆ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ.

ತಾರಾ ದೇವಿ ಅಲಿಯಾಸ್ ಮಂಜು ಅವರು 2005 ರಿಂದ ನಿಷೇಧಿತ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಮತ್ತು ಬಿಹಾರದ ಮಧುಬನ್ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮತ್ತೊಬ್ಬ ಬಂಧಿತನನ್ನು ಸತ್ಯಪ್ರಕಾಶ್ ಎಂದು ಗುರುತಿಸಲಾಗಿದ್ದು, ಈತ ನಕ್ಸಲೀಯ ಸಿದ್ಧಾಂತವನ್ನು ಪ್ರತಿಪಾದಿಸುತ್ತಿದ್ದ ಮತ್ತು ರೈತರ ಸಂಘಟನೆಯನ್ನು ರೂಪಿಸಿದ ಆರೋಪ ಹೊತ್ತಿದ್ದಾನೆ.

ಪೂರ್ವಾಂಚಲ್ ಪ್ರದೇಶದಲ್ಲಿ ಸಮಿತಿ ಮತ್ತು ಗುಂಪು ಸಭೆಗಳನ್ನು ಕರೆಯುವ ಮೂಲಕ ಅವರು ನಕ್ಸಲ್ ಸಿಂಡಿಕೇಟ್ ಅನ್ನು ಮುನ್ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: Chhattisgarh: ಕುಟುಂಬಸ್ಥರ ಎದುರೇ ಬಿಜೆಪಿ ಮುಖಂಡನನ್ನು ಹತ್ಯೆ ಮಾಡಿದ ನಕ್ಸಲರು

ನಾಗ್ಪುರದಲ್ಲಿ ನಕ್ಸಲರ ಬಂಧನ ನಾಗ್ಪುರದಲ್ಲಿ ನಕ್ಸಲ್ ಸಂಘಟನೆಯ ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಸ್ವಯಂಚಾಲಿತ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸರು ಬುಧವಾರ ತಿಳಿಸಿದ್ದಾರೆ. ಅವರ ಬಳಿಯಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳ ಛಾಯಾಚಿತ್ರಗಳು ಮತ್ತು ಕೆಲವು ನಕ್ಸಲ್ ಸಾಹಿತ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಗುಂಪಿನ ನಾಯಕ ಮುರಳಿ ಅಲಿಯಾಸ್ ಮಹೇಶ್ ರೆಡ್ಡಿ, ನೆರೆ ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ. ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಸಲೇಕಸ ಮತ್ತು ದರೇಕಸ ಭೂಪ್ರದೇಶದಲ್ಲಿ ಈತ ಕಾರ್ಯಾಚರಣೆ ನಡೆಸುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಂಧಿತ ಇತರ ಮೂವರನ್ನು ಧನಂಜಯ್ ಅಲಿಯಾಸ್ ಧನ್ನು ಬುರ್ಲಿ, ನರೇಶ್ ಬನ್ಸೋಡ್ ಮತ್ತು ಅರುಣ್ ಕುಮಾರ್ ಪೆರೆರಾ ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:14 am, Thu, 17 August 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ