AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ: ಘಟನೆಯ ಸೂತ್ರಧಾರ ಸಚಿನ್ ವಾಜೆ ಎಂದು ಶಂಕೆ, ಸಿಸಿಟಿವಿ ಚಿತ್ರಣಗಳು ಏನು ಹೇಳುತ್ತಿವೆ?

ಕಾರ್​ನ್ನು ಆ್ಯಂಟೀಲಿಯಾ ಬಳಿ ಇಡುವ ಇಡೀ ಘಟನೆಯನ್ನು ಸ್ವತಃ ಸಚಿನ್ ವಾಜೆ ರೂಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಮುಲುಂದ್ ಟೋಲ್ ಕಲೆಕ್ಷನ್ ಪಾಯಿಂಟ್​ನಿಂದ ಸಂಗ್ರಹಿಸಿದ ಸಿಸಿಟಿವಿ ಫೂಟೇಜ್​ನ್ನು ರಾಷ್ಟ್ರೀಯ ತನಿಖಾ ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಮುಂಬೈ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ: ಘಟನೆಯ ಸೂತ್ರಧಾರ ಸಚಿನ್ ವಾಜೆ ಎಂದು ಶಂಕೆ, ಸಿಸಿಟಿವಿ ಚಿತ್ರಣಗಳು ಏನು ಹೇಳುತ್ತಿವೆ?
ಸಚಿನ್ ವಾಜೆ
TV9 Web
| Edited By: |

Updated on:Apr 05, 2022 | 1:15 PM

Share

ಮುಂಬೈ: ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಜಿಲೆಟಿನ್ ಪತ್ತೆ ಪ್ರಕರಣ ಹಾಗೂ ಸ್ಫೋಟಕ ಪತ್ತೆಯಾದ ಎಸ್​ಯುವಿ ಕಾರ್ ಮಾಲೀಕ/ ನಿರ್ವಹಣೆ ಹೊಣೆ ಹೊತ್ತಿದ್ದ ಉದ್ಯಮಿ ಮನ್​ಸುಖ್ ಹಿರೇನ್ ಸಾವಿಗೆ ಸಂಬಂಧಿಸಿ ಅಮಾನತು ಆಗಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಮೇಲೆ ರಾಷ್ಟ್ರೀಯ ತನಿಖಾ ದಳ ಮತ್ತೊಂದು ಅನುಮಾನ ವ್ಯಕ್ತಪಡಿಸಿದೆ. ಫೆಬ್ರವರಿ 25ರಂದು ಅಂಬಾನಿ ಮನೆ ಮುಂದೆ ಪತ್ತೆಯಾದ ಕಾರ್​ನಲ್ಲಿ ಸಿಕ್ಕಿದ್ದ ಬೆದರಿಕೆ ಪತ್ರವನ್ನು ಸಚಿನ್ ವಾಜೆ ಇಟ್ಟಿದ್ದಾರೆ ಎಂದು ಎನ್​ಐಎ ಶಂಕಿಸಿದೆ.

ಕಾರ್​ನ್ನು ಆ್ಯಂಟೀಲಿಯಾ ಬಳಿ ಇಡುವ ಇಡೀ ಘಟನೆಯನ್ನು ಸ್ವತಃ ಸಚಿನ್ ವಾಜೆ ರೂಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಮುಲುಂದ್ ಟೋಲ್ ಕಲೆಕ್ಷನ್ ಪಾಯಿಂಟ್​ನಿಂದ ಸಂಗ್ರಹಿಸಿದ ಸಿಸಿಟಿವಿ ಫೂಟೇಜ್​ನ್ನು ರಾಷ್ಟ್ರೀಯ ತನಿಖಾ ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಮುಂಬೈ ಕ್ರೈಂ ಇಂಟೆಲಿಜೆನ್ಸ್ ಯುನಿಟ್​ನಲ್ಲಿ ವಾಜೆ ಕೆಳಗೆ ಕೆಲಸ ಮಾಡುವ ಕಾನ್​ಸ್ಟೇಬಲ್ ಒಬ್ಬಾತ ಈ ಘಟನೆಯಲ್ಲಿ ಭಾಗಿಯಾಗಿದ್ದಾನೆ. ಸ್ಕಾರ್ಪಿಯೋ ಕಾರ್ ಡ್ರೈವರ್ ಕೆಲಸ ಮುಗಿಸಿ, ಇನ್ನೋವಾ ಕಾರ್​ನಲ್ಲಿ ತೆರಳಿದ್ದಾನೆ ಎಂದು ತಿಳಿದುಬಂದಿದೆ. ಸಚಿನ್ ವಾಜೆ ತನ್ನ ಥಾಣೆ ನಿವಾಸದಿಂದ ಈ ಕೆಲಸಗಳನ್ನು ಸಂಯೋಜಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

CCTV ಫೂಟೇಜ್​ನಲ್ಲಿ ಏನಿದೆ? ಸಿಸಿಟಿವಿ ಫೂಟೇಜ್ ಮೂಲಕ ತಿಳಿದುಬಂದಂತೆ, ಸುಮಾರು 3.27 AM ಹೊತ್ತಿಗೆ ಇನ್ನೋವಾ ಕಾರ್ ಮುಲುಂದ್ ಮೂಲಕವಾಗಿ ಥಾಣೆ ಪ್ರವೇಶಿಸಿದೆ. ಕಾರ್​ನ ಒಳಗೆ ಇಬ್ಬರು ಇರುವುದು ತಿಳಿದುಬಂದಿದೆ. ಅರ್ಧ ಘಂಟೆ ಬಳಿಕ, ಅಂದರೆ ಸುಮಾರು 4.03 AM ವೇಳೆಗೆ ಇನ್ನೋವಾ ಕಾರ್ ಮತ್ತೆ ಮುಂಬೈ ಪ್ರವೇಶಿಸಿರುವುದು ಕಂಡುಬಂದಿದೆ. ಆದರೆ ಈ ಬಾರಿ, ವಾಜೆ ಕಳೆದ ಒಂದು ತಿಂಗಳಿನಿಂದ ತನ್ನ ಕಚೇರಿಗೆ ತೆರಳಲು ಬಳಸುತ್ತಿದ್ದ ಕಾರ್​ನ ನಂಬರ್ ಪ್ಲೇಟ್​ನ್ನು ಈ ಕಾರ್ ಹೊಂದಿತ್ತು. ಹಾಗೂ ಮರಳುವ ವೇಳೆ ಇಬ್ಬರಿಗಿಂತ ಹೆಚ್ಚು ಪ್ರಯಾಣಿಕರು ಕಾರ್​ನಲ್ಲಿ ಇದ್ದರು. ಮೂರನೇ ವ್ಯಕ್ತಿಯನ್ನು ವಾಜೆ ಎಂದು ಶಂಕಿಸಲಾಗಿದೆ. ಎಲ್ಲರೂ ಫೇಸ್ ಶೀಲ್ಡ್ ಧರಿಸಿಕೊಂಡಿದ್ದರಿಂದ ಫೂಟೇಜ್​ನಲ್ಲಿ ಮುಖ ಸ್ಪಷ್ಟವಾಗಿ ಕಾಣಿಸಿಲ್ಲ.

ಅಂಬಾನಿ ಮನೆ ಮುಂದೆ ಪಾರ್ಕ್ ಮಾಡಲಾಗಿದ್ದ ಕಾರ್ ಕನಿಷ್ಠ 10 ನಿಮಿಷ ಅಲ್ಲೇ ನಿಂತಿತ್ತು. ಆ ವೇಳೆ ವಾಜೆ ಕೂಡ ಅಲ್ಲೇ ಇದ್ದರು ಎಂದು ತಿಳಿದುಬಂದಿದೆ. 5.18 AM ವೇಳೆಗೆ ಮುಲುಂದ್ ಟೋಲ್​ನಲ್ಲಿ ಇನ್ನೋವಾ ಕಾರ್ ಮತ್ತೆ ಥಾಣೆ ಪ್ರವೇಶಿಸುತ್ತಿರುವುದು ಕಂಡಿದ್ದು, ವಾಜೆಯನ್ನು ಮನೆಗೆ ಡ್ರಾಪ್ ಮಾಡಲು ತೆರಳಿರಬಹುದು ಎಂದು ಅಂದಾಜಿಸಲಾಗಿದೆ.

ಇನ್ನೋವಾ ಕಾರ್​ಗೆ ಬಳಸಿದ್ದ ನಕಲಿ ನಂಬರ್ ಪ್ಲೇಟನ್ನು ವಾಜೆಯ ಸಹಾಯಕ ಪೊಲೀಸ್ ಅಧಿಕಾರಿ ರಿಯಾಜುದ್ದೀನ್ ಕಾಜಿ ವಿಖ್ರೋಲಿ ಶಾಪ್​ನಲ್ಲಿ ಮಾಡಿಸಿದ್ದಾರೆ ಎಂದು ಅನುಮಾನವಿದೆ. ಆ ಸಿಸಿಟಿವಿ ಫೂಟೇಜ್​ನ್ನು ಕೂಡ ಪೊಲೀಸರು ಸಂಗ್ರಹಿಸಿದ್ದಾರೆ. ಮನ್​ಸುಖ್ ಹಿರೇನ್ ಪ್ರಕರಣದಲ್ಲಿ ಬಂಧಿತ ಪೇದೆ ವಿನಾಯಕ್ ಶಿಂಧೆ ಅವರನ್ನೂ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಸುಳ್ಳು ಹೆಸರು, ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ಸಚಿನ್ ವಾಜೆ ಪಂಚತಾರಾ ಹೊಟೇಲ್​ನಲ್ಲಿ ಉಳಿದಿದ್ದರು; ಎನ್​ಐಎ ಆರೋಪ

ವ್ಯಕ್ತಿ ವ್ಯಕ್ತಿತ್ವ: ಹಿಂದೂ ಮುಸ್ಲಿಂ ಸಾಮರಸ್ಯ, ಸೈಬರ್ ಕ್ರೈಂ ಪತ್ತೆಹಚ್ಚುವಲ್ಲಿ ಏಷ್ಯಾಕ್ಕೇ ಪ್ರಥಮ; ಸಚಿನ್ ವಾಜೆಯ ವೈವಿಧ್ಯಮಯ ವ್ಯಕ್ತಿತ್ವ

Published On - 3:50 pm, Wed, 24 March 21

Follow Us
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ