AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rupali Ganguly Joins BJP: ಅನುಪಮಾ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿಗೆ ಸೇರ್ಪಡೆ

ನಟಿ ರೂಪಾಲಿ ಗಂಗೂಲಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಅವರ ಜತೆ ನಾನೂ ಕೈಜೋಡಿಸಬೇಕೆಂಬ ಹೆಬ್ಬಯಕೆಯಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ, ಒಳ್ಳೆಯ ಕೆಲಸಗಳನ್ನು ಮಾಡುವಂತೆ ನನಗೆ ಆಶೀರ್ವಾದ ಮಾಡಿ ಎಂದು ಕೇಳಿಕೊಂಡಿದ್ದಾರೆ.

Rupali Ganguly Joins BJP: ಅನುಪಮಾ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿಗೆ ಸೇರ್ಪಡೆ
ರೂಪಾಲಿ ಗಂಗೂಲಿ
ನಯನಾ ರಾಜೀವ್
|

Updated on:May 01, 2024 | 1:06 PM

Share

ಅನುಪಮಾ ಖ್ಯಾತಿಯ ನಟಿ ರೂಪಾಲಿ ಗಂಗೂಲಿ(Rupali Ganguly) ಇಂದು ಬಿಜೆಪಿ(BJP)ಗೆ ಸೇರ್ಪಡೆಗೊಂಡಿದ್ದಾರೆ. ಬುಧವಾರ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷಕ್ಕೆ ಸೇರ್ಪಡೆಯಾದ ನಂತರ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿನ ಅಭಿವೃದ್ಧಿಯಿಂದಾಗಿ ನಾನು ಬಿಜೆಪಿಗೆ ಸೇರಿದ್ದೇನೆ ಎಂದು ನಟಿ ಹೇಳಿದರು.

ಅಭಿವೃದ್ಧಿಯ ಈ ಮಹಾಯಜ್ಞವನ್ನು ನೋಡಿದಾಗ ನನಗೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಅನಿಸುತ್ತದೆ. ನಾನು ಏನೇ ಮಾಡಿದರೂ ಸರಿಯಾಗಿ, ಒಳ್ಳೆಯದನ್ನು ಮಾಡುವಂತೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಬೆಂಬಲ ಬೇಕು ಎಂದು ಅವರು ಹೇಳಿದರು.

ಪಕ್ಷದ ಮುಖಂಡರಾದ ವಿನೋದ್ ತಾವ್ಡೆ ಮತ್ತು ಅನಿಲ್ ಬಲುನಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಮಾರ್ಚ್​ನಲ್ಲಿ ರೂಪಾಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದರು, ಬಳಿಕ ಇದು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನ, ಎಂದೂ ಮರೆಯಲು ಸಾಧ್ಯವಾಗದು, ಮೋದಿಯವರನ್ನು ಭೇಟಿಯಾಗುವ ಕನಸು ನನಸಾಯಿತು ಎಂದು ಬರೆದಿದ್ದರು.

ಮತ್ತಷ್ಟು ಓದಿ: Lok Sabha Election 2024: ಬಿಜೆಪಿಗೆ ಸಿಖ್ಖರ ಬಲ, ದೆಹಲಿಯಲ್ಲಿ 1,500 ಮಂದಿ ಸಿಖ್ಖರು ಬಿಜೆಪಿಗೆ ಸೇರ್ಪಡೆ

ರೂಪಾಲಿ ಅವರು ಸಿನಿಮಾ ನಿರ್ದೇಶಕ ಅನಿಲ್ ಗಂಗೂಲಿ ಅವರ ಪುತ್ರಿ, ನಟಿ ತನ್ನ ವೃತ್ತಿ ಜೀವನವನ್ನು 7ನೇ ವಯಸ್ಸಿನಲ್ಲಿ ಪ್ರಾರಂಭಿಸಿದರು. ಅವರು ತಮ್ಮ ತಂದೆಯ ಸಾಹೇಬ ಚಿತ್ರದಲ್ಲಿ ತಮ್ಮ ಮೊದಲ ಪಾತ್ರ ನಿರ್ವಹಿಸಿದರು. ಆದರೆ 2023ರಲ್ಲಿ ಬಂದ ಸಂಜೀವಿನಿ ಎ ಮೆಡಿಕಲ್ ಬೂನ್ ಧಾರಾವಾಹಿಯಿಂದ ರೂಪಾಳಿಗೆ ಮನ್ನಣೆ ಸಿಕ್ಕಿತ್ತು.

ನಟಿ ಬಿಗ್​ಬಾಸ್ ಸೀಸನ್​ 1ರಲ್ಲೂ ಭಾಗವಹಿಸಿದ್ದರು. ಸಾರಾಭಾಯ್ ವರ್ಸಸ್ ಸಾರಾಭಾಯ್ ನಂತಹ ಹಿಟ್​ ಶೋಗಳಲ್ಲೂ ಭಾಗವಹಿಸಿದ್ದರು. 2013ರಲ್ಲಿ ಪರ್ವರಿಶ್​ ಧಾರಾವಾಹಿ ಮಾಡಿದ ಬಳಿಕ 7 ವರ್ಷಗಳ ವಿರಾಮ ತೆಗೆದುಕೊಂಡಿದ್ದರು. ಬಳಿಕ ಅನುಪಮಾ ಮೂಲಕ ಕಿರುತೆರೆಗೆ ಬಂದರು.

ನಟರಾದ ಕಂಗನಾ ರಣಾವತ್, 6 ಬಾರಿ ಮಧ್ಯಪ್ರದೇಶದ ಶಾಸಕ ರಾಮ್​ನಿವಾಸ್ ರಾವತ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಆಪ್ತ ಸಹಾಯಕ ತಜೀಂದರ್ ಬಿಟ್ಟು ಈ ವರ್ಷ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:57 pm, Wed, 1 May 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್