Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ-ತಾಯಿ ಇಬ್ಬರನ್ನೂ ಕೋವಿಡ್- 19ನಿಂದ ಕಳೆದುಕೊಂಡ ಪ್ರತಿ ಮಗುವಿಗೆ ರೂ. 10 ಲಕ್ಷ ಎಫ್​ಡಿಗೆ ಜಗನ್ ಸೂಚನೆ

ಆಂಧ್ರಪ್ರದೇಶ ಸರ್ಕಾರದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ಕೋವಿಡ್- 19 ಸೋಂಕಿಗೆ ತಂದೆ- ತಾಯಿಯನ್ನು ಕಳೆದುಕೊಂಡ ಪ್ರತಿ ಮಗುವಿಗೆ 10 ಲಕ್ಷ ರೂ. ಎಫ್​.ಡಿ. ಮಾಡಲು ಸೂಚಿಸಿದ್ದಾರೆ.

ತಂದೆ-ತಾಯಿ ಇಬ್ಬರನ್ನೂ ಕೋವಿಡ್- 19ನಿಂದ ಕಳೆದುಕೊಂಡ ಪ್ರತಿ ಮಗುವಿಗೆ ರೂ. 10 ಲಕ್ಷ ಎಫ್​ಡಿಗೆ ಜಗನ್ ಸೂಚನೆ
ವೈ.ಎಸ್. ಜಗನ್ ಮೋಹನ್ ರೆಡ್ಡಿ (ಸಂಗ್ರಹ ಚಿತ್ರ)
Follow us
Srinivas Mata
|

Updated on: May 17, 2021 | 11:47 PM

ಅಮರಾವತಿ: ಮಧ್ಯಪ್ರದೇಶ ಹಾಗೂ ದೆಹಲಿ ಸರ್ಕಾರದ ನಂತರ ಇದೀಗ ಆಂಧ್ರಪ್ರದೇಶದ ವೈ.ಎಸ್​. ಜಗನ್​ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವು ಅಧಿಕಾರಿಗಳಿಗೆ ಸೂಚನೆ ನೀಡಿ, ಕೋವಿಡ್-19 ಸೋಂಕಿನಿಂದ ತಂದೆ- ತಾಯಿ ಇಬ್ಬರನ್ನೂ ಕಳೆದುಕೊಂಡ ಪ್ರತಿ ಮಗುವಿನ ಹೆಸರಲ್ಲಿ 10 ಲಕ್ಷ ರೂಪಾಯಿಯನ್ನು ಠೇವಣಿ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಹೇಳಿದ್ದಾರೆ. “ಕೋವಿಡ್​-19 ಎರಡನೇ ಅಲೆಯ ವಿರುದ್ಧ ಹಲವು ಮಕ್ಕಳು ಅಸುರಕ್ಷಿತರಾಗಿದ್ದಾರೆ ಹಾಗೂ ದುರ್ಬಲರಾಗಿದ್ದಾರೆ. ಅದರಲ್ಲೂ ಈ ಭೀಕರ ವೈರಸ್​ನಿಂದ ಪೋಷಕರನ್ನು ಕಳೆದುಕೊಂಡವರ ಸ್ಥಿತಿ ಕಷ್ಟವಾಗಿದೆ. ಈ ಮಕ್ಕಳ ಭವಿಷ್ಯವನ್ನು ಅರ್ಥ ಮಾಡಿಕೊಂಡು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​. ಜಗನ್ ಮೋಹನ್ ರೆಡ್ಡಿ ಅವರು ಈ ಪ್ರಮುಖ ನಿರ್ಧಾರ ಕೈಗೊಂಡು, ಪ್ರತಿ ಅನಾಧ ಮಗುವಿಗೆ ಭದ್ರತೆ ದೃಷ್ಟಿಯಿಂದ 10 ಲಕ್ಷ ರೂಪಾಯಿ ಫಿಕ್ಸೆಡ್ ಡೆಪಾಸಿಟ್ಸ್ ಮಾಡಬೇಕು ಎಂಬ ಉದ್ದೇಶ ಇಟ್ಟುಕೊಂಡಿದ್ದಾರೆ,” ರಾಜ್ಯ ಸರ್ಕಾರದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬ್ಯಾಂಕ್​ ಜತೆ ಮಾತುಕತೆ ನಡೆಸುವಂತೆ ಜಗನ್ ಮೋಹನ್ ರೆಡ್ಡಿ ತಿಳಿಸಿದ್ದು, ಆ ಮಗುವಿಗೆ 25 ವರ್ಷ ತುಂಬುವ ತನಕ ಫಿಕ್ಸೆಡ್ ಡೆಪಾಸಿಟ್ ಇರುತ್ತದೆ. ಇನ್ನು ಈ ಎಫ್​.ಡಿ. ಮೇಲೆ ಆ ಮಗುವನ್ನು ಸಾಕುವವರಿಗೆ/ಪಾಲಕರಿಗೆ ಹೆಚ್ಚಿನ ಬಡ್ಡಿ ಸಿಗುವಂತಹ ವ್ಯವಸ್ಥೆ ಆಗಬೇಕು ಮತ್ತು ಆ ಕಾರ್ಯಕ್ಕೆ ಯೋಜನೆ ರೂಪಿಸುವಂತೆ ಸೂಚಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಮೇ ಕೊನೆಯ ತನಕ ಭಾಗಶಃ ಕರ್ಫ್ಯೂ ವಿಸ್ತರಣೆಗೆ ನಿರ್ಧರಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ವೈರಸ್ ಹಬ್ಬುತ್ತಿದ್ದು, ಅಲ್ಲಿ ನಿಯಂತ್ರಣಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ ಜಗನ್ ಮೋಹನ್ ರೆಡ್ಡಿ.

ಆರೋಗ್ಯಶ್ರೀ ಕಲ್ಯಾಣ ಯೋಜನೆಯಡಿಯಲ್ಲಿ ರೋಗಿಗಳಿಗೆ ಉಚಿತ ಚಿಕಿತ್ಸೆ ದೊರೆಯಬೇಕು. ಅಂಥ ರೋಗಿಗಳಿಗೆ ಚಿಕಿತ್ಸೆ ನೀಡುವಂಥ ಆಸ್ಪತ್ರೆಗಳನ್ನು ಗುರುತಿಸಬೇಕು ಎಂದು ಅವರು ಹೇಳಿದ್ದಾರೆ. ಲಸಿಕೆ ಹಾಕುವ ವಿಚಾರಕ್ಕೆ ಬಂದರೆ, 21.74 ಲಕ್ಷ ಜನರು ಕೋವಿಡ್ ಎರಡೂ ಲಸಿಕೆ ಪಡೆದಿದ್ದಾರೆ. ಇನ್ನು 31.59 ಲಕ್ಷ ಜನರು ಮೊದಲನೇ ಡೋಸ್ ಪಡೆದಿದ್ದಾರೆ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ಆಂಧ್ರಪ್ರದೇಶದಲ್ಲಿ ಮೇ 5 ರಿಂದ 14 ದಿನಗಳ ಕಾಲ ಪಾರ್ಶಿಯಲ್ ಕರ್ಫ್ಯೂ…

(Andhra Pradesh Chief Minister Jagan Mohan Reddy instruct officials to create Rs 10 lakh FD to each child who lost parents to Covid 19)

ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ
ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ
‘ನನ್ನ ಕೊಲೆಗೆ ಡಿಕೆಶಿ ಸಹೋದರರು​ ಸೇರಿ 4 ಜನರಿಂದ ಸ್ಕೆಚ್’: ಮುನಿರತ್ನ ಆರೋಪ
‘ನನ್ನ ಕೊಲೆಗೆ ಡಿಕೆಶಿ ಸಹೋದರರು​ ಸೇರಿ 4 ಜನರಿಂದ ಸ್ಕೆಚ್’: ಮುನಿರತ್ನ ಆರೋಪ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ