
ನವದೆಹಲಿ, ಡಿಸೆಂಬರ್ 02: ಸಂಚಾರ್ ಸಾಥಿ(Sanchar Sathi) ಆ್ಯಪ್( Application) ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ದೃಢಪಡಿಸಿದ್ದು, ನಿಮಗೆ ಬೇಡವಾದ್ರೆ ಮೊಬೈಲ್ನಿಂದ ಅಪ್ಲಿಕೇಷನ್ ಡಿಲೀಟ್ ಮಾಡಿಕೊಳ್ಳಿ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟಪಡಿಸಿದ್ದಾರೆ. ನಿಮಗೆ ಆ ಅಪ್ಲಿಕೇಷನ್ ಬೇಡವಾದರೆ ಮೊಬೈಲ್ನಲ್ಲಿ ಡಿಲೀಟ್ ಮಾಡಬಹುದು. ಈ ಆ್ಯಪ್ ಅನ್ನು ಎಲ್ಲರಿಗೂ ಪರಿಚಯಿಸುವುದು ನಮ್ಮ ಕರ್ತವ್ಯ. ಅದನ್ನು ಇಟ್ಟುಕೊಳ್ಳಬೇಕೋ ಬೇಡವೋ ಎಂಬುದು ಬಳಕೆದಾರರಿಗೆ ಬಿಟ್ಟದ್ದು ಎಂದು ಹೇಳಿದ್ದಾರೆ.
ಮಾರಾಟವಾಗುತ್ತಿರುವ ಫೋನ್ಗಳ ನೈಜತೆ ಹಾಗೂ ಕಳೆದುಹೋಗಿರುವ ಫೋನ್ ಅನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗುವಂತೆ ಸರ್ಕಾರ ಈ ಅಪ್ಲಿಕೇಷನ್ ಅನ್ನು ಸಿದ್ಧಪಡಿಸಿದೆ. ಮೂರನೇ ಆಯ್ಕೆ ನಿಮ್ಮ ಮೊಬೈಲ್ ಸಂಪರ್ಕ ಮಾಹಿತಿಯನ್ನು ಪ್ರವೇಶಿಸುವುದು. ಇದರರ್ಥ ನಿಮ್ಮ ಹೆಸರಿನಲ್ಲಿ ಎಷ್ಟು ಸಂಖ್ಯೆಗಳು ಸಕ್ರಿಯವಾಗಿವೆ ಎಂಬುದನ್ನು ನೀವು ಕಂಡುಹಿಡಿಯಬಹುದು.
ಒಂದು ಸಂಖ್ಯೆ ನಿಮಗೆ ಸೇರಿಲ್ಲದಿದ್ದರೆ, ನೀವು ಈ ಅಪ್ಲಿಕೇಶನ್ ಮೂಲಕ ಅದನ್ನು ವರದಿ ಮಾಡಬಹುದು. ನಿಮ್ಮ ಹೆಸರಿನಲ್ಲಿ ಯಾರಾದರೂ ನಕಲಿ ಸಂಖ್ಯೆಯನ್ನು ಬಳಸುತ್ತಿದ್ದಾರೆಯೇ ಎಂದು ಕಂಡುಹಿಡಿಯಲು ಇದು ನಿಮಗೆ ಸಹಾಯ ಮಾಡುತ್ತದೆ.
ನವೆಂಬರ್ 28 ರಂದು ಹೊರಡಿಸಲಾದ ಮಾರ್ಗಸೂಚಿಗಳ ಪ್ರಕಾರ, 90 ದಿನಗಳ ನಂತರ ಪ್ರಾರಂಭಿಸಿ, ಭಾರತಕ್ಕೆ ತಯಾರಿಸಲಾದ ಅಥವಾ ಆಮದು ಮಾಡಿಕೊಳ್ಳುವ ಎಲ್ಲಾ ಮೊಬೈಲ್ ಫೋನ್ಗಳು ಸಂಚಾರ್ ಸಾಥಿ ಅಪ್ಲಿಕೇಶನ್ ಅನ್ನು ಮೊದಲೇ ಹೊಂದಿರಬೇಕು.
ಮತ್ತಷ್ಟು ಓದಿ:
Sanchar Sathi: ಎಲ್ಲಾ ಹಳೆ, ಹೊಸ ಮೊಬೈಲ್ ಫೋನ್ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಅಳವಡಿಕೆ ಕಡ್ಡಾಯ
ಫೋನ್ ಸೆಟಪ್ ಸಮಯದಲ್ಲಿ ಈ ಅಪ್ಲಿಕೇಶನ್ ಸುಲಭವಾಗಿ ಕಾಣಿಸಬೇಕು ಮತ್ತು ಅದನ್ನು ತೆಗೆದುಹಾಕಲು ಅಥವಾ ನಿಷ್ಕ್ರಿಯಗೊಳಿಸಲು ಸಾಧ್ಯವಾಗುವಂತೆ ಇಡಬಾರದು. ಈ ನಿಯಮವು ಆ್ಯಪಲ್, ಸ್ಯಾಮ್ಸಂಗ್, ಗೂಗಲ್, ಶಿಯೋಮಿ, ವಿವೋ ಅಥವಾ ಯಾವುದೇ ಇತರ ಬ್ರ್ಯಾಂಡ್ ಆಗಿರಲಿ ಎಲ್ಲಾ ಕಂಪನಿಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಲಾಗಿತ್ತು. ಇದೀಗ ವಿರೋಧಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ಆ್ಯಪ್ ಕಡ್ಡಾಯವಲ್ಲ ಎಂದು ಹೇಳಿದ್ದಾರೆ.
ಸಂಚಾರ್ ಸಾಥಿ ಪೋರ್ಟಲ್ ಅನ್ನು ಮೇ 2023 ರಲ್ಲಿ ತೆರೆಯಲಾಗಿದ್ದು ಅದರ ಮುಂದುವರಿದ ಭಾಗವಾಗಿ ಈ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಜನವರಿಯಲ್ಲಿ ದೂರಸಂಪರ್ಕ ಇಲಾಖೆಯು ಆಂಡ್ರಾಯ್ಡ್ ಹಾಗೂ ಐಒಎಸ್ ಬಳಕೆದಾರರಿಗೆ ಈ ಆ್ಯಪ್ ಅನ್ನು ಬಿಡುಗಡೆ ಮಾಡಿತ್ತು. ಈ ಆ್ಯಪ್ ಅನ್ನು ಇನ್ಸ್ಟಾಲ್ ಮಾಡಿದ ಬಳಿಕ ಮೊಬೈಲ್ ಕಳ್ಳತನವಾದರೆ ಅಥವಾ ಕಳೆದುಹೋದರೆ ಬ್ಲಾಕ್ ಮಾಡಬಹುದು.
ಅಷ್ಟೇ ಅಲ್ಲದೇ ಈ ಫೋನ್ ದೇಶದ ಬೇರೆ ಕಡೆ ಬಳಕೆಯಾಗುತ್ತಿದ್ದರೂ ಕಾನೂನು ಸಂಸ್ಥೆಗಳಿಗೆ ಎಲ್ಲಿ ಈ ಫೋನ್ ಸಕ್ರಿಯವಾಗಿದೆ ಎಂಬ ಮಾಹಿತಿ ಸುಲಭವಾಗಿ ಲಭ್ಯವಾಗುತ್ತದೆ.ಸೈಬರ್ ಅಪರಾಧ, ನಕಲಿ ಐಇಎಂಐ ಸಂಖ್ಯೆ ಬಳಸಿ ನಡೆಸುವ ಕೃತ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈ ಆ್ಯಪ್ ಇನ್ಸ್ಟಾಲ್ ಮಾಡಲು ಕಡ್ಡಾಯ ಮಾಡಿದೆ.
ಈಗಾಗಲೇ ತಯಾರಿಸಲಾದ ಅಥವಾ ಪ್ರಸ್ತುತ ಅಂಗಡಿಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ಮೊಬೈಲ್ ಫೋನ್ಗಳು ಸಹ ಈ ಅಪ್ಲಿಕೇಶನ್ ಅನ್ನು ಸೇರಿಸಬೇಕಾಗುತ್ತದೆ. ಕಂಪನಿಗಳು ಸಾಫ್ಟ್ವೇರ್ ನವೀಕರಣಗಳ ಮೂಲಕ ಸಂಚಾರ ಸಾಥಿ ಅಪ್ಲಿಕೇಶನ್ ಅನ್ನು ಲಭ್ಯವಾಗುವಂತೆ ಮಾಡಬೇಕಾಗುತ್ತದೆ. ತಯಾರಕರು ಮತ್ತು ಆಮದುದಾರರು ಈ ಆದೇಶವನ್ನು ಪಾಲಿಸಬೇಕು ಮತ್ತು 120 ದಿನಗಳಲ್ಲಿ ದೂರಸಂಪರ್ಕ ಇಲಾಖೆಗೆ ವರದಿಯನ್ನು ಸಲ್ಲಿಸಬೇಕಾಗುತ್ತದೆ.
ಸಂಚಾರ್ ಸಾಥಿ ವೆಬ್ಸೈಟ್ ಪ್ರಕಾರ ಇಲ್ಲಿಯವರೆಗೆ 42.14 ಲಕ್ಷಕ್ಕೂ ಹೆಚ್ಚು ಮೊಬೈಲ್ಗಳನ್ನು ನಿರ್ಬಂಧಿಸಲಾಗಿದೆ ಮತ್ತು 26.11 ಲಕ್ಷಕ್ಕೂ ಹೆಚ್ಚು ಕಳೆದುಹೋದ ಅಥವಾ ಕದ್ದ ಮೊಬೈಲ್ ಹ್ಯಾಂಡ್ಸೆಟ್ಗಳನ್ನು ಪತ್ತೆಹಚ್ಚಲಾಗಿದೆ.ಈ ಅಪ್ಲಿಕೇಶನ್ಗಳು ಬಳಕೆದಾರರ ಸಕ್ರಿಯ ಸಿಮ್ ಕಾರ್ಡ್ಗೆ ನಿರಂತರವಾಗಿ ಲಿಂಕ್ ಆಗಿರಬೇಕು. ಅಪ್ಲಿಕೇಶನ್ಗಳ ವೆಬ್ ಆವೃತ್ತಿಗಳು ಪ್ರತಿ ಆರು ಗಂಟೆಗಳಿಗೊಮ್ಮೆ ಸ್ವಯಂಚಾಲಿತವಾಗಿ ಲಾಗ್ ಔಟ್ ಆಗುತ್ತವೆ. ಮತ್ತೆ ಲಾಗಿನ್ ಆಗಲು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ ಸಾಧನವನ್ನು ಮರು-ಲಿಂಕ್ ಮಾಡಬೇಕಾಗುತ್ತದೆ. ಈ ಕಂಪನಿಗಳು 120 ದಿನಗಳಲ್ಲಿ ಆಡಿಟ್ ವರದಿಯನ್ನು ಸಲ್ಲಿಸಬೇಕಾಗುತ್ತದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:23 pm, Tue, 2 December 25