AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ರಾಹುಲ್ ಗಾಂಧಿ​ ಸೂರತ್​ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದೇನು?

ಶಿಕ್ಷೆ ಮತ್ತು ಜಾಮೀನನ್ನು ಅಮಾನತುಗೊಳಿಸುವಂತೆ ಕೋರಿ ಮಾಡಿದ ಮೇಲ್ಮನವಿಯಲ್ಲಿ ರಾಹುಲ್ ಗಾಂಧಿಯವರು ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷದ ಕಠಿಣ ಶಿಕ್ಷೆಯನ್ನು ಕೆಳ ನ್ಯಾಯಾಲಯ ನೀಡಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಎಲ್ಲ ಕಳ್ಳರ ಸರ್​​ನೇಮ್ ಮೋದಿ ಎಂದು ಯಾಕಿದೆ ? ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು.

Rahul Gandhi: ರಾಹುಲ್ ಗಾಂಧಿ​ ಸೂರತ್​ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದೇನು?
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 04, 2023 | 1:57 PM

Share

ಮುಖ್ಯಾಂಶಗಳು

  • ಸಂಸತ್ ಸದಸ್ಯ ಸ್ಥಾನವನ್ನು ಗಣನೆಗೆ ತೆಗೆದುಕೊಂಡು ಶಿಕ್ಷೆಯ ನಿರ್ಣಯದ ಹಂತದಲ್ಲಿ ತುಂಬಾ ಕಠಿಣವಾಗಿ ನಡೆಸಿಕೊಳ್ಳಲಾಯಿತು ಎಂದ ರಾಹುಲ್
  • ತನಗೆ ಅನರ್ಹತೆಯ ಆದೇಶ (ಸಂಸದ ಸ್ಥಾನಕ್ಕೆ ಅನರ್ಹತೆ) ಸಿಗುವಂತೆ ಮಾಡಲು ಗರಿಷ್ಠ ಶಿಕ್ಷೆಗಾಗಿ ವಾದಿಸಲಾಗಿತ್ತು
  • ಉಪಚುನಾವಣೆಯು ರಾಜ್ಯದ ಬೊಕ್ಕಸಕ್ಕೆ ಅಗಾಧವಾದ ಹೊರೆ ಉಂಟುಮಾಡುತ್ತದೆ ಎಂದು ಮೇಲ್ಮನವಿಯಲ್ಲಿ ಹೇಳಲಾಗಿದೆ

ಮಾನನಷ್ಟ ಮೊಕದ್ದಮೆಯಲ್ಲಿ (defamation case) ಶಿಕ್ಷೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಸೋಮವಾರ ಸೂರತ್ ನ್ಯಾಯಾಲಯದ (Surat Court) ಮೊರೆ ಹೋಗಿದ್ದಾರೆ. ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಅವರು ಸಂಸತ್ ಸದಸ್ಯ ಸ್ಥಾನವನ್ನು ಗಣನೆಗೆ ತೆಗೆದುಕೊಂಡು ಶಿಕ್ಷೆಯ ನಿರ್ಣಯದ ಹಂತದಲ್ಲಿ ಅವರನ್ನು ತುಂಬಾ ಕಠಿಣವಾಗಿ ನಡೆಸಿಕೊಳ್ಳಲಾಯಿತು. ಗರಿಷ್ಠ ಶಿಕ್ಷೆಯು ಭರಿಸಲಾಗದ ನಷ್ಟಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ ಎರಡು ವರ್ಷಗಳ ಶಿಕ್ಷೆಯ ವಿರುದ್ಧ ಸೂರತ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಮೇಲ್ಮನವಿಯಲ್ಲಿ, ತನಗೆ ಅನರ್ಹತೆಯ ಆದೇಶ (ಸಂಸದ ಸ್ಥಾನಕ್ಕೆ ಅನರ್ಹತೆ) ಸಿಗುವಂತೆ ಮಾಡಲು ಗರಿಷ್ಠ ಶಿಕ್ಷೆಗಾಗಿ ವಾದಿಸಲಾಗಿತ್ತು.  ಮಿತಿಮೀರಿದ ಶಿಕ್ಷೆಯು ವಿಷಯದ ಮೇಲಿನ ಕಾನೂನಿಗೆ ವಿರುದ್ಧವಾಗಿರುವುದು ಮಾತ್ರವಲ್ಲದೆ ಪ್ರಸ್ತುತ ಪ್ರಕರಣದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅನಪೇಕ್ಷಿತವಾಗಿದೆ ಎಂದು ಮೇಲ್ಮನವಿ ಹೇಳುತ್ತದೆ. ಶಿಕ್ಷೆಯನ್ನು ತಪ್ಪು ಎಂದಿದ್ದು, ಶಿಕ್ಷೆ ನೀಡಲು ಆಧರಿಸಿದ ವಸ್ತುವನ್ನು ಕಾನೂನಿನ ಪ್ರಕಾರ ಸಾಬೀತುಪಡಿಸಲಾಗಿಲ್ಲ ಎಂದು ಮೇಲ್ಮನವಿಯಲ್ಲಿ ಹೇಳಲಾಗಿದೆ.

ಚುನಾಯಿತ ಪ್ರತಿನಿಧಿಯ ಅನರ್ಹತೆಯು ಮುಕ್ತ ಮತ್ತು ನ್ಯಾಯಯುತ ಚುನಾವಣೆಯಲ್ಲಿ ಮತದಾರರ ಆಯ್ಕೆಗೆ ಮೂಲಭೂತವಾಗಿ ಅಡ್ಡಿಪಡಿಸುತ್ತದೆ. ಉಪಚುನಾವಣೆಯು ರಾಜ್ಯದ ಬೊಕ್ಕಸಕ್ಕೆ ಅಗಾಧವಾದ ಹೊರೆ ಉಂಟುಮಾಡುತ್ತದೆ ಎಂದು ರಾಹುಲ್ ಸಲ್ಲಿಸಿದ ಮನವಿಯಲ್ಲಿ ಹೇಳಲಾಗಿದೆ.

ಶಿಕ್ಷೆ ಮತ್ತು ಜಾಮೀನನ್ನು ಅಮಾನತುಗೊಳಿಸುವಂತೆ ಕೋರಿ ಮಾಡಿದ ಮೇಲ್ಮನವಿಯಲ್ಲಿ ರಾಹುಲ್ ಗಾಂಧಿಯವರು ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷದ ಕಠಿಣ ಶಿಕ್ಷೆಯನ್ನು ಕೆಳ ನ್ಯಾಯಾಲಯ ನೀಡಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಎಲ್ಲ ಕಳ್ಳರ ಸರ್​​ನೇಮ್ ಮೋದಿ ಎಂದು ಯಾಕಿದೆ ? ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು.

ಇದನ್ನೂ ಓದಿ: ಅರುಣಾಚಲ ಪ್ರದೇಶದ ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ಈ ರೀತಿ ಹೆಸರು ಬದಲಿಸುವುದರಿಂದ ವಾಸ್ತವತೆ ಬದಲಾಗುವುದಿಲ್ಲ ಎಂದ ಭಾರತ

ಅಂದಹಾಗೆ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ದೂರುದಾರ/ಪ್ರತಿವಾದಿ ಪೂರ್ಣೇಶ್ ಮೋದಿ “ಅಪರಾಧದಿಂದ ಬಾಧಿತ ವ್ಯಕ್ತಿಯಲ್ಲ ಮತ್ತು ದೂರು ಸಲ್ಲಿಸಲು ಯಾವುದೇ ಹಕ್ಕನ್ನು ಹೊಂದಿಲ್ಲ ಎಂದು ಮೇಲ್ಮನವಿಯಲ್ಲಿ ಹೇಳಿದೆ. ಅಷ್ಟೇ ಅಲ್ಲದೆ CrPC ಯ ಸೆಕ್ಷನ್ 202 ರ ಅಡಿಯಲ್ಲಿ ಆರೋಪಿಗೆ  ಸಮನ್ಸ್ ನೀಡುವ ಮೊದಲು ನ್ಯಾಯಾಲಯದ ನ್ಯಾಯವ್ಯಾಪ್ತಿಯ ಹೊರಗಿನಿಂದ ಕಡ್ಡಾಯ ವಿಚಾರಣೆಯನ್ನು ನಡೆಸಲಾಗಿಲ್ಲ ಎಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ